<p><strong>ಬೆಂಗಳೂರು:</strong>ಉಂಡೆ ಕೊಬ್ಬರಿ ಕ್ವಿಂಟಲ್ಗೆ ತಲಾ ₹11,300 ಬೆಂಬಲ ಬೆಲೆ ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದೆ.</p>.<p>ವಿಧಾನಸೌಧದಲ್ಲಿ ಗುರುವಾರ ನಡೆದ ಕೃಷಿ ಮತ್ತು ತೋಟಗಾರಿಕೆ ಉತ್ಪನ್ನಗಳ ಬೆಲೆ ಸ್ಥಿರೀಕರಣ ಸಚಿವ ಸಂಪುಟ ಉಪಸಮಿತಿ ಸಭೆಯಲ್ಲಿ ಈ ತೀರ್ಮಾನ ತೆಗೆದುಕೊಂಡಿರುವುದಾಗಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಹೇಳಿದರು.</p>.<p>ಕೇಂದ್ರ ಸರ್ಕಾರ ಉಂಡೆ ಕೊಬ್ಬರಿಗೆ ಕ್ವಿಂಟಲ್ಗೆ ₹10,300 ಬೆಂಬಲ ಬೆಲೆ ನಿಗದಿ ಮಾಡಿತ್ತು. ರೈತರಿಗೆ ಇನ್ನೂ ಹೆಚ್ಚಿನ ಬೆಂಬಲ ಬೆಲೆ ಸಿಗಬೇಕು ಎಂಬ ಕಾರಣಕ್ಕೆ, ರೈತರ ಬೇಡಿಕೆ ಮನ್ನಿಸಿ, ಕ್ವಿಂಟಲ್ಗೆ ₹1,000 ನೀಡಲು ತೀರ್ಮಾನಿಸಲಾಯಿತು. ಈ ಮೊತ್ತವನ್ನು ರಾಜ್ಯ ಸರ್ಕಾರವೇ ಭರಿಸಲಿದೆ. ಇದರಿಂದ ಪ್ರತಿ ರೈತರಿಗೆ ಒಂದು ಕ್ವಿಂಟಲ್ಗೆ ₹11,300 ಬೆಂಬಲ ಬೆಲೆ ಸಿಕ್ಕಂತಾಗುತ್ತದೆ ಎಂದು ಅವರು ಹೇಳಿದರು.</p>.<p>ಇದರಿಂದ ರಾಜ್ಯ ಸರ್ಕಾರಕ್ಕೆ ₹38 ಕೋಟಿ ಹೊರೆ ಆಗಲಿದೆ. ಆದರೆ, ಈ ನಿರ್ಧಾರದಿಂದ ಚಿತ್ರದುರ್ಗ, ತುಮಕೂರು, ಹಾಸನ, ಮಂಡ್ಯ, ಮೈಸೂರು, ದಕ್ಷಿಣ ಕನ್ನಡ ಮತ್ತು ಚಿಕ್ಕಮಗಳೂರು ಜಿಲ್ಲೆಯ ಬೆಳೆಗಾರರಿಗೆ ಪ್ರಯೋಜನವಾಗುತ್ತದೆ ಎಂದು ಸವದಿ ತಿಳಿಸಿದರು.</p>.<p>ಅಲ್ಲದೆ, ಖರೀದಿ ನೋಂದಣಿ ಅವಧಿಯನ್ನು ಇದೇ 25 ರವರೆಗೆ ವಿಸ್ತರಿಸಲಾಗಿದೆ. ಖರೀದಿ ಕಾಲಾವಧಿಯನ್ನು ಸೆಪ್ಟಂಬರ್ 10 ರವರೆಗೆ ವಿಸ್ತರಿಸಲಾಗಿದೆ ಎಂದರು.</p>.<p>ಸಭೆಯಲ್ಲಿ ಗೃಹ ಸಚಿವ ಬಸವರಾಜ ಬೊಮ್ಮಾಯಿ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ.ಮಾಧುಸ್ವಾಮಿ, ಆಹಾರ ಮತ್ತು ನಾಗರೀಕ ಪೂರೈಕೆ ಸಚಿವ ಕೆ.ಗೋಪಾಲಯ್ಯ ಪಶುಸಂಗೋಪನೆ ಸಚಿವ ಪ್ರಭು ಚವ್ಹಾಣ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong>ಉಂಡೆ ಕೊಬ್ಬರಿ ಕ್ವಿಂಟಲ್ಗೆ ತಲಾ ₹11,300 ಬೆಂಬಲ ಬೆಲೆ ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದೆ.</p>.<p>ವಿಧಾನಸೌಧದಲ್ಲಿ ಗುರುವಾರ ನಡೆದ ಕೃಷಿ ಮತ್ತು ತೋಟಗಾರಿಕೆ ಉತ್ಪನ್ನಗಳ ಬೆಲೆ ಸ್ಥಿರೀಕರಣ ಸಚಿವ ಸಂಪುಟ ಉಪಸಮಿತಿ ಸಭೆಯಲ್ಲಿ ಈ ತೀರ್ಮಾನ ತೆಗೆದುಕೊಂಡಿರುವುದಾಗಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಹೇಳಿದರು.</p>.<p>ಕೇಂದ್ರ ಸರ್ಕಾರ ಉಂಡೆ ಕೊಬ್ಬರಿಗೆ ಕ್ವಿಂಟಲ್ಗೆ ₹10,300 ಬೆಂಬಲ ಬೆಲೆ ನಿಗದಿ ಮಾಡಿತ್ತು. ರೈತರಿಗೆ ಇನ್ನೂ ಹೆಚ್ಚಿನ ಬೆಂಬಲ ಬೆಲೆ ಸಿಗಬೇಕು ಎಂಬ ಕಾರಣಕ್ಕೆ, ರೈತರ ಬೇಡಿಕೆ ಮನ್ನಿಸಿ, ಕ್ವಿಂಟಲ್ಗೆ ₹1,000 ನೀಡಲು ತೀರ್ಮಾನಿಸಲಾಯಿತು. ಈ ಮೊತ್ತವನ್ನು ರಾಜ್ಯ ಸರ್ಕಾರವೇ ಭರಿಸಲಿದೆ. ಇದರಿಂದ ಪ್ರತಿ ರೈತರಿಗೆ ಒಂದು ಕ್ವಿಂಟಲ್ಗೆ ₹11,300 ಬೆಂಬಲ ಬೆಲೆ ಸಿಕ್ಕಂತಾಗುತ್ತದೆ ಎಂದು ಅವರು ಹೇಳಿದರು.</p>.<p>ಇದರಿಂದ ರಾಜ್ಯ ಸರ್ಕಾರಕ್ಕೆ ₹38 ಕೋಟಿ ಹೊರೆ ಆಗಲಿದೆ. ಆದರೆ, ಈ ನಿರ್ಧಾರದಿಂದ ಚಿತ್ರದುರ್ಗ, ತುಮಕೂರು, ಹಾಸನ, ಮಂಡ್ಯ, ಮೈಸೂರು, ದಕ್ಷಿಣ ಕನ್ನಡ ಮತ್ತು ಚಿಕ್ಕಮಗಳೂರು ಜಿಲ್ಲೆಯ ಬೆಳೆಗಾರರಿಗೆ ಪ್ರಯೋಜನವಾಗುತ್ತದೆ ಎಂದು ಸವದಿ ತಿಳಿಸಿದರು.</p>.<p>ಅಲ್ಲದೆ, ಖರೀದಿ ನೋಂದಣಿ ಅವಧಿಯನ್ನು ಇದೇ 25 ರವರೆಗೆ ವಿಸ್ತರಿಸಲಾಗಿದೆ. ಖರೀದಿ ಕಾಲಾವಧಿಯನ್ನು ಸೆಪ್ಟಂಬರ್ 10 ರವರೆಗೆ ವಿಸ್ತರಿಸಲಾಗಿದೆ ಎಂದರು.</p>.<p>ಸಭೆಯಲ್ಲಿ ಗೃಹ ಸಚಿವ ಬಸವರಾಜ ಬೊಮ್ಮಾಯಿ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ.ಮಾಧುಸ್ವಾಮಿ, ಆಹಾರ ಮತ್ತು ನಾಗರೀಕ ಪೂರೈಕೆ ಸಚಿವ ಕೆ.ಗೋಪಾಲಯ್ಯ ಪಶುಸಂಗೋಪನೆ ಸಚಿವ ಪ್ರಭು ಚವ್ಹಾಣ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>