<p><strong>ಮುಂಬೈ</strong>: ಪ್ರಸಕ್ತ ವರ್ಷದ ಮಾರ್ಚ್ ಅಂತ್ಯಕ್ಕೆ ದೇಶದ ಸರ್ಕಾರಿ ಮತ್ತು ಖಾಸಗಿ ಸ್ವಾಮ್ಯದ ಬ್ಯಾಂಕ್ಗಳಲ್ಲಿ ವಾರಸುದಾರರು ಇಲ್ಲದ ಠೇವಣಿಯು ಶೇ 26ರಷ್ಟು ಏರಿಕೆಯಾಗಿದ್ದು, ₹78,213 ಕೋಟಿಗೆ ತಲುಪಿದೆ ಎಂದು ಭಾರತೀಯ ರಿಸರ್ವ್ ಬ್ಯಾಂಕ್ ತಿಳಿಸಿದೆ.</p>.<p>2023ರ ಮಾರ್ಚ್ ಅಂತ್ಯಕ್ಕೆ ಠೇವಣಿದಾರರ ಶಿಕ್ಷಣ ಮತ್ತು ಜಾಗೃತಿ ನಿಧಿಯಲ್ಲಿನ (ಡಿಇಎ) ಮೊತ್ತವು ₹62,225 ಕೋಟಿ ಇತ್ತು ಎಂದು ಗುರುವಾರ ಬಿಡುಗಡೆಯಾಗಿರುವ ವರದಿ ತಿಳಿಸಿದೆ. </p>.<p>ಸಹಕಾರ ಬ್ಯಾಂಕ್ಗಳು ಸೇರಿ ಎಲ್ಲಾ ಬ್ಯಾಂಕ್ಗಳಲ್ಲಿ ಇರುವ ಈ ಖಾತೆಗಳಲ್ಲಿ ಕಳೆದ 10 ವರ್ಷಗಳಿಂದ ಯಾವುದೇ ವಹಿವಾಟು ನಡೆದಿಲ್ಲ ಎಂದು ಹೇಳಿದೆ. </p>.<p><strong>ಆರ್ಬಿಐ ಮಾರ್ಗಸೂಚಿ ಏನು?</strong></p>.<p>ವಾರಸುದಾರರು ಇಲ್ಲದ ಠೇವಣಿಗಳ ಪ್ರಮಾಣ ತಗ್ಗಿಸಲು ಮತ್ತು ಅರ್ಹ ಹಕ್ಕುದಾರರಿಗೆ ಠೇವಣಿ ಮರಳಿಸಲು ಆರ್ಬಿಐ ಹಲವಾರು ಕ್ರಮಗಳನ್ನು ಕೈಗೊಂಡಿದೆ. ಈ ಕುರಿತು ಪ್ರಸಕ್ತ ವರ್ಷದ ಆರಂಭದಲ್ಲಿಯೇ ಸಮಗ್ರ ಮಾರ್ಗಸೂಚಿಯನ್ನು ಪ್ರಕಟಿಸಿತ್ತು. </p>.<p>ಏಪ್ರಿಲ್ 1ರಂದು ಮತ್ತೆ ಪರಿಷ್ಕೃತ ಮಾರ್ಗಸೂಚಿ ಪ್ರಕಟಿಸಿದೆ. ವಾಣಿಜ್ಯ ಬ್ಯಾಂಕ್ಗಳು (ಪ್ರಾದೇಶಿಕ ಗ್ರಾಮೀಣ ಬ್ಯಾಂಕ್ಗಳು ಒಳಗೊಂಡಂತೆ) ಹಾಗೂ ಎಲ್ಲಾ ಸಹಕಾರ ಬ್ಯಾಂಕ್ಗಳಿಗೆ ಇದು ಅನ್ವಯಿಸಲಿದೆ.</p>.<p>ವಹಿವಾಟು ನಡೆಸದ ಖಾತೆಗಳು ಮತ್ತು ವಾರಸುದಾರರಿಲ್ಲದ ನಿಶ್ಚಿತ ಠೇವಣಿಗಳನ್ನು ಪ್ರತ್ಯೇಕವಾಗಿ ವರ್ಗೀಕರಿಸಬೇಕು ಎಂದು ಬ್ಯಾಂಕ್ಗಳಿಗೆ ಸೂಚಿಸಿದೆ.</p>.<p>ನಿಷ್ಕ್ರಿಯ ಖಾತೆಗಳ ಬಗ್ಗೆ ನಿಯಮಿತವಾಗಿ ಪರಿಶೀಲಿಸಬೇಕು. ಇವುಗಳ ಮೂಲಕ ವಂಚನೆ ನಡೆಯದಂತೆ ಮುಂಜಾಗ್ರತೆವಹಿಸಬೇಕು. ಠೇವಣಿ ಬಗ್ಗೆ ಹಕ್ಕುದಾರರು ಸಲ್ಲಿಸುವ ದೂರುಗಳ ಇತ್ಯರ್ಥಕ್ಕೆ ಕುಂದುಕೊರತೆ ಪರಿಹಾರ ಕಾರ್ಯವಿಧಾನವನ್ನು ಅಳವಡಿಸಿಕೊಳ್ಳಬೇಕಿದೆ ಎಂದು ನಿರ್ದೇಶನ ನೀಡಿದೆ. </p>.<p>ಇಂತಹ ಖಾತೆಗಳನ್ನು ಮರು ಸಕ್ರಿಯಗೊಳಿಸುವಿಕೆ, ಕ್ಲೈಮ್ಗಳ ಇತ್ಯರ್ಥ ಅಥವಾ ಅರ್ಹ ಹಕ್ಕುದಾರರು ಅಥವಾ ಉತ್ತರಾಧಿಕಾರಿಗಳು, ಅರ್ಹ ಖಾತೆದಾರರನ್ನು ಪತ್ತೆ ಹಚ್ಚಲು ಕ್ರಮವಹಿಸಬೇಕಿದೆ ಎಂದು ಸೂಚಿಸಿದೆ.</p>.<p>ಆರ್ಬಿಐ ಸೂಚಿಸಿರುವ ಈ ವಿಧಾನಗಳನ್ನು ಬ್ಯಾಂಕ್ಗಳು ಅನುಸರಿಸಿದರೆ ಬ್ಯಾಂಕಿಂಗ್ ವ್ಯವಸ್ಥೆಯಲ್ಲಿ ವಾರಸುದಾರರಿಲ್ಲದ ಠೇವಣಿಗಳ ಪ್ರಮಾಣ ತಗ್ಗಲಿದೆ. ಜೊತೆಗೆ, ಅರ್ಹ ಹಕ್ಕುದಾರರಿಗೆ ಠೇವಣಿ ಮೊತ್ತವು ದೊರೆಯಲಿದೆ. </p>.<p>ಬ್ಯಾಂಕ್ಗಳಲ್ಲಿ ಹಲವು ವರ್ಷಗಳಿಂದ ಉಳಿದುಕೊಂಡಿರುವ ಠೇವಣಿಗಳನ್ನು ಹುಡುಕಿ, ಹಿಂದಕ್ಕೆ ಪಡೆದುಕೊಳ್ಳಲು ನೆರವು ನೀಡುವ ಕೇಂದ್ರೀಕೃತ ಪೋರ್ಟಲ್ (ಯುಡಿಜಿಎಎಂ) ವ್ಯವಸ್ಥೆಯನ್ನೂ ಅಭಿವೃದ್ಧಿಪಡಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ</strong>: ಪ್ರಸಕ್ತ ವರ್ಷದ ಮಾರ್ಚ್ ಅಂತ್ಯಕ್ಕೆ ದೇಶದ ಸರ್ಕಾರಿ ಮತ್ತು ಖಾಸಗಿ ಸ್ವಾಮ್ಯದ ಬ್ಯಾಂಕ್ಗಳಲ್ಲಿ ವಾರಸುದಾರರು ಇಲ್ಲದ ಠೇವಣಿಯು ಶೇ 26ರಷ್ಟು ಏರಿಕೆಯಾಗಿದ್ದು, ₹78,213 ಕೋಟಿಗೆ ತಲುಪಿದೆ ಎಂದು ಭಾರತೀಯ ರಿಸರ್ವ್ ಬ್ಯಾಂಕ್ ತಿಳಿಸಿದೆ.</p>.<p>2023ರ ಮಾರ್ಚ್ ಅಂತ್ಯಕ್ಕೆ ಠೇವಣಿದಾರರ ಶಿಕ್ಷಣ ಮತ್ತು ಜಾಗೃತಿ ನಿಧಿಯಲ್ಲಿನ (ಡಿಇಎ) ಮೊತ್ತವು ₹62,225 ಕೋಟಿ ಇತ್ತು ಎಂದು ಗುರುವಾರ ಬಿಡುಗಡೆಯಾಗಿರುವ ವರದಿ ತಿಳಿಸಿದೆ. </p>.<p>ಸಹಕಾರ ಬ್ಯಾಂಕ್ಗಳು ಸೇರಿ ಎಲ್ಲಾ ಬ್ಯಾಂಕ್ಗಳಲ್ಲಿ ಇರುವ ಈ ಖಾತೆಗಳಲ್ಲಿ ಕಳೆದ 10 ವರ್ಷಗಳಿಂದ ಯಾವುದೇ ವಹಿವಾಟು ನಡೆದಿಲ್ಲ ಎಂದು ಹೇಳಿದೆ. </p>.<p><strong>ಆರ್ಬಿಐ ಮಾರ್ಗಸೂಚಿ ಏನು?</strong></p>.<p>ವಾರಸುದಾರರು ಇಲ್ಲದ ಠೇವಣಿಗಳ ಪ್ರಮಾಣ ತಗ್ಗಿಸಲು ಮತ್ತು ಅರ್ಹ ಹಕ್ಕುದಾರರಿಗೆ ಠೇವಣಿ ಮರಳಿಸಲು ಆರ್ಬಿಐ ಹಲವಾರು ಕ್ರಮಗಳನ್ನು ಕೈಗೊಂಡಿದೆ. ಈ ಕುರಿತು ಪ್ರಸಕ್ತ ವರ್ಷದ ಆರಂಭದಲ್ಲಿಯೇ ಸಮಗ್ರ ಮಾರ್ಗಸೂಚಿಯನ್ನು ಪ್ರಕಟಿಸಿತ್ತು. </p>.<p>ಏಪ್ರಿಲ್ 1ರಂದು ಮತ್ತೆ ಪರಿಷ್ಕೃತ ಮಾರ್ಗಸೂಚಿ ಪ್ರಕಟಿಸಿದೆ. ವಾಣಿಜ್ಯ ಬ್ಯಾಂಕ್ಗಳು (ಪ್ರಾದೇಶಿಕ ಗ್ರಾಮೀಣ ಬ್ಯಾಂಕ್ಗಳು ಒಳಗೊಂಡಂತೆ) ಹಾಗೂ ಎಲ್ಲಾ ಸಹಕಾರ ಬ್ಯಾಂಕ್ಗಳಿಗೆ ಇದು ಅನ್ವಯಿಸಲಿದೆ.</p>.<p>ವಹಿವಾಟು ನಡೆಸದ ಖಾತೆಗಳು ಮತ್ತು ವಾರಸುದಾರರಿಲ್ಲದ ನಿಶ್ಚಿತ ಠೇವಣಿಗಳನ್ನು ಪ್ರತ್ಯೇಕವಾಗಿ ವರ್ಗೀಕರಿಸಬೇಕು ಎಂದು ಬ್ಯಾಂಕ್ಗಳಿಗೆ ಸೂಚಿಸಿದೆ.</p>.<p>ನಿಷ್ಕ್ರಿಯ ಖಾತೆಗಳ ಬಗ್ಗೆ ನಿಯಮಿತವಾಗಿ ಪರಿಶೀಲಿಸಬೇಕು. ಇವುಗಳ ಮೂಲಕ ವಂಚನೆ ನಡೆಯದಂತೆ ಮುಂಜಾಗ್ರತೆವಹಿಸಬೇಕು. ಠೇವಣಿ ಬಗ್ಗೆ ಹಕ್ಕುದಾರರು ಸಲ್ಲಿಸುವ ದೂರುಗಳ ಇತ್ಯರ್ಥಕ್ಕೆ ಕುಂದುಕೊರತೆ ಪರಿಹಾರ ಕಾರ್ಯವಿಧಾನವನ್ನು ಅಳವಡಿಸಿಕೊಳ್ಳಬೇಕಿದೆ ಎಂದು ನಿರ್ದೇಶನ ನೀಡಿದೆ. </p>.<p>ಇಂತಹ ಖಾತೆಗಳನ್ನು ಮರು ಸಕ್ರಿಯಗೊಳಿಸುವಿಕೆ, ಕ್ಲೈಮ್ಗಳ ಇತ್ಯರ್ಥ ಅಥವಾ ಅರ್ಹ ಹಕ್ಕುದಾರರು ಅಥವಾ ಉತ್ತರಾಧಿಕಾರಿಗಳು, ಅರ್ಹ ಖಾತೆದಾರರನ್ನು ಪತ್ತೆ ಹಚ್ಚಲು ಕ್ರಮವಹಿಸಬೇಕಿದೆ ಎಂದು ಸೂಚಿಸಿದೆ.</p>.<p>ಆರ್ಬಿಐ ಸೂಚಿಸಿರುವ ಈ ವಿಧಾನಗಳನ್ನು ಬ್ಯಾಂಕ್ಗಳು ಅನುಸರಿಸಿದರೆ ಬ್ಯಾಂಕಿಂಗ್ ವ್ಯವಸ್ಥೆಯಲ್ಲಿ ವಾರಸುದಾರರಿಲ್ಲದ ಠೇವಣಿಗಳ ಪ್ರಮಾಣ ತಗ್ಗಲಿದೆ. ಜೊತೆಗೆ, ಅರ್ಹ ಹಕ್ಕುದಾರರಿಗೆ ಠೇವಣಿ ಮೊತ್ತವು ದೊರೆಯಲಿದೆ. </p>.<p>ಬ್ಯಾಂಕ್ಗಳಲ್ಲಿ ಹಲವು ವರ್ಷಗಳಿಂದ ಉಳಿದುಕೊಂಡಿರುವ ಠೇವಣಿಗಳನ್ನು ಹುಡುಕಿ, ಹಿಂದಕ್ಕೆ ಪಡೆದುಕೊಳ್ಳಲು ನೆರವು ನೀಡುವ ಕೇಂದ್ರೀಕೃತ ಪೋರ್ಟಲ್ (ಯುಡಿಜಿಎಎಂ) ವ್ಯವಸ್ಥೆಯನ್ನೂ ಅಭಿವೃದ್ಧಿಪಡಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>