<p><strong>ನವದೆಹಲಿ:</strong> ಹೊಸ ನೇರ ತೆರಿಗೆ ಸಂಹಿತೆ (ಡಿಟಿಸಿ) ಸಿದ್ಧಪಡಿಸಲು ರಚಿಸಲಾಗಿದ್ದ ಕಾರ್ಯಪಡೆಯು ತೆರಿಗೆ ವಿಷಯಗಳಲ್ಲಿ ದೂರಗಾಮಿ ಪರಿಣಾಮಬೀರಬಹುದಾದ ತನ್ನ ವರದಿಯನ್ನು ಸೋಮವಾರ ಕೇಂದ್ರ ಸರ್ಕಾರಕ್ಕೆ ಸಲ್ಲಿಸಿದೆ.</p>.<p>ಒಂದು ವೇಳೆ ಕೇಂದ್ರ ಸರ್ಕಾರವು ಈ ವರದಿಯನ್ನು ಯಥಾವತ್ತಾಗಿ ಒಪ್ಪಿಕೊಂಡರೆ, ವೈಯಕ್ತಿಕ ಆದಾಯ ತೆರಿಗೆ ದರಗಳು ಗಮನಾರ್ಹವಾಗಿ ಕಡಿಮೆಯಾಗಲಿವೆ. ಆದಾಯದ ಮೇಲಿನ ಸರ್ಚಾರ್ಜ್ ರದ್ದಾಗಲಿದೆ, ಕಂಪನಿಗಳು ತಮ್ಮ ಲಾಭಾಂಶಕ್ಕೆ ತೆರಿಗೆ ಸಲ್ಲಿಸುವ ಅಗತ್ಯ ಇರಲಾರದು.</p>.<p>ವೈಯಕ್ತಿಕ ಆದಾಯ, ಕಾರ್ಪೊರೇಟ್ ವರಮಾನ ತೆರಿಗೆಗೆ ಸಂಬಂಧಿಸಿದಂತೆ ಅಂತರರಾಷ್ಟ್ರೀಯ ಮಟ್ಟದಲ್ಲಿ ಜಾರಿಯಲ್ಲಿ ಇರುವ ನಿಯಮಗಳಿಗೆ ಅನುಗುಣವಾಗಿ ಈ ವರದಿ ಸಿದ್ಧಪಡಿಸಲಾಗಿದೆ.</p>.<p>ಸದ್ಯಕ್ಕೆ ಜಾರಿಯಲ್ಲಿ ಇರುವ ಆದಾಯ ತೆರಿಗೆ ಸ್ವರೂಪದಲ್ಲಿ ಹಲವಾರು ಬದಲಾವಣೆಗಳನ್ನು ಸೂಚಿಸಲಾಗಿದೆ. ನೇರ ತೆರಿಗೆಯ ಸ್ವರೂಪವನ್ನು ಗಮನಾರ್ಹವಾಗಿ ಸರಳಗೊಳಿಸಿದೆ.</p>.<p>ಎರಡು ಸಂಪುಟಗಳಲ್ಲಿ ವರದಿ ಸಲ್ಲಿಸಲಾಗಿದೆ. ತೆರಿಗೆ ದರ ಇಳಿಸುವ, ತೆರಿಗೆ ಹಂತಗಳ ಸರಳೀಕರಣ, ತೆರಿಗೆ ಸಲ್ಲಿಕೆ ಪ್ರಕ್ರಿಯೆ ಸುಲಭಗೊಳಿಸುವ, ತೆರಿಗೆ ವ್ಯಾಜ್ಯಗಳ ಸಂಖ್ಯೆ ಕಡಿಮೆ ಮಾಡುವ ಶಿಫಾರಸುಗಳನ್ನು ವರದಿ ಒಳಗೊಂಡಿದೆ. ಆದಾಯ ತೆರಿಗೆಯ ಹೊರೆ ಗಮನಾರ್ಹವಾಗಿ ಕಡಿಮೆಯಾಗಲಿದೆ ಎಂದು ಮೂಲಗಳು ತಿಳಿಸಿವೆ.</p>.<p class="Subhead"><strong>ಸರ್ಚಾರ್ಜ್ಗೆ ಆಕ್ಷೇಪ: </strong>ಆದಾಯದ ಮೇಲೆ ಸರ್ಚಾರ್ಜ್ ವಿಧಿಸುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿರುವ ಸಮಿತಿಯು, ಒಂದು ವೇಳೆ ಅನಿವಾರ್ಯವಾಗಿ ವಿಧಿಸಿದರೂ ಅದು ತಾತ್ಕಾಲಿಕ ನೆಲೆಯಲ್ಲಿ ಇರಬೇಕು ಎಂದು ಸೂಚಿಸಿದೆ.</p>.<p class="Subhead">ಈ ಬಾರಿಯ ಬಜೆಟ್ನಲ್ಲಿ ₹ 2 ಕೋಟಿ ಮತ್ತು ₹ 5 ಕೋಟಿ ವರಮಾನಕ್ಕೆ ಕ್ರಮವಾಗಿ ಶೇ 25 ಮತ್ತು ಶೇ 37ರಷ್ಟು ಸರ್ಜಾರ್ಜ್ ವಿಧಿಸಲಾಗಿದೆ. ಇದು ಅತಿ ಶ್ರೀಮಂತರ ಪಾಲಿಗೆ ಹೊರೆಯಾಗಿ ಪರಿಣಮಿಸಿದೆ.</p>.<p>ಸದ್ಯಕ್ಕೆ ಬಳಕೆಯಲ್ಲಿ ಇರುವ ಆದಾಯ ತೆರಿಗೆ ಕಾಯ್ದೆಯ ಬದಲಿಗೆ ಹೊಸ ನೇರ ತೆರಿಗೆ ಸಂಹಿತೆಯನ್ನು ಮುಂದಿನ ಹಣಕಾಸು ವರ್ಷದಿಂದ (2020–21) ಜಾರಿಗೆ ತರಲು ಉದ್ದೇಶಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಹೊಸ ನೇರ ತೆರಿಗೆ ಸಂಹಿತೆ (ಡಿಟಿಸಿ) ಸಿದ್ಧಪಡಿಸಲು ರಚಿಸಲಾಗಿದ್ದ ಕಾರ್ಯಪಡೆಯು ತೆರಿಗೆ ವಿಷಯಗಳಲ್ಲಿ ದೂರಗಾಮಿ ಪರಿಣಾಮಬೀರಬಹುದಾದ ತನ್ನ ವರದಿಯನ್ನು ಸೋಮವಾರ ಕೇಂದ್ರ ಸರ್ಕಾರಕ್ಕೆ ಸಲ್ಲಿಸಿದೆ.</p>.<p>ಒಂದು ವೇಳೆ ಕೇಂದ್ರ ಸರ್ಕಾರವು ಈ ವರದಿಯನ್ನು ಯಥಾವತ್ತಾಗಿ ಒಪ್ಪಿಕೊಂಡರೆ, ವೈಯಕ್ತಿಕ ಆದಾಯ ತೆರಿಗೆ ದರಗಳು ಗಮನಾರ್ಹವಾಗಿ ಕಡಿಮೆಯಾಗಲಿವೆ. ಆದಾಯದ ಮೇಲಿನ ಸರ್ಚಾರ್ಜ್ ರದ್ದಾಗಲಿದೆ, ಕಂಪನಿಗಳು ತಮ್ಮ ಲಾಭಾಂಶಕ್ಕೆ ತೆರಿಗೆ ಸಲ್ಲಿಸುವ ಅಗತ್ಯ ಇರಲಾರದು.</p>.<p>ವೈಯಕ್ತಿಕ ಆದಾಯ, ಕಾರ್ಪೊರೇಟ್ ವರಮಾನ ತೆರಿಗೆಗೆ ಸಂಬಂಧಿಸಿದಂತೆ ಅಂತರರಾಷ್ಟ್ರೀಯ ಮಟ್ಟದಲ್ಲಿ ಜಾರಿಯಲ್ಲಿ ಇರುವ ನಿಯಮಗಳಿಗೆ ಅನುಗುಣವಾಗಿ ಈ ವರದಿ ಸಿದ್ಧಪಡಿಸಲಾಗಿದೆ.</p>.<p>ಸದ್ಯಕ್ಕೆ ಜಾರಿಯಲ್ಲಿ ಇರುವ ಆದಾಯ ತೆರಿಗೆ ಸ್ವರೂಪದಲ್ಲಿ ಹಲವಾರು ಬದಲಾವಣೆಗಳನ್ನು ಸೂಚಿಸಲಾಗಿದೆ. ನೇರ ತೆರಿಗೆಯ ಸ್ವರೂಪವನ್ನು ಗಮನಾರ್ಹವಾಗಿ ಸರಳಗೊಳಿಸಿದೆ.</p>.<p>ಎರಡು ಸಂಪುಟಗಳಲ್ಲಿ ವರದಿ ಸಲ್ಲಿಸಲಾಗಿದೆ. ತೆರಿಗೆ ದರ ಇಳಿಸುವ, ತೆರಿಗೆ ಹಂತಗಳ ಸರಳೀಕರಣ, ತೆರಿಗೆ ಸಲ್ಲಿಕೆ ಪ್ರಕ್ರಿಯೆ ಸುಲಭಗೊಳಿಸುವ, ತೆರಿಗೆ ವ್ಯಾಜ್ಯಗಳ ಸಂಖ್ಯೆ ಕಡಿಮೆ ಮಾಡುವ ಶಿಫಾರಸುಗಳನ್ನು ವರದಿ ಒಳಗೊಂಡಿದೆ. ಆದಾಯ ತೆರಿಗೆಯ ಹೊರೆ ಗಮನಾರ್ಹವಾಗಿ ಕಡಿಮೆಯಾಗಲಿದೆ ಎಂದು ಮೂಲಗಳು ತಿಳಿಸಿವೆ.</p>.<p class="Subhead"><strong>ಸರ್ಚಾರ್ಜ್ಗೆ ಆಕ್ಷೇಪ: </strong>ಆದಾಯದ ಮೇಲೆ ಸರ್ಚಾರ್ಜ್ ವಿಧಿಸುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿರುವ ಸಮಿತಿಯು, ಒಂದು ವೇಳೆ ಅನಿವಾರ್ಯವಾಗಿ ವಿಧಿಸಿದರೂ ಅದು ತಾತ್ಕಾಲಿಕ ನೆಲೆಯಲ್ಲಿ ಇರಬೇಕು ಎಂದು ಸೂಚಿಸಿದೆ.</p>.<p class="Subhead">ಈ ಬಾರಿಯ ಬಜೆಟ್ನಲ್ಲಿ ₹ 2 ಕೋಟಿ ಮತ್ತು ₹ 5 ಕೋಟಿ ವರಮಾನಕ್ಕೆ ಕ್ರಮವಾಗಿ ಶೇ 25 ಮತ್ತು ಶೇ 37ರಷ್ಟು ಸರ್ಜಾರ್ಜ್ ವಿಧಿಸಲಾಗಿದೆ. ಇದು ಅತಿ ಶ್ರೀಮಂತರ ಪಾಲಿಗೆ ಹೊರೆಯಾಗಿ ಪರಿಣಮಿಸಿದೆ.</p>.<p>ಸದ್ಯಕ್ಕೆ ಬಳಕೆಯಲ್ಲಿ ಇರುವ ಆದಾಯ ತೆರಿಗೆ ಕಾಯ್ದೆಯ ಬದಲಿಗೆ ಹೊಸ ನೇರ ತೆರಿಗೆ ಸಂಹಿತೆಯನ್ನು ಮುಂದಿನ ಹಣಕಾಸು ವರ್ಷದಿಂದ (2020–21) ಜಾರಿಗೆ ತರಲು ಉದ್ದೇಶಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>