2017ರ ಜುಲೈ 1ರಂದು ದೇಶದಾದ್ಯಂತ ಜಿಎಸ್ಟಿ ಜಾರಿಗೆ ಬಂದ ಸಂದರ್ಭದಲ್ಲಿ ಮೌಲ್ಯವರ್ಧಿತ ತೆರಿಗೆ (ವ್ಯಾಟ್) ರದ್ದತಿಯಾಗಿತ್ತು. ಹೊಸ ತೆರಿಗೆ ವಿಧಿಸುವ ರಾಜ್ಯ ಸರ್ಕಾರಗಳ ಅಧಿಕಾರ ಮೊಟಕುಗೊಂಡಿತ್ತು. ಇದರಿಂದ ರಾಜ್ಯಗಳಿಗೆ ಆಗುವ ನಷ್ಟವನ್ನು ಭರ್ತಿ ಮಾಡಿಕೊಡಲಾಗುವುದು ಎಂದು ಕೇಂದ್ರ ಸರ್ಕಾರ ಭರವಸೆ ನೀಡಿತ್ತು. ಪರಿಹಾರ ಮೊತ್ತವನ್ನು ಶೇ 14ರ ದರದಲ್ಲಿ ನಿಗದಿಪಡಿಸಲಾಗಿತ್ತು. ತಂಬಾಕಿನ ಉತ್ಪನ್ನ, ಸಿಗರೇಟ್, ತಂಪು ಪಾನೀಯ, ವಾಹನ ಮತ್ತು ಕಲ್ಲಿದ್ದಲು ಮೇಲಿನ ಜಿಎಸ್ಟಿ ದರಗಳಿಗೆ ಹೆಚ್ಚುವರಿಯಾಗಿ ವಿಧಿಸುವ ಸೆಸ್ನಿಂದ ಸಂಗ್ರಹವಾಗುವ ಮೊತ್ತವನ್ನು ರಾಜ್ಯಗಳಿಗೆ ಪರಿಹಾರ ವಿತರಿಸಲು ವ್ಯವಸ್ಥೆ ಮಾಡಲಾಗಿತ್ತು.