<p><strong>ನವದೆಹಲಿ:</strong> ತತ್ಕಾಲ್ ಟಿಕೆಟ್ ಬುಕ್ಕಿಂಗ್ ವ್ಯವಸ್ಥೆಯ ದುರುಪಯೋಗ ತಡೆಯುವುದಕ್ಕಾಗಿ ರೈಲ್ವೆ ಇಲಾಖೆ ಹೊಸ ನಿಯವನ್ನು ಜಾರಿಗೆ ತಂದಿದೆ. ಆ ಪ್ರಕಾರ, ಇನ್ನು ಮುಂದೆ, ತತ್ಕಾಲ್ ಟಿಕೆಟ್ ಬುಕ್ಕಿಂಗ್ ಮಾಡುವ ಪ್ರಯಾಣಿಕರು ತಮ್ಮ ಮೊಬೈಲ್ ಫೋನ್ಗೆ ಕಳುಹಿಸಲಾಗುವ ಒಟಿಪಿ(ಒನ್ ಟೈಮ್ ಪಾಸ್ವರ್ಡ್) ಹೇಳಿ, ಕೌಂಟರ್ನಿಂದ ಟಿಕೆಟ್ ಪಡೆಯಬೇಕು ಎಂದು ರೈಲ್ವೆ ಸಚಿವಾಲಯದ ಪ್ರಕಟಣೆ ತಿಳಿಸಿದೆ.</p>.<p>‘ಈ ಒಟಿಪಿ ಆಧಾರಿತ ತತ್ಕಾಲ್ ಟಿಕೆಟ್ ಪಡೆಯುವ ವ್ಯವಸ್ಥೆಯನ್ನು ನವೆಂಬರ್ 17ರಿಂದ ಆಯ್ದ 52 ರೈಲುಗಳಲ್ಲಿ ಪ್ರಾಯೋಗಿಕವಾಗಿ ಅಳವಡಿಸಿ, ಪರಿಶೀಲಿಸಲಾಗಿದೆ. ತುರ್ತು ಟಿಕೆಟ್ ಕಾಯ್ದಿರಿಸುವ ವ್ಯವಸ್ಥೆಯನ್ನು ಮತ್ತಷ್ಟು ಪ್ರಯಾಣಿಕಸ್ನೇಹಿ ಆಗಿಸಲು ಹೊಸ ವ್ಯವಸ್ಥೆಯನ್ನು ಜಾರಿಗೊಳಿಸಲಾಗಿದೆ. ಶೀಘ್ರದಲ್ಲೇ ಈ ವ್ಯವಸ್ಥೆಯನ್ನು ಎಲ್ಲ ರೈಲು ನಿಲ್ದಾಣಗಳಿಗೂ ಅನ್ವಯಿಸಲಾಗುವುದು’ ಎಂದು ಸಚಿವಾಲಯ ಪ್ರಕಟಣೆಯಲ್ಲಿ ತಿಳಿಸಿದೆ. </p>.<p>ರೈಲ್ವೆ ಇಲಾಖೆ ಇದೇ ಅಕ್ಟೋಬರ್ 1ರಿಂದ ಐಆರ್ಸಿಟಿಸಿಯಲ್ಲಿ ಆನ್ಲೈನ್ನಲ್ಲಿ ಟಿಕೆಟ್ ಬುಕ್ ಮಾಡುವವರಿಗೆ ಆಧಾರ್ ದೃಢೀಕರಣವನ್ನು ಕಡ್ಡಾಯಗೊಳಿಸಿತ್ತು. ಟಿಕೆಟ್ ಬುಕ್ಕಿಂಗ್ ವ್ಯವಸ್ಥೆಯನ್ನುಸುಧಾರಿಸುವ ಹಾಗೂ ಏಜೆಂಟರ ಹಾವಳಿ ತಪ್ಪಿಸುವ ಸಲುವಾಗಿ ಇಲಾಖೆ ಇಂಥ ಹಲವು ಹೊಸ ಯೋಜನೆಗಳನ್ನು ಜಾರಿಗೊಳಿಸುತ್ತಿದೆ’ ಎಂದು ಸಚಿವಾಲಯ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ತತ್ಕಾಲ್ ಟಿಕೆಟ್ ಬುಕ್ಕಿಂಗ್ ವ್ಯವಸ್ಥೆಯ ದುರುಪಯೋಗ ತಡೆಯುವುದಕ್ಕಾಗಿ ರೈಲ್ವೆ ಇಲಾಖೆ ಹೊಸ ನಿಯವನ್ನು ಜಾರಿಗೆ ತಂದಿದೆ. ಆ ಪ್ರಕಾರ, ಇನ್ನು ಮುಂದೆ, ತತ್ಕಾಲ್ ಟಿಕೆಟ್ ಬುಕ್ಕಿಂಗ್ ಮಾಡುವ ಪ್ರಯಾಣಿಕರು ತಮ್ಮ ಮೊಬೈಲ್ ಫೋನ್ಗೆ ಕಳುಹಿಸಲಾಗುವ ಒಟಿಪಿ(ಒನ್ ಟೈಮ್ ಪಾಸ್ವರ್ಡ್) ಹೇಳಿ, ಕೌಂಟರ್ನಿಂದ ಟಿಕೆಟ್ ಪಡೆಯಬೇಕು ಎಂದು ರೈಲ್ವೆ ಸಚಿವಾಲಯದ ಪ್ರಕಟಣೆ ತಿಳಿಸಿದೆ.</p>.<p>‘ಈ ಒಟಿಪಿ ಆಧಾರಿತ ತತ್ಕಾಲ್ ಟಿಕೆಟ್ ಪಡೆಯುವ ವ್ಯವಸ್ಥೆಯನ್ನು ನವೆಂಬರ್ 17ರಿಂದ ಆಯ್ದ 52 ರೈಲುಗಳಲ್ಲಿ ಪ್ರಾಯೋಗಿಕವಾಗಿ ಅಳವಡಿಸಿ, ಪರಿಶೀಲಿಸಲಾಗಿದೆ. ತುರ್ತು ಟಿಕೆಟ್ ಕಾಯ್ದಿರಿಸುವ ವ್ಯವಸ್ಥೆಯನ್ನು ಮತ್ತಷ್ಟು ಪ್ರಯಾಣಿಕಸ್ನೇಹಿ ಆಗಿಸಲು ಹೊಸ ವ್ಯವಸ್ಥೆಯನ್ನು ಜಾರಿಗೊಳಿಸಲಾಗಿದೆ. ಶೀಘ್ರದಲ್ಲೇ ಈ ವ್ಯವಸ್ಥೆಯನ್ನು ಎಲ್ಲ ರೈಲು ನಿಲ್ದಾಣಗಳಿಗೂ ಅನ್ವಯಿಸಲಾಗುವುದು’ ಎಂದು ಸಚಿವಾಲಯ ಪ್ರಕಟಣೆಯಲ್ಲಿ ತಿಳಿಸಿದೆ. </p>.<p>ರೈಲ್ವೆ ಇಲಾಖೆ ಇದೇ ಅಕ್ಟೋಬರ್ 1ರಿಂದ ಐಆರ್ಸಿಟಿಸಿಯಲ್ಲಿ ಆನ್ಲೈನ್ನಲ್ಲಿ ಟಿಕೆಟ್ ಬುಕ್ ಮಾಡುವವರಿಗೆ ಆಧಾರ್ ದೃಢೀಕರಣವನ್ನು ಕಡ್ಡಾಯಗೊಳಿಸಿತ್ತು. ಟಿಕೆಟ್ ಬುಕ್ಕಿಂಗ್ ವ್ಯವಸ್ಥೆಯನ್ನುಸುಧಾರಿಸುವ ಹಾಗೂ ಏಜೆಂಟರ ಹಾವಳಿ ತಪ್ಪಿಸುವ ಸಲುವಾಗಿ ಇಲಾಖೆ ಇಂಥ ಹಲವು ಹೊಸ ಯೋಜನೆಗಳನ್ನು ಜಾರಿಗೊಳಿಸುತ್ತಿದೆ’ ಎಂದು ಸಚಿವಾಲಯ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>