‘ನಮ್ಮ ಭಾಗದಿಂದ ಉತ್ತರ ಭಾರತದ ರಾಜ್ಯಗಳಿಗೆ ಹೆಚ್ಚಿನ ಪ್ರಮಾಣದಲ್ಲಿ ಕೊಬ್ಬರಿ ರವಾನೆಯಾಗುತ್ತದೆ. ಆಯುಧ ಪೂಜೆ, ದೀಪಾವಳಿ ಸಮಯದಲ್ಲಿ ಸಿಹಿ ತಿಂಡಿಗೆ ಹೆಚ್ಚು ಬಳಕೆಯಾಗುತ್ತದೆ. ಆದರೂ ಈ ಬಾರಿ ಬೆಲೆ ಚೇತರಿಸಿಕೊಂಡಿಲ್ಲ. ಜತೆಗೆ ದೆಹಲಿ ಸೇರಿದಂತೆ ಉತ್ತರದ ರಾಜ್ಯಗಳಲ್ಲಿ ಸಾಕಷ್ಟು ಪ್ರಮಾಣದಲ್ಲಿ ಮಳೆಯಾಗಿದ್ದು, ಈಗಾಗಲೇ ಶೀತದ ವಾತಾವರಣ ನಿರ್ಮಾಣವಾಗಿದೆ. ಇಂತಹ ಸಮಯದಲ್ಲಿ ಕೊಬ್ಬರಿ ಬಳಕೆ ಕಡಿಮೆ ಇರುತ್ತದೆ. ಹಾಗಾಗಿ ಬೆಲೆ ಕುಸಿಯುತ್ತದೆ’ ಎಂದು ಮಾರುಕಟ್ಟೆ ಮೂಲಗಳು ತಿಳಿಸಿವೆ.