<p><strong>ಮುಂಬೈ:</strong> 2024–25ನೇ ಆರ್ಥಿಕ ವರ್ಷದ ಮಾರ್ಚ್ ತ್ರೈಮಾಸಿಕದಲ್ಲಿ ಸರ್ಕಾರಿ ಸ್ವಾಮ್ಯದ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದ ನಿವ್ವಳ ಲಾಭದಲ್ಲಿ ಶೇ 50ರಷ್ಟು ಏರಿಕೆಯಾಗಿದೆ.</p>.<p>ಮಾರ್ಚ್ ತ್ರೈಮಾಸಿಕದಲ್ಲಿ ಒಟ್ಟು ₹4,985 ಕೋಟಿ ಲಾಭ ಗಳಿಸಿದೆ. 2023–24ನೇ ಆರ್ಥಿಕ ವರ್ಷದ ಇದೇ ಅವಧಿಯಲ್ಲಿ ₹3,311 ಕೋಟಿ ಲಾಭ ಗಳಿಸಲಾಗಿತ್ತು ಎಂದು ಬ್ಯಾಂಕ್ ಶುಕ್ರವಾರ ತಿಳಿಸಿದೆ.</p>.<p>ಒಟ್ಟು ವರಮಾನ ₹33,254 ಕೋಟಿ ಆಗಿದೆ. 2024–25ನೇ ಆರ್ಥಿಕ ವರ್ಷದಲ್ಲಿ ಶೇ 11ರಿಂದ ಶೇ 13ರಷ್ಟು ಸಾಲ ನೀಡಿಕೆಯ ಗುರಿ ಹೊಂದಲಾಗಿತ್ತು. ಒಟ್ಟಾರೆ ಶೇ 8.62ರಷ್ಟು ಗುರಿ ಸಾಧನೆಯಾಗಿದೆ ಎಂದು ತಿಳಿಸಿದೆ.</p>.<p>ಮಾಜಿ ಆರ್ಥಿಕ ಸಲಹೆಗಾರ ಕೃಷ್ಣಮೂರ್ತಿ ಸುಬ್ರಮಣಿಯನ್ ಬರೆದಿರುವ ‘ಇಂಡಿಯಾ@100: ಎನ್ವಿಷನಿಂಗ್ ಟುಮಾರೋಸ್ ಎಕಾನಿಕ್ ಪವರ್ಹೌಸ್’ ಕೃತಿಯ 2 ಲಕ್ಷ ಪ್ರತಿಗಳನ್ನು ₹7.25 ಕೋಟಿ ವೆಚ್ಚದಡಿ ಖರೀದಿಗೆ ಬ್ಯಾಂಕ್ ಮುಂದಾಗಿರುವ ವಿಷಯವು ವಿವಾದಕ್ಕೆ ಕಾರಣವಾಗಿದೆ.</p>.<p>ಸುದ್ದಿಗಾರರೊಂದಿಗೆ ಮಾತನಾಡಿದ ಬ್ಯಾಂಕ್ನ ವ್ಯವಸ್ಥಾಪಕ ನಿರ್ದೇಶಕಿ ಮತ್ತು ಸಿಇಒ ಎ. ಮಣಿಮೇಖಲೈ ಈ ಕುರಿತು ಸ್ಪಷ್ಟನೆ ನೀಡಲು ನಿರಾಕರಿಸಿದರು. ಆಡಳಿತ ಮಂಡಳಿಯು ಪ್ರಕರಣ ಕುರಿತು ತನಿಖೆಗೆ ಮುಂದಾಗಿದೆಯೇ? ಎಂಬ ಪ್ರಶ್ನೆಗೂ ಅವರು ಉತ್ತರಿಸಲಿಲ್ಲ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ:</strong> 2024–25ನೇ ಆರ್ಥಿಕ ವರ್ಷದ ಮಾರ್ಚ್ ತ್ರೈಮಾಸಿಕದಲ್ಲಿ ಸರ್ಕಾರಿ ಸ್ವಾಮ್ಯದ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದ ನಿವ್ವಳ ಲಾಭದಲ್ಲಿ ಶೇ 50ರಷ್ಟು ಏರಿಕೆಯಾಗಿದೆ.</p>.<p>ಮಾರ್ಚ್ ತ್ರೈಮಾಸಿಕದಲ್ಲಿ ಒಟ್ಟು ₹4,985 ಕೋಟಿ ಲಾಭ ಗಳಿಸಿದೆ. 2023–24ನೇ ಆರ್ಥಿಕ ವರ್ಷದ ಇದೇ ಅವಧಿಯಲ್ಲಿ ₹3,311 ಕೋಟಿ ಲಾಭ ಗಳಿಸಲಾಗಿತ್ತು ಎಂದು ಬ್ಯಾಂಕ್ ಶುಕ್ರವಾರ ತಿಳಿಸಿದೆ.</p>.<p>ಒಟ್ಟು ವರಮಾನ ₹33,254 ಕೋಟಿ ಆಗಿದೆ. 2024–25ನೇ ಆರ್ಥಿಕ ವರ್ಷದಲ್ಲಿ ಶೇ 11ರಿಂದ ಶೇ 13ರಷ್ಟು ಸಾಲ ನೀಡಿಕೆಯ ಗುರಿ ಹೊಂದಲಾಗಿತ್ತು. ಒಟ್ಟಾರೆ ಶೇ 8.62ರಷ್ಟು ಗುರಿ ಸಾಧನೆಯಾಗಿದೆ ಎಂದು ತಿಳಿಸಿದೆ.</p>.<p>ಮಾಜಿ ಆರ್ಥಿಕ ಸಲಹೆಗಾರ ಕೃಷ್ಣಮೂರ್ತಿ ಸುಬ್ರಮಣಿಯನ್ ಬರೆದಿರುವ ‘ಇಂಡಿಯಾ@100: ಎನ್ವಿಷನಿಂಗ್ ಟುಮಾರೋಸ್ ಎಕಾನಿಕ್ ಪವರ್ಹೌಸ್’ ಕೃತಿಯ 2 ಲಕ್ಷ ಪ್ರತಿಗಳನ್ನು ₹7.25 ಕೋಟಿ ವೆಚ್ಚದಡಿ ಖರೀದಿಗೆ ಬ್ಯಾಂಕ್ ಮುಂದಾಗಿರುವ ವಿಷಯವು ವಿವಾದಕ್ಕೆ ಕಾರಣವಾಗಿದೆ.</p>.<p>ಸುದ್ದಿಗಾರರೊಂದಿಗೆ ಮಾತನಾಡಿದ ಬ್ಯಾಂಕ್ನ ವ್ಯವಸ್ಥಾಪಕ ನಿರ್ದೇಶಕಿ ಮತ್ತು ಸಿಇಒ ಎ. ಮಣಿಮೇಖಲೈ ಈ ಕುರಿತು ಸ್ಪಷ್ಟನೆ ನೀಡಲು ನಿರಾಕರಿಸಿದರು. ಆಡಳಿತ ಮಂಡಳಿಯು ಪ್ರಕರಣ ಕುರಿತು ತನಿಖೆಗೆ ಮುಂದಾಗಿದೆಯೇ? ಎಂಬ ಪ್ರಶ್ನೆಗೂ ಅವರು ಉತ್ತರಿಸಲಿಲ್ಲ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>