<p><strong>ಬಾಳೆಹೊನ್ನೂರು (ಚಿಕ್ಕಮಗಳೂರು):</strong> ‘ದೇಶದಲ್ಲಿ ಮುಂದಿನ 10 ವರ್ಷಗಳಲ್ಲಿ 7 ಲಕ್ಷ ಟನ್ ಕಾಫಿ ಉತ್ಪಾದನೆಯ ಗುರಿ ಹೊಂದಲಾಗಿದೆ’ ಎಂದು ಕಾಫಿ ಮಂಡಳಿ ಅಧ್ಯಕ್ಷ ಎಂ.ಜೆ. ದಿನೇಶ್ ದೇವವೃಂದ ತಿಳಿಸಿದರು.</p>.<p>ಜಗದ್ಗುರು ರೇಣುಕಾಚಾರ್ಯ ಜಯಂತಿ ಯುಗಮಾನೋತ್ಸವ ಹಾಗೂ ಕ್ಷೇತ್ರನಾಥ ವೀರಭದ್ರಸ್ವಾಮಿ ಮಹಾರಥೋತ್ಸವದ ಪ್ರಯುಕ್ತ ರಂಭಾಪುರಿ ಪೀಠದಲ್ಲಿ ನಡೆದ ಕೃಷಿ ಮೇಳದಲ್ಲಿ ‘ಕಾಫಿಯ ಕಣ, ಚಿಂತನ ಕಣಜ’ ಎಂಬ ವಿಷಯ ಕುರಿತು ಅವರು ಮಾತನಾಡಿದರು.</p>.<p>‘ಕಾಫಿ ತೋಟಗಳಲ್ಲಿ ಅನುಭವಿ ಮೇಲ್ವಿಚಾರಕರು ಮತ್ತು ನುರಿತ ವ್ಯವಸ್ಥಾಪಕರ ಕೊರತೆ ಕಂಡು ಬರುತ್ತಿದೆ. ಇದನ್ನು ಪರಿಹರಿಸುವುದಕ್ಕಾಗಿ ಕಾಫಿ ಸಂಶೋಧನಾ ಕೇಂದ್ರದಲ್ಲಿ ಎಸ್ಟೇಟ್ ಮ್ಯಾನೇಜ್ಮೆಂಟ್ ತರಬೇತಿ ಹಮ್ಮಿಕೊಳ್ಳಲಾಗಿದೆ’ ಎಂದರು. </p>.<p>‘ಇಂಡಿಕಾ’ ಬ್ರ್ಯಾಂಡ್ನಡಿ ಗುಣಮಟ್ಟದ ಕಾಫಿ ತಲುಪಿಸುವುದಕ್ಕೆ ಚಿಂತನೆ ನಡೆದಿದೆ. ಅದರ ಅಂಗವಾಗಿ ಕೆಫೆ ತೆರೆಯಲು ತರಬೇತಿ ನೀಡಲಾಗುತ್ತಿದೆ. ಡಿಸೆಂಬರ್ ಬಳಿಕ ಯೂರೋಪ್ ಒಕ್ಕೂಟ ನೆರಳು ರಹಿತ ಕಾಫಿ ಖರೀದಿಯನ್ನು ನಿಲ್ಲಿಸಲಿದ್ದು ನೆರಳಿನಡಿ ಕಾಫಿ ಬೆಳೆಯುವ ಭಾರತಕ್ಕೆ ಈ ನಿರ್ಧಾರ ವರವಾಗಲಿದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಾಳೆಹೊನ್ನೂರು (ಚಿಕ್ಕಮಗಳೂರು):</strong> ‘ದೇಶದಲ್ಲಿ ಮುಂದಿನ 10 ವರ್ಷಗಳಲ್ಲಿ 7 ಲಕ್ಷ ಟನ್ ಕಾಫಿ ಉತ್ಪಾದನೆಯ ಗುರಿ ಹೊಂದಲಾಗಿದೆ’ ಎಂದು ಕಾಫಿ ಮಂಡಳಿ ಅಧ್ಯಕ್ಷ ಎಂ.ಜೆ. ದಿನೇಶ್ ದೇವವೃಂದ ತಿಳಿಸಿದರು.</p>.<p>ಜಗದ್ಗುರು ರೇಣುಕಾಚಾರ್ಯ ಜಯಂತಿ ಯುಗಮಾನೋತ್ಸವ ಹಾಗೂ ಕ್ಷೇತ್ರನಾಥ ವೀರಭದ್ರಸ್ವಾಮಿ ಮಹಾರಥೋತ್ಸವದ ಪ್ರಯುಕ್ತ ರಂಭಾಪುರಿ ಪೀಠದಲ್ಲಿ ನಡೆದ ಕೃಷಿ ಮೇಳದಲ್ಲಿ ‘ಕಾಫಿಯ ಕಣ, ಚಿಂತನ ಕಣಜ’ ಎಂಬ ವಿಷಯ ಕುರಿತು ಅವರು ಮಾತನಾಡಿದರು.</p>.<p>‘ಕಾಫಿ ತೋಟಗಳಲ್ಲಿ ಅನುಭವಿ ಮೇಲ್ವಿಚಾರಕರು ಮತ್ತು ನುರಿತ ವ್ಯವಸ್ಥಾಪಕರ ಕೊರತೆ ಕಂಡು ಬರುತ್ತಿದೆ. ಇದನ್ನು ಪರಿಹರಿಸುವುದಕ್ಕಾಗಿ ಕಾಫಿ ಸಂಶೋಧನಾ ಕೇಂದ್ರದಲ್ಲಿ ಎಸ್ಟೇಟ್ ಮ್ಯಾನೇಜ್ಮೆಂಟ್ ತರಬೇತಿ ಹಮ್ಮಿಕೊಳ್ಳಲಾಗಿದೆ’ ಎಂದರು. </p>.<p>‘ಇಂಡಿಕಾ’ ಬ್ರ್ಯಾಂಡ್ನಡಿ ಗುಣಮಟ್ಟದ ಕಾಫಿ ತಲುಪಿಸುವುದಕ್ಕೆ ಚಿಂತನೆ ನಡೆದಿದೆ. ಅದರ ಅಂಗವಾಗಿ ಕೆಫೆ ತೆರೆಯಲು ತರಬೇತಿ ನೀಡಲಾಗುತ್ತಿದೆ. ಡಿಸೆಂಬರ್ ಬಳಿಕ ಯೂರೋಪ್ ಒಕ್ಕೂಟ ನೆರಳು ರಹಿತ ಕಾಫಿ ಖರೀದಿಯನ್ನು ನಿಲ್ಲಿಸಲಿದ್ದು ನೆರಳಿನಡಿ ಕಾಫಿ ಬೆಳೆಯುವ ಭಾರತಕ್ಕೆ ಈ ನಿರ್ಧಾರ ವರವಾಗಲಿದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>