<p><strong>ನವದೆಹಲಿ:</strong> ಅಡುಗೆ ಮನೆ ಉಪಕರಣಗಳ ತಯಾರಿಕಾ ವಲಯದಲ್ಲಿ ದೇಶದ ಅತಿದೊಡ್ಡ ಕಂಪನಿ ಟಿಟಿಕೆ ಪ್ರೆಸ್ಟೀಜ್ನ ಅಧ್ಯಕ್ಷ ಟಿ.ಟಿ. ಜಗನ್ನಾಥನ್ (77) ಅವರು ಬೆಂಗಳೂರಿನಲ್ಲಿ ಗುರುವಾರ ನಿಧನರಾದರು. ಜಗನ್ನಾಥನ್ ಅವರು ‘ಅಡುಗೆ ಮನೆಯ ಸಾಮ್ರಾಟ’ ಎಂದೇ ಪ್ರಸಿದ್ಧರಾಗಿದ್ದರು. </p>.<p>ಐಐಟಿ ಚೆನ್ನೈನಿಂದ ಚಿನ್ನದ ಪದಕ ಪಡೆದಿದ್ದ ಜಗನ್ನಾಥನ್, ಅಮೆರಿಕದ ಕಾರ್ನೆಲ್ ವಿಶ್ವವಿದ್ಯಾಲಯದಿಂದ ಪಿಎಚ್ಡಿ ಪಡೆದಿದ್ದರು. ಕಳೆದ 50 ವರ್ಷದಿಂದ ಟಿಟಿಕೆ ಪ್ರೆಸ್ಟೀಜ್ನ ಆಡಳಿತ ಮಂಡಳಿಯಲ್ಲಿದ್ದರು. ಇವರ ಅಜ್ಜ ಹಾಗೂ ಕೇಂದ್ರ ಹಣಕಾಸು ಇಲಾಖೆಯ ಮಾಜಿ ಸಚಿವರಾಗಿದ್ದ ಟಿ.ಟಿ. ಕೃಷ್ಣಮಾಚಾರಿ 1928ರಲ್ಲಿ ಈ ಕಂಪನಿಯನ್ನು ಸ್ಥಾಪಿಸಿದ್ದರು.</p>.<p>1975ರಲ್ಲಿ ವ್ಯವಸ್ಥಾಪಕ ನಿರ್ದೇಶಕರಾಗಿ ಜಗನ್ನಾಥನ್ ಕಂಪನಿ ಸೇರಿದರು. 2000ವರೆಗೆ ಇದೇ ಹುದ್ದೆಯಲ್ಲಿ ಮುಂದುವರಿದ ಅವರು ಬಳಿಕ 19 ವರ್ಷ ಕಾರ್ಯನಿರ್ವಾಹಕ ಅಧ್ಯಕ್ಷರಾಗಿದ್ದರು. 2019ರಲ್ಲಿ ಕಾರ್ಯನಿರ್ವಾಹಕ ಅಧ್ಯಕ್ಷ ಸ್ಥಾನದಿಂದ ಕೆಳೆಗಿಳಿದ ಅವರು ಕಾರ್ಯನಿರ್ವಾಹಕೇತರ ನಿರ್ದೇಶಕ/ಅಧ್ಯಕ್ಷರಾಗಿ ಮುಂದುವರಿದರು. 2025ರ ಮಾರ್ಚ್ 25ರಿಂದ ಅಧ್ಯಕ್ಷ ಸ್ಥಾನದಿಂದ ಹೊರಬಂದರು.</p>.<p>ಜಗನ್ನಾಥನ್ ಅವರು ಕಂಪನಿಯ ನಿರ್ದೇಶಕ/ಅಧ್ಯಕ್ಷರಾಗಿ ದೀರ್ಘಕಾಲ ಸೇವೆ ಸಲ್ಲಿಸಿದ್ದರು. ಜಗನ್ನಾಥನ್ ಅವರ ನಿಧನಕ್ಕೆ ತೀವ್ರ ಸಂತಾಪ ವ್ಯಕ್ತಪಡಿಸುತ್ತಿದೆ ಎಂದು ಕಂಪನಿ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಅಡುಗೆ ಮನೆ ಉಪಕರಣಗಳ ತಯಾರಿಕಾ ವಲಯದಲ್ಲಿ ದೇಶದ ಅತಿದೊಡ್ಡ ಕಂಪನಿ ಟಿಟಿಕೆ ಪ್ರೆಸ್ಟೀಜ್ನ ಅಧ್ಯಕ್ಷ ಟಿ.ಟಿ. ಜಗನ್ನಾಥನ್ (77) ಅವರು ಬೆಂಗಳೂರಿನಲ್ಲಿ ಗುರುವಾರ ನಿಧನರಾದರು. ಜಗನ್ನಾಥನ್ ಅವರು ‘ಅಡುಗೆ ಮನೆಯ ಸಾಮ್ರಾಟ’ ಎಂದೇ ಪ್ರಸಿದ್ಧರಾಗಿದ್ದರು. </p>.<p>ಐಐಟಿ ಚೆನ್ನೈನಿಂದ ಚಿನ್ನದ ಪದಕ ಪಡೆದಿದ್ದ ಜಗನ್ನಾಥನ್, ಅಮೆರಿಕದ ಕಾರ್ನೆಲ್ ವಿಶ್ವವಿದ್ಯಾಲಯದಿಂದ ಪಿಎಚ್ಡಿ ಪಡೆದಿದ್ದರು. ಕಳೆದ 50 ವರ್ಷದಿಂದ ಟಿಟಿಕೆ ಪ್ರೆಸ್ಟೀಜ್ನ ಆಡಳಿತ ಮಂಡಳಿಯಲ್ಲಿದ್ದರು. ಇವರ ಅಜ್ಜ ಹಾಗೂ ಕೇಂದ್ರ ಹಣಕಾಸು ಇಲಾಖೆಯ ಮಾಜಿ ಸಚಿವರಾಗಿದ್ದ ಟಿ.ಟಿ. ಕೃಷ್ಣಮಾಚಾರಿ 1928ರಲ್ಲಿ ಈ ಕಂಪನಿಯನ್ನು ಸ್ಥಾಪಿಸಿದ್ದರು.</p>.<p>1975ರಲ್ಲಿ ವ್ಯವಸ್ಥಾಪಕ ನಿರ್ದೇಶಕರಾಗಿ ಜಗನ್ನಾಥನ್ ಕಂಪನಿ ಸೇರಿದರು. 2000ವರೆಗೆ ಇದೇ ಹುದ್ದೆಯಲ್ಲಿ ಮುಂದುವರಿದ ಅವರು ಬಳಿಕ 19 ವರ್ಷ ಕಾರ್ಯನಿರ್ವಾಹಕ ಅಧ್ಯಕ್ಷರಾಗಿದ್ದರು. 2019ರಲ್ಲಿ ಕಾರ್ಯನಿರ್ವಾಹಕ ಅಧ್ಯಕ್ಷ ಸ್ಥಾನದಿಂದ ಕೆಳೆಗಿಳಿದ ಅವರು ಕಾರ್ಯನಿರ್ವಾಹಕೇತರ ನಿರ್ದೇಶಕ/ಅಧ್ಯಕ್ಷರಾಗಿ ಮುಂದುವರಿದರು. 2025ರ ಮಾರ್ಚ್ 25ರಿಂದ ಅಧ್ಯಕ್ಷ ಸ್ಥಾನದಿಂದ ಹೊರಬಂದರು.</p>.<p>ಜಗನ್ನಾಥನ್ ಅವರು ಕಂಪನಿಯ ನಿರ್ದೇಶಕ/ಅಧ್ಯಕ್ಷರಾಗಿ ದೀರ್ಘಕಾಲ ಸೇವೆ ಸಲ್ಲಿಸಿದ್ದರು. ಜಗನ್ನಾಥನ್ ಅವರ ನಿಧನಕ್ಕೆ ತೀವ್ರ ಸಂತಾಪ ವ್ಯಕ್ತಪಡಿಸುತ್ತಿದೆ ಎಂದು ಕಂಪನಿ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>