‘ಕಂಪನಿಗಳ ತೆರಿಗೆ ಹೊರೆ ಇಳಿಯುವುದರಿಂದ ವಿದೇಶಿ ಹೂಡಿಕೆ ಪ್ರಮಾಣ ಹೆಚ್ಚಳಗೊಳ್ಳಲಿದೆ. ಹೊಸ ತಯಾರಿಕಾ ಘಟಕಗಳಿಗೆ ಹೆಚ್ಚಿನ ಪ್ರಯೋಜನ ದೊರೆಯಲಿದೆ. ಷೇರುಪೇಟೆಗೆ ಮರಳಿರುವ ಚೇತರಿಕೆಯು ತಯಾರಿಕಾ ಚಟುವಟಿಕೆಗಳನ್ನು ಹೆಚ್ಚಿಸಿ ಉದ್ಯೋಗ ಸೃಷ್ಟಿಗೆ ನೆರವಾಗಲಿದೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬಜೆಟ್ ಮಂಡನೆ ನಂತರ ಕೈಗೊಂಡಿರುವ ಅತಿದೊಡ್ಡ ದಿಟ್ಟ ನಿರ್ಧಾರ ಇದಾಗಿದೆ’ ಎಂದು ಎಫ್ಕೆಸಿಸಿಐ ಅಧ್ಯಕ್ಷ ಸಿ.ಆರ್. ಜನಾರ್ದನ ಅವರು ಪ್ರತಿಕ್ರಿಯಿಸಿದ್ದಾರೆ.