<p><strong>ಮುಂಬೈ</strong> : ಗುತ್ತಿಗೆ ನೌಕರರ ನೇಮಕ ಸಂಬಂಧ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಕಂಪನಿಯಲ್ಲಿನ ಆರು ಉದ್ಯೋಗಿಗಳು ಗುತ್ತಿಗೆ ಸಂಸ್ಥೆಗಳಿಂದ ಕೆಲವು ಅನುಕೂಲಗಳನ್ನು ಪಡೆದುಕೊಂಡಿರುವುದು ಗೊತ್ತಾಗಿದೆ. ಹೀಗಾಗಿ ಅವರ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ ಎಂದು ಟಾಟಾ ಸನ್ಸ್ನ ಅಧ್ಯಕ್ಷ ಎನ್. ಚಂದ್ರಶೇಖರನ್ ಗುರುವಾರ ತಿಳಿಸಿದ್ದಾರೆ.</p>.<p>ಟಿಸಿಎಸ್ನ ವಾರ್ಷಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಗುತ್ತಿಗೆ ನೌಕರರ ನೇಮಕ ಸಂಬಂಧ ಇನ್ನೂ ಮೂರು ಉದ್ಯೋಗಿಗಳ ಪಾತ್ರದ ಕುರಿತಾಗಿಯೂ ತನಿಖೆ ನಡೆಯುತ್ತಿದೆ ಎಂದು ಹೇಳಿದ್ದಾರೆ.</p>.<p>ಆರು ಉದ್ಯೋಗಿಗಳನ್ನು ಅಮಾನತು ಮಾಡಲಾಗಿದ್ದು, ಗುತ್ತಿಗೆ ಆಧಾರದಲ್ಲಿ ನೇಮಕ ಮಾಡುವ ಆರು ಕಂಪನಿಗಳನ್ನು ಸಹ ನಿಷೇಧಿಸಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.</p>.<p>ಫೆಬ್ರುವರಿ ತಿಂಗಳ ಅಂತ್ಯದ ವೇಳೆಗೆ ಮತ್ತು ಮಾರ್ಚ್ನಲ್ಲಿ ಕಂಪನಿಗೆ ಎರಡು ಪ್ರತ್ಯೇಕ ಅನಾಮಧೇಯ ದೂರುಗಳು ಬಂದಿವೆ. ಮೊದಲನೆಯದು ಅಮೆರಿಕದಲ್ಲಿ ಬಿಸಿನೆಸ್ ಸಹಾಯಕ ಅಥವಾ ಗುತ್ತಿಗೆ ನೌಕರರ ನೇಮಕ ಮತ್ತು ಎರಡನೆಯದು ಭಾರತದಲ್ಲಿ ನೇಮಕ ಆಗಿರುವುದಕ್ಕೆ ಸಂಬಂಧಿಸಿದ್ದು ಎಂದು ಅವರು ತಿಳಿಸಿದ್ದಾರೆ.</p>.<p>ಅಮಾನತು ಮಾಡಿರುವ ಈ ಉದ್ಯೋಗಿಗಳು ಯಾವ ಸ್ವರೂಪದ ಅನುಕೂಲಗಳನ್ನು ಪಡೆದುಕೊಂಡಿದ್ದಾರೆ ಎಂದು ಹೇಳಲು ಆಗುವುದಿಲ್ಲ. ಆದರೆ, ಕೆಲವು ನಿರ್ದಿಷ್ಟ ಕಂಪನಿಗಳ ಪರವಾಗಿರುವ ರೀತಿ ಅವರು ವರ್ತಿಸಿದ್ದಾರೆ ಎಂದು ಚಂದ್ರಶೇಖರನ್ ಹೇಳಿದ್ದಾರೆ.</p>.<p>ಬಿಸಿನೆಸ್ ಸಹಾಯಕರ (ಬಿ.ಎ) ನೇಮಕ ಪ್ರಕ್ರಿಯೆಯನ್ನು ಸೂಕ್ಷ್ಮವಾಗಿ ಪರಿಶೀಲಿಸಲಾಗುವುದು. ಪ್ರಕ್ರಿಯೆಯು ಎಲ್ಲಿ ದುರ್ಬಲವಾಗಿದೆ ಎಂಬುದನ್ನು ಕಂಡುಕೊಂಡು ಅದನ್ನು ಸರಿಪಡಿಸಲಾಗುವುದು. ಇಂತಹ ಘಟನೆಗಳು ಮರುಕಳಿಸದಂತೆ ಮಾಡಲಾಗುವುದು ಎಂದು ಅವರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ</strong> : ಗುತ್ತಿಗೆ ನೌಕರರ ನೇಮಕ ಸಂಬಂಧ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಕಂಪನಿಯಲ್ಲಿನ ಆರು ಉದ್ಯೋಗಿಗಳು ಗುತ್ತಿಗೆ ಸಂಸ್ಥೆಗಳಿಂದ ಕೆಲವು ಅನುಕೂಲಗಳನ್ನು ಪಡೆದುಕೊಂಡಿರುವುದು ಗೊತ್ತಾಗಿದೆ. ಹೀಗಾಗಿ ಅವರ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ ಎಂದು ಟಾಟಾ ಸನ್ಸ್ನ ಅಧ್ಯಕ್ಷ ಎನ್. ಚಂದ್ರಶೇಖರನ್ ಗುರುವಾರ ತಿಳಿಸಿದ್ದಾರೆ.</p>.<p>ಟಿಸಿಎಸ್ನ ವಾರ್ಷಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಗುತ್ತಿಗೆ ನೌಕರರ ನೇಮಕ ಸಂಬಂಧ ಇನ್ನೂ ಮೂರು ಉದ್ಯೋಗಿಗಳ ಪಾತ್ರದ ಕುರಿತಾಗಿಯೂ ತನಿಖೆ ನಡೆಯುತ್ತಿದೆ ಎಂದು ಹೇಳಿದ್ದಾರೆ.</p>.<p>ಆರು ಉದ್ಯೋಗಿಗಳನ್ನು ಅಮಾನತು ಮಾಡಲಾಗಿದ್ದು, ಗುತ್ತಿಗೆ ಆಧಾರದಲ್ಲಿ ನೇಮಕ ಮಾಡುವ ಆರು ಕಂಪನಿಗಳನ್ನು ಸಹ ನಿಷೇಧಿಸಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.</p>.<p>ಫೆಬ್ರುವರಿ ತಿಂಗಳ ಅಂತ್ಯದ ವೇಳೆಗೆ ಮತ್ತು ಮಾರ್ಚ್ನಲ್ಲಿ ಕಂಪನಿಗೆ ಎರಡು ಪ್ರತ್ಯೇಕ ಅನಾಮಧೇಯ ದೂರುಗಳು ಬಂದಿವೆ. ಮೊದಲನೆಯದು ಅಮೆರಿಕದಲ್ಲಿ ಬಿಸಿನೆಸ್ ಸಹಾಯಕ ಅಥವಾ ಗುತ್ತಿಗೆ ನೌಕರರ ನೇಮಕ ಮತ್ತು ಎರಡನೆಯದು ಭಾರತದಲ್ಲಿ ನೇಮಕ ಆಗಿರುವುದಕ್ಕೆ ಸಂಬಂಧಿಸಿದ್ದು ಎಂದು ಅವರು ತಿಳಿಸಿದ್ದಾರೆ.</p>.<p>ಅಮಾನತು ಮಾಡಿರುವ ಈ ಉದ್ಯೋಗಿಗಳು ಯಾವ ಸ್ವರೂಪದ ಅನುಕೂಲಗಳನ್ನು ಪಡೆದುಕೊಂಡಿದ್ದಾರೆ ಎಂದು ಹೇಳಲು ಆಗುವುದಿಲ್ಲ. ಆದರೆ, ಕೆಲವು ನಿರ್ದಿಷ್ಟ ಕಂಪನಿಗಳ ಪರವಾಗಿರುವ ರೀತಿ ಅವರು ವರ್ತಿಸಿದ್ದಾರೆ ಎಂದು ಚಂದ್ರಶೇಖರನ್ ಹೇಳಿದ್ದಾರೆ.</p>.<p>ಬಿಸಿನೆಸ್ ಸಹಾಯಕರ (ಬಿ.ಎ) ನೇಮಕ ಪ್ರಕ್ರಿಯೆಯನ್ನು ಸೂಕ್ಷ್ಮವಾಗಿ ಪರಿಶೀಲಿಸಲಾಗುವುದು. ಪ್ರಕ್ರಿಯೆಯು ಎಲ್ಲಿ ದುರ್ಬಲವಾಗಿದೆ ಎಂಬುದನ್ನು ಕಂಡುಕೊಂಡು ಅದನ್ನು ಸರಿಪಡಿಸಲಾಗುವುದು. ಇಂತಹ ಘಟನೆಗಳು ಮರುಕಳಿಸದಂತೆ ಮಾಡಲಾಗುವುದು ಎಂದು ಅವರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>