ಕೇಂದ್ರ ಕಾರ್ಮಿಕ ಸಚಿವಾಲಯವು ಗುರುವಾರ ಕರೆದಿದ್ದ ಸಭೆಯಲ್ಲಿ ಕಾರ್ಮಿಕ ಸಂಘಟನೆಗಳು ಮುಂದಿಟ್ಟಿದ್ದ ಬೇಡಿಕೆಗಳ ಬಗ್ಗೆ ಯಾವುದೇ ಭರವಸೆ ದೊರೆತಿಲ್ಲ. ಹೀಗಾಗಿ ಒಂದು ದಿನದ ಮಟ್ಟಿಗೆ ಸಾರ್ವತ್ರಿಕ ಮುಷ್ಕರ ನಡೆಸಲು ನಿರ್ಧರಿಸಲಾಗಿದೆ ಎಂದು ಹತ್ತು ಕಾರ್ಮಿಕ ಸಂಘಟನೆಗಳು ನೀಡಿರುವ ಜಂಟಿ ಹೇಳಿಕೆಯಲ್ಲಿ ತಿಳಿಸಲಾಗಿದೆ.