ಸರ್ಚಾರ್ಜ್ ವಿಧಿಸುವ ಬಜೆಟ್ ಪ್ರಸ್ತಾವನೆಯು ವಿದೇಶಿ ಹೂಡಿಕೆದಾರರನ್ನು ನಿರುತ್ಸಾಹಗೊಳಿಸಿತ್ತು. ಷೇರುಪೇಟೆಯ ವಹಿವಾಟು ನಿರಂತರ ಕುಸಿತ ಕಾಣುತ್ತ ಬಂದಿತ್ತು. ಈ ಪ್ರತಿಕೂಲ ಬೆಳವಣಿಗೆ ಹಿನ್ನೆಲೆಯಲ್ಲಿ ಷೇರು ವಹಿವಾಟುದಾರರು ಮತ್ತು ವಿದೇಶಿ ಹೂಡಿಕೆದಾರರ ಪ್ರತಿನಿಧಿಗಳು ಸಚಿವೆ ನಿರ್ಮಲಾ ಅವರನ್ನು ಭೇಟಿಯಾಗಿ ಸರ್ಚಾರ್ಜ್ ರದ್ದುಪಡಿಸುವುದೂ ಸೇರಿದಂತೆ ಹಲವಾರು ಬೇಡಿಕೆಗಳನ್ನು ಈಡೇರಿಸಲು ಮನವಿ ಮಾಡಿಕೊಂಡಿದ್ದರು.