<p><strong>ಮುಂಬೈ</strong>: ಷೇರು ಮಾರುಕಟ್ಟೆ ವಂಚನೆ ಮತ್ತು ನಿಯಂತ್ರಕ ನಿಯಮಗಳ ಉಲ್ಲಂಘನೆಗಳಿಗೆ ಸಂಬಂಧಿಸಿದಂತೆ ಸೆಬಿ ಮಾಜಿ ಅಧ್ಯಕ್ಷೆ ಮಾಧವಿ ಪುರಿ ಬುಚ್ ಮತ್ತು ಇತರ ಐವರು ಅಧಿಕಾರಿಗಳ ವಿರುದ್ಧ ಎಫ್ಐಆರ್ ದಾಖಲಿಸುವಂತೆ ಇಲ್ಲಿನ ವಿಶೇಷ ನ್ಯಾಯಾಲಯವು ಭ್ರಷ್ಟಾಚಾರ ನಿಗ್ರಹ ದಳಕ್ಕೆ (ಎಸಿಬಿ) ನಿರ್ದೇಶನ ನೀಡಿದೆ.</p><p>ನಿಯಂತ್ರಕ ನಿಯಮಗಳ ಪಾಲನೆಯಲ್ಲಿ ಲೋಪಗಳು ಮತ್ತು ಒಳಸಂಚುಗಳ ಬಗ್ಗೆ ಪ್ರಾಥಮಿಕ ಹಂತದ ಸಾಕ್ಷ್ಯವಿದ್ದು, ನ್ಯಾಯಯುತ ಮತ್ತು ನಿಷ್ಪಕ್ಷಪಾತ ತನಿಖೆಯ ಅಗತ್ಯವಿದೆ ಎಂದು ವಿಶೇಷ ಎಸಿಬಿ ನ್ಯಾಯಾಲಯದ ನ್ಯಾಯಾಧೀಶ ಶಶಿಕಾಂತ್ ಏಕನಾಥರಾವ್ ಬಂಗಾರ್ ಶನಿವಾರ ನೀಡಿರುವ ಆದೇಶದಲ್ಲಿ ತಿಳಿಸಿದ್ದಾರೆ.</p><p>ನ್ಯಾಯಾಲಯವು ತನಿಖೆಯನ್ನು ಮೇಲ್ವಿಚಾರಣೆ ಮಾಡುವುದಾಗಿ ಹೇಳಿದ್ದು, 30 ದಿನಗಳಲ್ಲಿ ಪ್ರಕರಣದ ಸ್ಥಿತಿ ವರದಿಯನ್ನು ಕೇಳಿದೆ.</p><p>ಆರೋಪಗಳು ಗಂಭೀರ ಅಪರಾಧದ ಬಗ್ಗೆ ಬೆಳಕು ಚೆಲ್ಲಿವೆ. ಹಾಗಾಗಿ, ತನಿಖೆಯ ಅಗತ್ಯವಿದೆ ಎಂದು ನ್ಯಾಯಾಲಯವು ಆದೇಶದಲ್ಲಿ ತಿಳಿಸಿದೆ.</p><p>ತನಿಖಾ ಸಂಸ್ಥೆಗಳು ಮತ್ತು ಭಾರತೀಯ ಷೇರುಪೇಟೆ ನಿಯಂತ್ರಣ ಮಂಡಳಿಯ(ಸೆಬಿ) ನಿಷ್ಕ್ರಿಯತೆಯ ಹಿನ್ನೆಲೆ ಸಿಆರ್ಪಿಸಿ(ಕ್ರಿಮಿನಲ್ ಪ್ರೊಸೀಜರ್ ಕೋಡ್) ನಿಬಂಧನೆಗಳ ಅಡಿಯಲ್ಲಿ ನ್ಯಾಯಾಂಗ ಹಸ್ತಕ್ಷೇಪ ಮಾಡಬೇಕಾಯಿತು ಎಂದು ನ್ಯಾಯಾಲಯ ಹೇಳಿದೆ.</p><p>ದೂರುದಾರರು ಮಾಧ್ಯಮ ವರದಿಗಾರರಾಗಿದ್ದು, ಆರೋಪಿಗಳು ದೊಡ್ಡ ಪ್ರಮಾಣದ ಹಣಕಾಸು ವಂಚನೆ, ನಿಯಂತ್ರಕ ನಿಯಮಗಳ ಉಲ್ಲಂಘನೆ ಮತ್ತು ಭ್ರಷ್ಟಾಚಾರ ಎಸಗಿದ್ದು, ಈ ಬಗ್ಗೆ ತನಿಖೆ ನಡೆಸಬೇಕೆಂದು ಕೋರಿದ್ದರು.</p><p>ಸೆಬಿ ಅಧಿಕಾರಿಗಳು ತಮ್ಮ ಶಾಸನಬದ್ಧ ಕರ್ತವ್ಯ ಪಾಲಿಸುವಲ್ಲಿ ವಿಫಲರಾಗಿದ್ದಾರೆ. ಮಾರುಕಟ್ಟೆಯ ತಿರುಚುವಿಕೆಗೆ ಅನುವು ಮಾಡಿಕೊಟ್ಟಿದ್ದಾರೆ. ನಿಗದಿತ ಮಾನದಂಡಗಳನ್ನು ಪೂರೈಸದ ಕಂಪನಿಯ ಪಟ್ಟಿಯನ್ನು ಅನುಮತಿಸುವ ಮೂಲಕ ಕಾರ್ಪೊರೇಟ್ ವಂಚನೆಗೆ ದಾರಿಮಾಡಿಕೊಟ್ಟಿದ್ದಾರೆ ಎಂದು ದೂರುದಾರರು ಹೇಳಿದ್ದಾರೆ.</p><p>ಈ ಕುರಿತು ಹಲವು ಬಾರಿ ಪೊಲೀಸ್ ಠಾಣೆ ಹಾಗೂ ನಿಯಂತ್ರಣ ಸಂಸ್ಥೆಗಳಿಗೆ ಮನವಿ ಸಲ್ಲಿಸಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ದೂರಿದ್ದಾರೆ.</p><p>ನ್ಯಾಯಾಲಯವು ದಾಖಲೆಯಲ್ಲಿರುವ ವಿಷಯವನ್ನು ಪರಿಗಣಿಸಿದ ನಂತರ, ಐಪಿಸಿ, ಭ್ರಷ್ಟಾಚಾರ ತಡೆ ಕಾಯ್ದೆ, ಸೆಬಿ ಕಾಯ್ದೆ ಮತ್ತು ಇತರ ಅನ್ವಯವಾಗುವ ಕಾನೂನುಗಳ ಅಡಿಯಲ್ಲಿ ಎಫ್ಐಆರ್ ದಾಖಲಿಸಲು ಮುಂಬೈ ವಲಯದ ಎಸಿಬಿಗೆ ನಿರ್ದೇಶಿಸಿದೆ.</p><p>ಬುಚ್ ಸೇರಿದಂತೆ ಬಿಎಸ್ಇ ವ್ಯವಸ್ಥಾಪಕ ನಿರ್ದೇಶಕ ಮತ್ತು ಸಿಇಒ ಸುಂದರರಾಮ ರಾಮಮೂರ್ತಿ, ಅಧ್ಯಕ್ಷ ಪ್ರಮೋದ್ ಅಗರ್ವಾಲ್, ಸೆಬಿಯ ಪೂರ್ಣಕಾಲಿಕ ಸದಸ್ಯರಾದ ಅಶ್ವನಿ ಭಾಟಿಯಾ, ಜಿ. ಅನಂತ್ ನಾರಾಯಣ ಹಾಗೂ ಕಮಲೇಶ್ ಚಂದ್ರ ವಿರುದ್ಧ ಎಫ್ಐಆರ್ ದಾಖಲಿಸಲು ನ್ಯಾಯಾಧೀಶರು ಸೂಚಿಸಿದ್ದಾರೆ.</p><p>ನ್ಯಾಯಾಲಯವು ತನಿಖೆಯ ಮೇಲ್ವಿಚಾರಣೆ ನಡೆಸಲಿದ್ದು, 30 ದಿನದೊಳಗೆ ಪ್ರಕರಣದ ಸ್ಥಿತಿಗತಿ ಬಗ್ಗೆ ವರದಿ ಸಲ್ಲಿಸುವಂತೆ ನಿರ್ದೇಶಿಸಿದ್ದಾರೆ.</p><p>ಅದಾನಿ ಸಮೂಹದ ಸಾಗರೋತ್ತರ ಹೂಡಿಕೆಯಲ್ಲಿ ಮಾಧವಿ ಮತ್ತು ಅವರ ಪತಿಯು ಪಾಲುದಾರಿಕೆ ಹೊಂದಿದ್ದಾರೆ ಎಂದು ಅಮೆರಿಕದ ಶಾರ್ಟ್ ಸೆಲ್ಲರ್ ಕಂಪನಿ ಹಿಂಡನ್ಬರ್ಗ್ ರಿಸರ್ಚ್ ಆರೋಪಿಸಿತ್ತು. ಇದನ್ನು ಈ ಇಬ್ಬರು ನಿರಾಕರಿಸಿದ್ದರು. ಮಾಧವಿ ಅವರ ಮೂರು ವರ್ಷದ ಅಧಿಕಾರಾವಧಿಯು ಶುಕ್ರವಾರ ಮುಕ್ತಾಯಗೊಂಡಿದೆ.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ</strong>: ಷೇರು ಮಾರುಕಟ್ಟೆ ವಂಚನೆ ಮತ್ತು ನಿಯಂತ್ರಕ ನಿಯಮಗಳ ಉಲ್ಲಂಘನೆಗಳಿಗೆ ಸಂಬಂಧಿಸಿದಂತೆ ಸೆಬಿ ಮಾಜಿ ಅಧ್ಯಕ್ಷೆ ಮಾಧವಿ ಪುರಿ ಬುಚ್ ಮತ್ತು ಇತರ ಐವರು ಅಧಿಕಾರಿಗಳ ವಿರುದ್ಧ ಎಫ್ಐಆರ್ ದಾಖಲಿಸುವಂತೆ ಇಲ್ಲಿನ ವಿಶೇಷ ನ್ಯಾಯಾಲಯವು ಭ್ರಷ್ಟಾಚಾರ ನಿಗ್ರಹ ದಳಕ್ಕೆ (ಎಸಿಬಿ) ನಿರ್ದೇಶನ ನೀಡಿದೆ.</p><p>ನಿಯಂತ್ರಕ ನಿಯಮಗಳ ಪಾಲನೆಯಲ್ಲಿ ಲೋಪಗಳು ಮತ್ತು ಒಳಸಂಚುಗಳ ಬಗ್ಗೆ ಪ್ರಾಥಮಿಕ ಹಂತದ ಸಾಕ್ಷ್ಯವಿದ್ದು, ನ್ಯಾಯಯುತ ಮತ್ತು ನಿಷ್ಪಕ್ಷಪಾತ ತನಿಖೆಯ ಅಗತ್ಯವಿದೆ ಎಂದು ವಿಶೇಷ ಎಸಿಬಿ ನ್ಯಾಯಾಲಯದ ನ್ಯಾಯಾಧೀಶ ಶಶಿಕಾಂತ್ ಏಕನಾಥರಾವ್ ಬಂಗಾರ್ ಶನಿವಾರ ನೀಡಿರುವ ಆದೇಶದಲ್ಲಿ ತಿಳಿಸಿದ್ದಾರೆ.</p><p>ನ್ಯಾಯಾಲಯವು ತನಿಖೆಯನ್ನು ಮೇಲ್ವಿಚಾರಣೆ ಮಾಡುವುದಾಗಿ ಹೇಳಿದ್ದು, 30 ದಿನಗಳಲ್ಲಿ ಪ್ರಕರಣದ ಸ್ಥಿತಿ ವರದಿಯನ್ನು ಕೇಳಿದೆ.</p><p>ಆರೋಪಗಳು ಗಂಭೀರ ಅಪರಾಧದ ಬಗ್ಗೆ ಬೆಳಕು ಚೆಲ್ಲಿವೆ. ಹಾಗಾಗಿ, ತನಿಖೆಯ ಅಗತ್ಯವಿದೆ ಎಂದು ನ್ಯಾಯಾಲಯವು ಆದೇಶದಲ್ಲಿ ತಿಳಿಸಿದೆ.</p><p>ತನಿಖಾ ಸಂಸ್ಥೆಗಳು ಮತ್ತು ಭಾರತೀಯ ಷೇರುಪೇಟೆ ನಿಯಂತ್ರಣ ಮಂಡಳಿಯ(ಸೆಬಿ) ನಿಷ್ಕ್ರಿಯತೆಯ ಹಿನ್ನೆಲೆ ಸಿಆರ್ಪಿಸಿ(ಕ್ರಿಮಿನಲ್ ಪ್ರೊಸೀಜರ್ ಕೋಡ್) ನಿಬಂಧನೆಗಳ ಅಡಿಯಲ್ಲಿ ನ್ಯಾಯಾಂಗ ಹಸ್ತಕ್ಷೇಪ ಮಾಡಬೇಕಾಯಿತು ಎಂದು ನ್ಯಾಯಾಲಯ ಹೇಳಿದೆ.</p><p>ದೂರುದಾರರು ಮಾಧ್ಯಮ ವರದಿಗಾರರಾಗಿದ್ದು, ಆರೋಪಿಗಳು ದೊಡ್ಡ ಪ್ರಮಾಣದ ಹಣಕಾಸು ವಂಚನೆ, ನಿಯಂತ್ರಕ ನಿಯಮಗಳ ಉಲ್ಲಂಘನೆ ಮತ್ತು ಭ್ರಷ್ಟಾಚಾರ ಎಸಗಿದ್ದು, ಈ ಬಗ್ಗೆ ತನಿಖೆ ನಡೆಸಬೇಕೆಂದು ಕೋರಿದ್ದರು.</p><p>ಸೆಬಿ ಅಧಿಕಾರಿಗಳು ತಮ್ಮ ಶಾಸನಬದ್ಧ ಕರ್ತವ್ಯ ಪಾಲಿಸುವಲ್ಲಿ ವಿಫಲರಾಗಿದ್ದಾರೆ. ಮಾರುಕಟ್ಟೆಯ ತಿರುಚುವಿಕೆಗೆ ಅನುವು ಮಾಡಿಕೊಟ್ಟಿದ್ದಾರೆ. ನಿಗದಿತ ಮಾನದಂಡಗಳನ್ನು ಪೂರೈಸದ ಕಂಪನಿಯ ಪಟ್ಟಿಯನ್ನು ಅನುಮತಿಸುವ ಮೂಲಕ ಕಾರ್ಪೊರೇಟ್ ವಂಚನೆಗೆ ದಾರಿಮಾಡಿಕೊಟ್ಟಿದ್ದಾರೆ ಎಂದು ದೂರುದಾರರು ಹೇಳಿದ್ದಾರೆ.</p><p>ಈ ಕುರಿತು ಹಲವು ಬಾರಿ ಪೊಲೀಸ್ ಠಾಣೆ ಹಾಗೂ ನಿಯಂತ್ರಣ ಸಂಸ್ಥೆಗಳಿಗೆ ಮನವಿ ಸಲ್ಲಿಸಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ದೂರಿದ್ದಾರೆ.</p><p>ನ್ಯಾಯಾಲಯವು ದಾಖಲೆಯಲ್ಲಿರುವ ವಿಷಯವನ್ನು ಪರಿಗಣಿಸಿದ ನಂತರ, ಐಪಿಸಿ, ಭ್ರಷ್ಟಾಚಾರ ತಡೆ ಕಾಯ್ದೆ, ಸೆಬಿ ಕಾಯ್ದೆ ಮತ್ತು ಇತರ ಅನ್ವಯವಾಗುವ ಕಾನೂನುಗಳ ಅಡಿಯಲ್ಲಿ ಎಫ್ಐಆರ್ ದಾಖಲಿಸಲು ಮುಂಬೈ ವಲಯದ ಎಸಿಬಿಗೆ ನಿರ್ದೇಶಿಸಿದೆ.</p><p>ಬುಚ್ ಸೇರಿದಂತೆ ಬಿಎಸ್ಇ ವ್ಯವಸ್ಥಾಪಕ ನಿರ್ದೇಶಕ ಮತ್ತು ಸಿಇಒ ಸುಂದರರಾಮ ರಾಮಮೂರ್ತಿ, ಅಧ್ಯಕ್ಷ ಪ್ರಮೋದ್ ಅಗರ್ವಾಲ್, ಸೆಬಿಯ ಪೂರ್ಣಕಾಲಿಕ ಸದಸ್ಯರಾದ ಅಶ್ವನಿ ಭಾಟಿಯಾ, ಜಿ. ಅನಂತ್ ನಾರಾಯಣ ಹಾಗೂ ಕಮಲೇಶ್ ಚಂದ್ರ ವಿರುದ್ಧ ಎಫ್ಐಆರ್ ದಾಖಲಿಸಲು ನ್ಯಾಯಾಧೀಶರು ಸೂಚಿಸಿದ್ದಾರೆ.</p><p>ನ್ಯಾಯಾಲಯವು ತನಿಖೆಯ ಮೇಲ್ವಿಚಾರಣೆ ನಡೆಸಲಿದ್ದು, 30 ದಿನದೊಳಗೆ ಪ್ರಕರಣದ ಸ್ಥಿತಿಗತಿ ಬಗ್ಗೆ ವರದಿ ಸಲ್ಲಿಸುವಂತೆ ನಿರ್ದೇಶಿಸಿದ್ದಾರೆ.</p><p>ಅದಾನಿ ಸಮೂಹದ ಸಾಗರೋತ್ತರ ಹೂಡಿಕೆಯಲ್ಲಿ ಮಾಧವಿ ಮತ್ತು ಅವರ ಪತಿಯು ಪಾಲುದಾರಿಕೆ ಹೊಂದಿದ್ದಾರೆ ಎಂದು ಅಮೆರಿಕದ ಶಾರ್ಟ್ ಸೆಲ್ಲರ್ ಕಂಪನಿ ಹಿಂಡನ್ಬರ್ಗ್ ರಿಸರ್ಚ್ ಆರೋಪಿಸಿತ್ತು. ಇದನ್ನು ಈ ಇಬ್ಬರು ನಿರಾಕರಿಸಿದ್ದರು. ಮಾಧವಿ ಅವರ ಮೂರು ವರ್ಷದ ಅಧಿಕಾರಾವಧಿಯು ಶುಕ್ರವಾರ ಮುಕ್ತಾಯಗೊಂಡಿದೆ.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>