<p><strong>ನವದೆಹಲಿ:</strong> ಏರ್ ಇಂಡಿಯಾ ವಿಮಾನ ಅಪಘಾತದ ಸಂತ್ರಸ್ತರಿಗಾಗಿ ಟಾಟಾ ಸನ್ಸ್ ಮತ್ತು ಟಾಟಾ ಟ್ರಸ್ಟ್ ₹500 ಕೋಟಿ ಮೊತ್ತದ ಕ್ಷೇಮಾಭಿವೃದ್ಧಿ ಟ್ರಸ್ಟ್ ಅನ್ನು ಸ್ಥಾಪನೆ ಮಾಡಿವೆ.</p>.<p>ಎಐ–171 ಕ್ಷೇಮಾಭಿವೃದ್ಧಿ ಟ್ರಸ್ಟ್ ಹೆಸರಿನಲ್ಲಿ ಮುಂಬೈನಲ್ಲಿ ಟ್ರಸ್ಟ್ ನೋಂದಣಿಯಾಗಿದೆ. </p>.<p>ಅಪಘಾತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ₹1 ಕೋಟಿ ಪರಿಹಾರ ಪಾವತಿ ಸೇರಿದಂತೆ ಲೋಕೋಪಕಾರಿ ಉದ್ದೇಶಗಳಿಗಾಗಿ ಟಾಟಾ ಸನ್ಸ್ ಮತ್ತು ಟಾಟಾ ಟ್ರಸ್ಟ್ಗಳು ಟ್ರಸ್ಟ್ಗೆ ತಲಾ ₹250 ಕೋಟಿ ಕೊಡುಗೆ ನೀಡಲು ಬದ್ಧವಾಗಿವೆ ಎಂದು ಶುಕ್ರವಾರ ತಿಳಿಸಿವೆ.</p>.<p>ದುರಂತದಲ್ಲಿ ತೀವ್ರ ಗಾಯಗೊಂಡಿರುವವರಿಗೆ ವೈದ್ಯಕೀಯ ಚಿಕಿತ್ಸೆ ನೀಡಲಾಗುವುದು. ಅಲ್ಲದೆ, ಅಪಘಾತದಲ್ಲಿ ಹಾನಿಗೀಡಾದ ಬಿ.ಜೆ.ವೈದ್ಯಕೀಯ ಕಾಲೇಜಿನ ವಸತಿ ನಿಲಯ ಸಮುಚ್ಚಯದ ಪುನಃ ನಿರ್ಮಾಣ ಮಾಡಲಾಗುವುದು ಎಂದು ತಿಳಿಸಿದೆ.</p>.<p>ಜೂನ್ 12ರಂದು ಅಹಮದಾಬಾದ್ನಿಂದ ಲಂಡನ್ಗೆ ಪ್ರಯಾಣಿಸುತ್ತಿದ್ದ ಏರ್ ಇಂಡಿಯಾ ವಿಮಾನ, ಟೇಕಾಫ್ ಆದ ಕೂಡಲೇ ಅಪಘಾತಕ್ಕೆ ಒಳಗಾಗಿತ್ತು. ಈ ಅಪಘಾತದಲ್ಲಿ 260 ಮಂದಿ ಮೃತಪಟ್ಟಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಏರ್ ಇಂಡಿಯಾ ವಿಮಾನ ಅಪಘಾತದ ಸಂತ್ರಸ್ತರಿಗಾಗಿ ಟಾಟಾ ಸನ್ಸ್ ಮತ್ತು ಟಾಟಾ ಟ್ರಸ್ಟ್ ₹500 ಕೋಟಿ ಮೊತ್ತದ ಕ್ಷೇಮಾಭಿವೃದ್ಧಿ ಟ್ರಸ್ಟ್ ಅನ್ನು ಸ್ಥಾಪನೆ ಮಾಡಿವೆ.</p>.<p>ಎಐ–171 ಕ್ಷೇಮಾಭಿವೃದ್ಧಿ ಟ್ರಸ್ಟ್ ಹೆಸರಿನಲ್ಲಿ ಮುಂಬೈನಲ್ಲಿ ಟ್ರಸ್ಟ್ ನೋಂದಣಿಯಾಗಿದೆ. </p>.<p>ಅಪಘಾತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ₹1 ಕೋಟಿ ಪರಿಹಾರ ಪಾವತಿ ಸೇರಿದಂತೆ ಲೋಕೋಪಕಾರಿ ಉದ್ದೇಶಗಳಿಗಾಗಿ ಟಾಟಾ ಸನ್ಸ್ ಮತ್ತು ಟಾಟಾ ಟ್ರಸ್ಟ್ಗಳು ಟ್ರಸ್ಟ್ಗೆ ತಲಾ ₹250 ಕೋಟಿ ಕೊಡುಗೆ ನೀಡಲು ಬದ್ಧವಾಗಿವೆ ಎಂದು ಶುಕ್ರವಾರ ತಿಳಿಸಿವೆ.</p>.<p>ದುರಂತದಲ್ಲಿ ತೀವ್ರ ಗಾಯಗೊಂಡಿರುವವರಿಗೆ ವೈದ್ಯಕೀಯ ಚಿಕಿತ್ಸೆ ನೀಡಲಾಗುವುದು. ಅಲ್ಲದೆ, ಅಪಘಾತದಲ್ಲಿ ಹಾನಿಗೀಡಾದ ಬಿ.ಜೆ.ವೈದ್ಯಕೀಯ ಕಾಲೇಜಿನ ವಸತಿ ನಿಲಯ ಸಮುಚ್ಚಯದ ಪುನಃ ನಿರ್ಮಾಣ ಮಾಡಲಾಗುವುದು ಎಂದು ತಿಳಿಸಿದೆ.</p>.<p>ಜೂನ್ 12ರಂದು ಅಹಮದಾಬಾದ್ನಿಂದ ಲಂಡನ್ಗೆ ಪ್ರಯಾಣಿಸುತ್ತಿದ್ದ ಏರ್ ಇಂಡಿಯಾ ವಿಮಾನ, ಟೇಕಾಫ್ ಆದ ಕೂಡಲೇ ಅಪಘಾತಕ್ಕೆ ಒಳಗಾಗಿತ್ತು. ಈ ಅಪಘಾತದಲ್ಲಿ 260 ಮಂದಿ ಮೃತಪಟ್ಟಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>