ಕೈಗಾರಿಕೆ, ನಗರಾಭಿವೃದ್ಧಿ ಮತ್ತು ಗ್ರಾಮೀಣ ಅಭಿವೃದ್ಧಿ ಇಲಾಖೆಗಳ ಹಿರಿಯ ಅಧಿಕಾರಿಗಳೊಂದಿಗೆ ನಡೆಸಿದ ಚರ್ಚೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅದೆಷ್ಟೋ ಕಡೆಗಳಲ್ಲಿ ಕೈಗಾರಿಕಾ ಪ್ರದೇಶಗಳು ಉದ್ಯಮಗಳಿಗೆ ಇನ್ನೂ ಹಸ್ತಾಂತರವಾಗಿಲ್ಲ, ಆದರೆ ಸ್ಥಳೀಯಾಡಳಿತ ಸಂಸ್ಥೆಗಳಿಂದ ತೆರಿಗೆ ಆಕರಣೆ ಮಾಡಲಾಗುತ್ತಿದೆ, ಇನ್ನು ಕೆಲವು ಕಡೆ ನಿವೇಶನ ವಾಪಸ್ ಪಡೆಯುವ ಬಗ್ಗೆ ವಾರೆಂಟ್ ನೀಡಿದ ಪ್ರಸಂಗವೂ ಇದೆ. ಉದ್ಯಮಗಳಿಗೆ ಇದರಿಂದ ಬಹಳ ಆತಂಕದ ಸ್ಥಿತಿ ಇದ್ದು, ಇದನ್ನು ನಿವಾರಿಸಬೇಕಾಗಿದೆ.