ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಡದಿ ಘಟಕದ ಸಿಬ್ಬಂದಿಗೆ ಸ್ವಯಂ ನಿವೃತ್ತಿಗೆ ಸೂಚಿಸಿದ ಟೊಯೋಟ

Last Updated 6 ಅಕ್ಟೋಬರ್ 2019, 20:00 IST
ಅಕ್ಷರ ಗಾತ್ರ

ನವದೆಹಲಿ: ಟೊಯೋಟ ಕಿರ್ಲೋಸ್ಕರ್‌ ಮೋಟರ್‌ (ಟಿಕೆಎಂ) ಕಂಪನಿಯು ಕರ್ನಾಟಕದ ಬಿಡದಿಯಲ್ಲಿರುವ ತನ್ನ ತಯಾರಿಕಾ ಘಟಕದ ಸಿಬ್ಬಂದಿಗೆ ಸ್ವಯಂ ನಿವೃತ್ತಿ ಯೋಜನೆಯನ್ನು (ವಿಆರ್‌ಎಸ್‌) ಜಾರಿಗೊಳಿಸಿದೆ.

ಘಟಕದಲ್ಲಿ ಕನಿಷ್ಠ ಐದು ವರ್ಷಗಳವರೆಗೆ ಕೆಲಸ ಮಾಡಿರುವ ಕಾರ್ಮಿಕ ಸಂಘಟನೆಯ ಸದಸ್ಯರಾಗಿರುವವರಿಗೆ ಮತ್ತು ಮೇಲ್ವಿಚಾರಣಾ ವಿಭಾಗದಲ್ಲಿ ಕೆಲಸ ಮಾಡುತ್ತಿರುವ ಸಿಬ್ಬಂದಿಗೆ ‘ನವ ಜೀವನ ಯೋಜನೆ’ ಪರಿಚಯಿಸಲಾಗಿದೆ. ಈ ಯೋಜನೆಗೆ ಸೆಪ್ಟೆಂಬರ್‌ 22 ರಿಂದ ಚಾಲನೆ ನೀಡಲಾಗಿದೆ. ಈ ತಿಂಗಳ 23ರವರೆಗೆ ಅವಕಾಶ ಕಲ್ಪಿಸಲಾಗಿದೆ.

‘ಸಿಬ್ಬಂದಿಯು ಸ್ವ–ಇಚ್ಛೆಯಿಂದ ಈ ಯೋಜನೆ ಆಯ್ಕೆ ಮಾಡಿಕೊಳ್ಳಬಹುದಾಗಿದೆ. ಕಂಪನಿಯ ವಹಿವಾಟಿನ ಪರಿಸ್ಥಿತಿಗೂ ಇದಕ್ಕೂ ಯಾವುದೇ ಸಂಬಂಧ ಇಲ್ಲ’ ಎಂದು ‘ಟಿಕೆಎಂ’ ಉಪಾಧ್ಯಕ್ಷ ಶೇಖರ್ ವಿಶ್ವನಾಥನ್ ಅವರು ತಿಳಿಸಿದ್ದಾರೆ.

‘ಸಾಮಾನ್ಯ ನಿವೃತ್ತಿಯಲ್ಲಿ ಸಿಗುವ ಪ್ರಯೋಜನಗಳಿಗಿಂತಲೂ ಹೆಚ್ಚುವರಿ ಕೊಡುಗೆಗಳು ಇದರಲ್ಲಿ ಲಭ್ಯವಾಗಲಿವೆ’ ಎಂದೂ ಹೇಳಿದ್ದಾರೆ.

ವಾಹನ ಉದ್ದಿಮೆಯು ಮಾರಾಟ ಕುಸಿತದ ಎದುರಿಸುತ್ತಿರುವಾಗ ‘ಟಿಕೆಎಂ’ನಲ್ಲಿ ‘ವಿಆರ್‌ಎಸ್‌’ ಜಾರಿಗೆ ತರಲಾಗುತ್ತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT