<p>ಉಡುಪಿ: ಇಂದಿನ ಕಾಲದಲ್ಲಿ ಬ್ರ್ಯಾಂಡಿಂಗ್ ಅತ್ಯಂತ ಮಹತ್ವದ್ದಾಗಿದೆ. ಯಾವುದೇ ಉತ್ಪನ್ನವು ಮಾರುಕಟ್ಟೆಯಲ್ಲಿ ಜನಮನ್ನಣೆ ಪಡೆಯಲು ಹಾಗೂ ಇತರ ಉತ್ಪನ್ನಗಳೊಂದಿಗೆ ಸ್ಫರ್ಧಿಸಲು ಸರಿಯಾದ ಬ್ರ್ಯಾಂಡ್ ಅಗತ್ಯವಿದೆ ಎಂದು ಉಡುಪಿ ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ನಾಗರಾಜ ಹೇಳಿದರು.</p>.<p>ಭಾರತೀಯ ವಿಕಾಸ ಟ್ರಸ್ಟ್ ಮಣಿಪಾಲ, ಟಿಎಂಜಿ ಸುನಿಧಿ ಫೌಂಡೇಶನ್ ಟ್ರಸ್ಟ್, ಮಣಿಪಾಲ ಪೇಮೆಂಟ್ ಆ್ಯಂಡ್ ಐಡೆಂಟಿಟಿ ಸೆಲ್ಯೂಶನ್ ಪ್ರೈವೇಟ್ ಲಿಮಿಟೆಡ್ ಸಂಯುಕ್ತ ಆಶ್ರಯದಲ್ಲಿ ಗ್ರಾಮೀಣ ಮಹಿಳಾ ಉದ್ಯಮಿಗಳಿಗೆ 3 ದಿನಗಳ ಬ್ರ್ಯಾಂಡಿಂಗ್, ಪ್ಯಾಕೇಜಿಂಗ್, ಲೇಬಲಿಂಗ್ ಮತ್ತು ಮಾರುಕಟ್ಟೆ ಕುರಿತು ಭಾರತೀಯ ವಿಕಾಸ ಟ್ರಸ್ಟ್ ಸಭಾಂಗಣದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಮಾಹಿತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.</p>.<p>ಕರ್ನಾಟಕ ಸರ್ಕಾರದ ಬ್ರ್ಯಾಂಡ್ ಕರ್ನಾಟಕ ಯೋಜನೆಯಡಿ ಆಹಾರ ಉತ್ಪನ್ನಗಳ ಉದ್ಯಮಗಳನ್ನು ಒಳಗೊಂಡು ಅಭಿವೃದ್ಧಿಪಡಿಸುವ ಪ್ರಯತ್ನ ನಡೆಯುತ್ತಿದೆ ಎಂದರು.</p>.<p>ಮಂಗಳೂರು ಎಂಎಸ್ಎಂಇ ಉಪನಿರ್ದೇಶಕ ಸುಂದರ್ ಎಸ್.ಎಂ. ಮಾತನಾಡಿದರು. ಭಾರತೀಯ ವಿಕಾಸ ಟ್ರಸ್ಟಿನ ಹಿರಿಯ ಸಲಹೆಗಾರ ಜಗದೀಶ್ ಪೈ ಅಧ್ಯಕ್ಷತೆ ವಹಿಸಿದ್ದರು.</p>.<p>ಬಿವಿಟಿಯ ಸುಮಂತ್ ಭಟ್ ಪ್ರಾರ್ಥಿಸಿದರು. ಮುಖ್ಯ ವ್ಯವಸ್ಥಾಪಕ ಮನೋಹರ ಕಟ್ಗೇರಿ ಸ್ವಾಗತಿಸಿದರು. ಕಾರ್ಯಕ್ರಮ ಅಧಿಕಾರಿ ಪ್ರತಿಮಾ ಕಾರ್ಯಕ್ರಮ ನಿರೂಪಿಸಿದರು. ಗೀತಾ ಸಹಕರಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260325-28-79776675</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಉಡುಪಿ: ಇಂದಿನ ಕಾಲದಲ್ಲಿ ಬ್ರ್ಯಾಂಡಿಂಗ್ ಅತ್ಯಂತ ಮಹತ್ವದ್ದಾಗಿದೆ. ಯಾವುದೇ ಉತ್ಪನ್ನವು ಮಾರುಕಟ್ಟೆಯಲ್ಲಿ ಜನಮನ್ನಣೆ ಪಡೆಯಲು ಹಾಗೂ ಇತರ ಉತ್ಪನ್ನಗಳೊಂದಿಗೆ ಸ್ಫರ್ಧಿಸಲು ಸರಿಯಾದ ಬ್ರ್ಯಾಂಡ್ ಅಗತ್ಯವಿದೆ ಎಂದು ಉಡುಪಿ ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ನಾಗರಾಜ ಹೇಳಿದರು.</p>.<p>ಭಾರತೀಯ ವಿಕಾಸ ಟ್ರಸ್ಟ್ ಮಣಿಪಾಲ, ಟಿಎಂಜಿ ಸುನಿಧಿ ಫೌಂಡೇಶನ್ ಟ್ರಸ್ಟ್, ಮಣಿಪಾಲ ಪೇಮೆಂಟ್ ಆ್ಯಂಡ್ ಐಡೆಂಟಿಟಿ ಸೆಲ್ಯೂಶನ್ ಪ್ರೈವೇಟ್ ಲಿಮಿಟೆಡ್ ಸಂಯುಕ್ತ ಆಶ್ರಯದಲ್ಲಿ ಗ್ರಾಮೀಣ ಮಹಿಳಾ ಉದ್ಯಮಿಗಳಿಗೆ 3 ದಿನಗಳ ಬ್ರ್ಯಾಂಡಿಂಗ್, ಪ್ಯಾಕೇಜಿಂಗ್, ಲೇಬಲಿಂಗ್ ಮತ್ತು ಮಾರುಕಟ್ಟೆ ಕುರಿತು ಭಾರತೀಯ ವಿಕಾಸ ಟ್ರಸ್ಟ್ ಸಭಾಂಗಣದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಮಾಹಿತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.</p>.<p>ಕರ್ನಾಟಕ ಸರ್ಕಾರದ ಬ್ರ್ಯಾಂಡ್ ಕರ್ನಾಟಕ ಯೋಜನೆಯಡಿ ಆಹಾರ ಉತ್ಪನ್ನಗಳ ಉದ್ಯಮಗಳನ್ನು ಒಳಗೊಂಡು ಅಭಿವೃದ್ಧಿಪಡಿಸುವ ಪ್ರಯತ್ನ ನಡೆಯುತ್ತಿದೆ ಎಂದರು.</p>.<p>ಮಂಗಳೂರು ಎಂಎಸ್ಎಂಇ ಉಪನಿರ್ದೇಶಕ ಸುಂದರ್ ಎಸ್.ಎಂ. ಮಾತನಾಡಿದರು. ಭಾರತೀಯ ವಿಕಾಸ ಟ್ರಸ್ಟಿನ ಹಿರಿಯ ಸಲಹೆಗಾರ ಜಗದೀಶ್ ಪೈ ಅಧ್ಯಕ್ಷತೆ ವಹಿಸಿದ್ದರು.</p>.<p>ಬಿವಿಟಿಯ ಸುಮಂತ್ ಭಟ್ ಪ್ರಾರ್ಥಿಸಿದರು. ಮುಖ್ಯ ವ್ಯವಸ್ಥಾಪಕ ಮನೋಹರ ಕಟ್ಗೇರಿ ಸ್ವಾಗತಿಸಿದರು. ಕಾರ್ಯಕ್ರಮ ಅಧಿಕಾರಿ ಪ್ರತಿಮಾ ಕಾರ್ಯಕ್ರಮ ನಿರೂಪಿಸಿದರು. ಗೀತಾ ಸಹಕರಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260325-28-79776675</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>