<p><strong>ನವದೆಹಲಿ: ವಿ</strong>ವಿಧ ಕಾರ್ಮಿಕ ಸಂಘಟನೆಗಳ ಜೊತೆ ಗುರುತಿಸಿಕೊಂಡಿರುವ 25 ಕೋಟಿಗೂ ಹೆಚ್ಚು ಕಾರ್ಮಿಕರು ಭಾರತ್ ಬಂದ್ಗೆ ಕರೆ ನೀಡಿರುವ ಪರಿಣಾಮವಾಗಿ ಬ್ಯಾಂಕಿಂಗ್, ಅಂಚೆ ಹಾಗೂ ಇತರ ಕೆಲವು ಸೇವೆಗಳಿಗೆ ಬುಧವಾರ ಅಡಚಣೆ ಉಂಟಾಗುವ ಸಾಧ್ಯತೆ ಇದೆ.</p>.<p>ಕೇಂದ್ರ ಸರ್ಕಾರದ ಹಲವು ನೀತಿಗಳನ್ನು ವಿರೋಧಿಸಿ ಬಂದ್ಗೆ ಕರೆ ನೀಡಲಾಗಿದೆ.</p>.<p class="title">ನಾಲ್ಕು ಕಾರ್ಮಿಕ ಸಂಹಿತೆಗಳನ್ನು ಕೈಬಿಡಬೇಕು, ಗುತ್ತಿಗೆ ಪದ್ಧತಿ ಕೊನೆಗೊಳಿಸಬೇಕು, ಸರ್ಕಾರಿ ಸ್ವಾಮ್ಯದ ಕಂಪನಿಗಳನ್ನು ಖಾಸಗಿಯವರಿಗೆ ಮಾರಾಟ ಮಾಡುವುದನ್ನು ನಿಲ್ಲಿಸಬೇಕು ಹಾಗೂ ಕನಿಷ್ಠ ವೇತನವನ್ನು ₹26 ಸಾವಿರಕ್ಕೆ ಹೆಚ್ಚಿಸಬೇಕು ಎಂಬ ಬೇಡಿಕೆಯನ್ನು ಸಿಐಟಿಯು, ಐಎನ್ಟಿಯುಸಿ ಮತ್ತು ಎಐಟಿಯುಸಿ ಸಂಘಟನೆಗಳು ಸರ್ಕಾರದ ಮುಂದಿರಿಸಿವೆ. ಸಂಯುಕ್ತ ಕಿಸಾನ್ ಮೋರ್ಚಾ (ಎಸ್ಕೆಎಂ) ಕೂಡ ಬಂದ್ಗೆ ಬೆಂಬಲ ಸೂಚಿಸಿದೆ.</p>.<p class="title">ಆದರೆ, ಆರ್ಎಸ್ಎಸ್ನ ಭಾರತೀಯ ಮಜ್ದೂರ್ ಸಂಘವು (ಬಿಎಂಎಸ್) ಬಂದ್ಗೆ ಬೆಂಬಲ ನೀಡಿಲ್ಲ. ಈ ಬಂದ್ ರಾಜಕೀಯ ಪ್ರೇರಿತ ಎಂದು ಅದು ಹೇಳಿದೆ.</p>.<p class="title">ಕೈಗಾರಿಕಾ ಪ್ರದೇಶಗಳಲ್ಲಿ ಪ್ರತಿಭಟನೆಗಳು ನಡೆಯಲಿವೆ. ಬ್ಯಾಂಕಿಂಗ್, ಅಂಚೆ ಮತ್ತು ಸರ್ಕಾರಿ ಸ್ವಾಮ್ಯದ ಕಂಪನಿಗಳು ಬಂದ್ ಆಗುವ ಸಾಧ್ಯತೆ ಇದೆ ಎಂದು ಕಾರ್ಮಿಕ ಮುಖಂಡರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ: ವಿ</strong>ವಿಧ ಕಾರ್ಮಿಕ ಸಂಘಟನೆಗಳ ಜೊತೆ ಗುರುತಿಸಿಕೊಂಡಿರುವ 25 ಕೋಟಿಗೂ ಹೆಚ್ಚು ಕಾರ್ಮಿಕರು ಭಾರತ್ ಬಂದ್ಗೆ ಕರೆ ನೀಡಿರುವ ಪರಿಣಾಮವಾಗಿ ಬ್ಯಾಂಕಿಂಗ್, ಅಂಚೆ ಹಾಗೂ ಇತರ ಕೆಲವು ಸೇವೆಗಳಿಗೆ ಬುಧವಾರ ಅಡಚಣೆ ಉಂಟಾಗುವ ಸಾಧ್ಯತೆ ಇದೆ.</p>.<p>ಕೇಂದ್ರ ಸರ್ಕಾರದ ಹಲವು ನೀತಿಗಳನ್ನು ವಿರೋಧಿಸಿ ಬಂದ್ಗೆ ಕರೆ ನೀಡಲಾಗಿದೆ.</p>.<p class="title">ನಾಲ್ಕು ಕಾರ್ಮಿಕ ಸಂಹಿತೆಗಳನ್ನು ಕೈಬಿಡಬೇಕು, ಗುತ್ತಿಗೆ ಪದ್ಧತಿ ಕೊನೆಗೊಳಿಸಬೇಕು, ಸರ್ಕಾರಿ ಸ್ವಾಮ್ಯದ ಕಂಪನಿಗಳನ್ನು ಖಾಸಗಿಯವರಿಗೆ ಮಾರಾಟ ಮಾಡುವುದನ್ನು ನಿಲ್ಲಿಸಬೇಕು ಹಾಗೂ ಕನಿಷ್ಠ ವೇತನವನ್ನು ₹26 ಸಾವಿರಕ್ಕೆ ಹೆಚ್ಚಿಸಬೇಕು ಎಂಬ ಬೇಡಿಕೆಯನ್ನು ಸಿಐಟಿಯು, ಐಎನ್ಟಿಯುಸಿ ಮತ್ತು ಎಐಟಿಯುಸಿ ಸಂಘಟನೆಗಳು ಸರ್ಕಾರದ ಮುಂದಿರಿಸಿವೆ. ಸಂಯುಕ್ತ ಕಿಸಾನ್ ಮೋರ್ಚಾ (ಎಸ್ಕೆಎಂ) ಕೂಡ ಬಂದ್ಗೆ ಬೆಂಬಲ ಸೂಚಿಸಿದೆ.</p>.<p class="title">ಆದರೆ, ಆರ್ಎಸ್ಎಸ್ನ ಭಾರತೀಯ ಮಜ್ದೂರ್ ಸಂಘವು (ಬಿಎಂಎಸ್) ಬಂದ್ಗೆ ಬೆಂಬಲ ನೀಡಿಲ್ಲ. ಈ ಬಂದ್ ರಾಜಕೀಯ ಪ್ರೇರಿತ ಎಂದು ಅದು ಹೇಳಿದೆ.</p>.<p class="title">ಕೈಗಾರಿಕಾ ಪ್ರದೇಶಗಳಲ್ಲಿ ಪ್ರತಿಭಟನೆಗಳು ನಡೆಯಲಿವೆ. ಬ್ಯಾಂಕಿಂಗ್, ಅಂಚೆ ಮತ್ತು ಸರ್ಕಾರಿ ಸ್ವಾಮ್ಯದ ಕಂಪನಿಗಳು ಬಂದ್ ಆಗುವ ಸಾಧ್ಯತೆ ಇದೆ ಎಂದು ಕಾರ್ಮಿಕ ಮುಖಂಡರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>