ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎನ್‌ಸಿಎಲ್‌ಎಟಿ ವಿರುದ್ಧ ಸುಪ್ರೀಂಗೆ ಟಿಸಿಎಸ್‌

ಟಾಟಾ ಸನ್ಸ್‌ಗೆ ಅಧ್ಯಕ್ಷರಾಗಿ ಸೈರಸ್‌ ಮಿಸ್ತ್ರಿ ಮರುನೇಮಕ ಆದೇಶ
Last Updated 4 ಜನವರಿ 2020, 18:00 IST
ಅಕ್ಷರ ಗಾತ್ರ

ನವದೆಹಲಿ:ಟಾಟಾ ಸನ್ಸ್‌ನ ಪದಚ್ಯುತ ಅಧ್ಯಕ್ಷ ಸೈರಸ್‌ ಮಿಸ್ತ್ರಿ ವಿರುದ್ಧ ಟಾಟಾ ಕನ್ಸಲ್ಟೆನ್ಸಿ ಸರ್ವೀಸಸ್‌ (ಟಿಸಿಎಸ್‌) ಸಹ ಸುಪ್ರೀಂಕೋರ್ಟ್‌ ಮೆಟ್ಟಿಲೇರಿದೆ.

ಮಿಸ್ತ್ರಿ ಅವರನ್ನು ಮರುನೇಮಕ ಮಾಡಿಕೊಳ್ಳಬೇಕೆಂಬರಾಷ್ಟ್ರೀಯ ಕಂಪನಿ ಕಾಯ್ದೆ ಮೇಲ್ಮನವಿ ನ್ಯಾಯಮಂಡಳಿಯ (ಎನ್‌ಸಿಎಲ್‌ಎಟಿ) ಆದೇಶವನ್ನು ರದ್ದು ಮಾಡುವಂತೆ ಮನವಿ ಸಲ್ಲಿಸಿರುವುದಾಗಿ ಷೇರುಪೇಟೆಗೆ ಮಾಹಿತಿ ನೀಡಿದೆ.

ಆದೇಶವನ್ನು ಪ್ರಶ್ನಿಸಿ,ಟಾಟಾ ಸನ್ಸ್ ಕೂಡಾ ಸುಪ್ರೀಂಕೋರ್ಟ್‌ಗೆಈಗಾಗಲೇ ಅರ್ಜಿ ಸಲ್ಲಿಸಿದೆ.

ಟಾಟಾ ಸನ್ಸ್‌ನ ವಿಶ್ರಾಂತ ಅಧ್ಯಕ್ಷರಾಗಿರುವ ರತನ್‌ ಟಾಟಾ ಅವರೂ ಶುಕ್ರವಾರ ಪ್ರತ್ಯೇಕ ಅರ್ಜಿ ಸಲ್ಲಿಸಿದ್ದಾರೆ. ‘ನ್ಯಾಯಮಂಡಳಿ ಆದೇಶವು ದೋಷಪೂರಿತವಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ವಿರೋಧಾಭಾಸಗಳಿಂದ ಕೂಡಿದೆ’ ಎಂದು ರತನ್‌ ಅರ್ಜಿಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT