<p><strong>ಪಡುಬಿದ್ರಿ</strong> (ಉಡುಪಿ): ಮಧ್ಯ ಏಷ್ಯಾದಲ್ಲಿನ ಯುದ್ಧದ ಬಿಕ್ಕಟ್ಟಿನ ಪರಿಣಾಮವು ತೆಂಗು ರಫ್ತು ವ್ಯವಹಾರದ ಮೇಲೆಯೂ ಆಗಿದೆ. ತೆಂಗಿನಕಾಯಿಗೆ ಬೇಡಿಕೆ ಕುಸಿದು ಬೆಲೆ ಇಳಿಕೆಯಾಗಿದೆ.</p>.<p>ಜಾಗತಿಕ ಮಾರುಕಟ್ಟೆಯಲ್ಲಿ ಉಂಟಾದ ಅನಿಶ್ಚಿತತೆ, ರಫ್ತು ವ್ಯವಹಾರದಲ್ಲಿನ ಮಂದಗತಿಯಿಂದ ಮಾರುಕಟ್ಟೆ ಕುಸಿತ ಕಂಡಿದೆ. ಪರಿಣಾಮವಾಗಿ ಸ್ಥಳೀಯ ಮಟ್ಟದಲ್ಲೂ ಖರೀದಿ ಪ್ರಮಾಣ ಇಳಿಕೆಯಾಗಿದೆ.</p>.<p>ಮಾರ್ಚ್-ಏಪ್ರಿಲ್, ಆಗಸ್ಟ್-ಸೆಪ್ಟೆಂಬರ್ ಹಾಗೂ ಡಿಸೆಂಬರ್-ಜನವರಿ ಅವಧಿಯಲ್ಲಿ ಕೊಯ್ಲು ಪ್ರಮಾಣ ಹೆಚ್ಚಾಗುವುದರಿಂದ ಮಾರುಕಟ್ಟೆಗೆ ದೊಡ್ಡ ಪ್ರಮಾಣದಲ್ಲಿ ತೆಂಗಿನಕಾಯಿ ಆವಕವಾಗುತ್ತದೆ. ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ತೆಂಗು ಬೆಳೆಯಲಾಗುತ್ತಿದ್ದು, ಇಲ್ಲಿನ ರೈತರು ಮುಖ್ಯವಾಗಿ ತಾಜಾ ತೆಂಗಿನಕಾಯಿ ಮಾರುಕಟ್ಟೆಯನ್ನೇ ಅವಲಂಬಿಸಿದ್ದಾರೆ.</p>.<p>ಕಳೆದ ವರ್ಷ ತೆಂಗಿನಕಾಯಿಗೆ ಉತ್ತಮ ಬೆಲೆ ಇತ್ತು. ಪ್ರತಿ ಕೆ.ಜಿ.ಗೆ 58ರಿಂದ 60ರ ವರೆಗೆ ಏರಿಕೆಯಾಗಿತ್ತು. ಇತ್ತೀಚಿನ ದಿನಗಳಲ್ಲಿ ದಿನೇ ದಿನೇ ಬೆಲೆ ಕುಸಿಯುತ್ತಿದ್ದು, ಪ್ರಸ್ತುತ ದರ ₹28 ಆಸುಪಾಸಿನಲ್ಲಿದೆ.</p>.<p>ರೈತರು ಬೆಲೆ ಏರಿಕೆಯಾಗುವ ನಿರೀಕ್ಷೆಯಲ್ಲಿ ಕಾಯಿಗಳನ್ನು ಮಾರಾಟ ಮಾಡದೆ ಮನೆಗಳಲ್ಲೇ ಸಂಗ್ರಹಿಸಿಟ್ಟಿರುವುದು ಗ್ರಾಮೀಣ ಭಾಗಗಳಲ್ಲಿ ಹೆಚ್ಚಾಗಿ ಕಂಡು ಬರುತ್ತಿದೆ.</p>.<p>‘ಈ ಬೆಲೆಗೆ ಮಾರಾಟ ಮಾಡಿದರೆ ಖರ್ಚೂ ಮರಳಿ ಬರುವುದಿಲ್ಲ’ ಎಂದು ತೆಂಗು ಬೆಳೆಗಾರ ಪ್ರಾಣೇಶ್ ಹೆಜಮಾಡಿ ಹೇಳಿದರು.</p>.<p>‘ಉಡುಪಿ ಜಿಲ್ಲೆಯಲ್ಲಿ 16,303 ಹೆಕ್ಟೇರ್ ಪ್ರದೇಶದಲ್ಲಿ ತೆಂಗು ಬೆಳೆಯಲಾಗುತ್ತಿದ್ದು, ಸುಮಾರು 98 ಸಾವಿರ ರೈತರು ತೆಂಗು ಕೃಷಿಯನ್ನು ಅವಲಂಬಿಸಿದ್ದಾರೆ’ ಎಂದು ತೋಟಗಾರಿಕೆ ಇಲಾಖೆಯ ಜಂಟಿ ನಿರ್ದೇಶಕಿ ಕ್ಷಮಾ ಪಾಟೀಲ ‘ಪ್ರಜಾವಾಣಿ’ಗೆ ತಿಳಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260531-51-222743308</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪಡುಬಿದ್ರಿ</strong> (ಉಡುಪಿ): ಮಧ್ಯ ಏಷ್ಯಾದಲ್ಲಿನ ಯುದ್ಧದ ಬಿಕ್ಕಟ್ಟಿನ ಪರಿಣಾಮವು ತೆಂಗು ರಫ್ತು ವ್ಯವಹಾರದ ಮೇಲೆಯೂ ಆಗಿದೆ. ತೆಂಗಿನಕಾಯಿಗೆ ಬೇಡಿಕೆ ಕುಸಿದು ಬೆಲೆ ಇಳಿಕೆಯಾಗಿದೆ.</p>.<p>ಜಾಗತಿಕ ಮಾರುಕಟ್ಟೆಯಲ್ಲಿ ಉಂಟಾದ ಅನಿಶ್ಚಿತತೆ, ರಫ್ತು ವ್ಯವಹಾರದಲ್ಲಿನ ಮಂದಗತಿಯಿಂದ ಮಾರುಕಟ್ಟೆ ಕುಸಿತ ಕಂಡಿದೆ. ಪರಿಣಾಮವಾಗಿ ಸ್ಥಳೀಯ ಮಟ್ಟದಲ್ಲೂ ಖರೀದಿ ಪ್ರಮಾಣ ಇಳಿಕೆಯಾಗಿದೆ.</p>.<p>ಮಾರ್ಚ್-ಏಪ್ರಿಲ್, ಆಗಸ್ಟ್-ಸೆಪ್ಟೆಂಬರ್ ಹಾಗೂ ಡಿಸೆಂಬರ್-ಜನವರಿ ಅವಧಿಯಲ್ಲಿ ಕೊಯ್ಲು ಪ್ರಮಾಣ ಹೆಚ್ಚಾಗುವುದರಿಂದ ಮಾರುಕಟ್ಟೆಗೆ ದೊಡ್ಡ ಪ್ರಮಾಣದಲ್ಲಿ ತೆಂಗಿನಕಾಯಿ ಆವಕವಾಗುತ್ತದೆ. ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ತೆಂಗು ಬೆಳೆಯಲಾಗುತ್ತಿದ್ದು, ಇಲ್ಲಿನ ರೈತರು ಮುಖ್ಯವಾಗಿ ತಾಜಾ ತೆಂಗಿನಕಾಯಿ ಮಾರುಕಟ್ಟೆಯನ್ನೇ ಅವಲಂಬಿಸಿದ್ದಾರೆ.</p>.<p>ಕಳೆದ ವರ್ಷ ತೆಂಗಿನಕಾಯಿಗೆ ಉತ್ತಮ ಬೆಲೆ ಇತ್ತು. ಪ್ರತಿ ಕೆ.ಜಿ.ಗೆ 58ರಿಂದ 60ರ ವರೆಗೆ ಏರಿಕೆಯಾಗಿತ್ತು. ಇತ್ತೀಚಿನ ದಿನಗಳಲ್ಲಿ ದಿನೇ ದಿನೇ ಬೆಲೆ ಕುಸಿಯುತ್ತಿದ್ದು, ಪ್ರಸ್ತುತ ದರ ₹28 ಆಸುಪಾಸಿನಲ್ಲಿದೆ.</p>.<p>ರೈತರು ಬೆಲೆ ಏರಿಕೆಯಾಗುವ ನಿರೀಕ್ಷೆಯಲ್ಲಿ ಕಾಯಿಗಳನ್ನು ಮಾರಾಟ ಮಾಡದೆ ಮನೆಗಳಲ್ಲೇ ಸಂಗ್ರಹಿಸಿಟ್ಟಿರುವುದು ಗ್ರಾಮೀಣ ಭಾಗಗಳಲ್ಲಿ ಹೆಚ್ಚಾಗಿ ಕಂಡು ಬರುತ್ತಿದೆ.</p>.<p>‘ಈ ಬೆಲೆಗೆ ಮಾರಾಟ ಮಾಡಿದರೆ ಖರ್ಚೂ ಮರಳಿ ಬರುವುದಿಲ್ಲ’ ಎಂದು ತೆಂಗು ಬೆಳೆಗಾರ ಪ್ರಾಣೇಶ್ ಹೆಜಮಾಡಿ ಹೇಳಿದರು.</p>.<p>‘ಉಡುಪಿ ಜಿಲ್ಲೆಯಲ್ಲಿ 16,303 ಹೆಕ್ಟೇರ್ ಪ್ರದೇಶದಲ್ಲಿ ತೆಂಗು ಬೆಳೆಯಲಾಗುತ್ತಿದ್ದು, ಸುಮಾರು 98 ಸಾವಿರ ರೈತರು ತೆಂಗು ಕೃಷಿಯನ್ನು ಅವಲಂಬಿಸಿದ್ದಾರೆ’ ಎಂದು ತೋಟಗಾರಿಕೆ ಇಲಾಖೆಯ ಜಂಟಿ ನಿರ್ದೇಶಕಿ ಕ್ಷಮಾ ಪಾಟೀಲ ‘ಪ್ರಜಾವಾಣಿ’ಗೆ ತಿಳಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260531-51-222743308</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>