<p><strong>ನವದೆಹಲಿ</strong>: ‘ಎಲ್ಐಸಿಯ ಷೇರುಗಳನ್ನು ಸಾರ್ವಜನಿಕರ ಖರೀದಿಗೆ ಮುಕ್ತವಾಗಿಸುವಾಗ (ಐಪಿಒ), ಖರೀದಿಗೆ ಮುಕ್ತವಾಗಿಸುವ ಒಟ್ಟು ಷೇರುಗಳಲ್ಲಿ ಗರಿಷ್ಠ ಶೇಕಡ 10ರಷ್ಟನ್ನು ಪಾಲಿಸಿದಾರರಿಗೆ ಮೀಸಲಿಡಲಾಗುವುದು’ ಎಂದು ಕೇಂದ್ರ ಹಣಕಾಸು ಖಾತೆ ರಾಜ್ಯ ಸಚಿವ ಅನುರಾಗ್ ಸಿಂಗ್ ಠಾಕೂರ್ ಮಂಗಳವಾರ ತಿಳಿಸಿದ್ದಾರೆ.</p>.<p>ಪಾಲಿಸಿದಾರರ ಹಿತರಕ್ಷಣೆಯ ಉದ್ದೇಶದಿಂದ ಕೇಂದ್ರ ಸರ್ಕಾರವೇ ಗರಿಷ್ಠ ಷೇರುಪಾಲು ಉಳಿಸಿಕೊಳ್ಳಲಿದ್ದು, ಆಡಳಿತಾತ್ಮಕ ನಿಯಂತ್ರಣವನ್ನೂತನ್ನ ಬಳಿಯೇ ಇಟ್ಟುಕೊಳ್ಳಲಿದೆ ಎಂದು ಅವರು ಹೇಳಿದ್ದಾರೆ.</p>.<p>ಹಣಕಾಸು ಮಸೂದೆ 2021-22ರಲ್ಲಿ, ಎಲ್ಐಸಿಯ ಜೀವ ವಿಮಾ ಪಾಲಿಸಿದಾರರಿಗೆ ಐಪಿಒದಲ್ಲಿ ಶೇ 10ರವರೆಗೆ ಷೇರುಗಳನ್ನು ಮೀಸಲಿಡುವ ಪ್ರಸ್ತಾಪ ಇದೆ.</p>.<p>ಏಪ್ರಿಲ್ 1ರಿಂದ ಆರಂಭವಾಗಲಿರುವ ಮುಂದಿನ ಹಣಕಾಸು ವರ್ಷದಲ್ಲಿ ಎಲ್ಐಸಿ ಐಪಿಒ ಬಿಡುಗಡೆ ಮಾಡುವುದಾಗಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬಜೆಟ್ ಭಾಷಣದಲ್ಲಿ ತಿಳಿಸಿದ್ದರು.</p>.<p>ಎಲ್ಐಸಿ ತಿದ್ದುಪಡಿ ಕಾಯ್ದೆಯನ್ನು ಹಣಕಾಸು ಮಸೂದೆಯ ಭಾಗವನ್ನಾಗಿ ಮಾಡಲಾಗಿದೆ. ಐಪಿಒಗೂ ಮುಂಚಿನ ವಹಿವಾಟಿನ ಸಲಹೆಗಾರರನ್ನಾಗಿ ಡೆಲಾಯ್ಟ್ ಮತ್ತು ಎಸ್ಬಿಐ ಕ್ಯಾಪ್ಸ್ ಕಂಪನಿಗಳನ್ನು ನೇಮಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ‘ಎಲ್ಐಸಿಯ ಷೇರುಗಳನ್ನು ಸಾರ್ವಜನಿಕರ ಖರೀದಿಗೆ ಮುಕ್ತವಾಗಿಸುವಾಗ (ಐಪಿಒ), ಖರೀದಿಗೆ ಮುಕ್ತವಾಗಿಸುವ ಒಟ್ಟು ಷೇರುಗಳಲ್ಲಿ ಗರಿಷ್ಠ ಶೇಕಡ 10ರಷ್ಟನ್ನು ಪಾಲಿಸಿದಾರರಿಗೆ ಮೀಸಲಿಡಲಾಗುವುದು’ ಎಂದು ಕೇಂದ್ರ ಹಣಕಾಸು ಖಾತೆ ರಾಜ್ಯ ಸಚಿವ ಅನುರಾಗ್ ಸಿಂಗ್ ಠಾಕೂರ್ ಮಂಗಳವಾರ ತಿಳಿಸಿದ್ದಾರೆ.</p>.<p>ಪಾಲಿಸಿದಾರರ ಹಿತರಕ್ಷಣೆಯ ಉದ್ದೇಶದಿಂದ ಕೇಂದ್ರ ಸರ್ಕಾರವೇ ಗರಿಷ್ಠ ಷೇರುಪಾಲು ಉಳಿಸಿಕೊಳ್ಳಲಿದ್ದು, ಆಡಳಿತಾತ್ಮಕ ನಿಯಂತ್ರಣವನ್ನೂತನ್ನ ಬಳಿಯೇ ಇಟ್ಟುಕೊಳ್ಳಲಿದೆ ಎಂದು ಅವರು ಹೇಳಿದ್ದಾರೆ.</p>.<p>ಹಣಕಾಸು ಮಸೂದೆ 2021-22ರಲ್ಲಿ, ಎಲ್ಐಸಿಯ ಜೀವ ವಿಮಾ ಪಾಲಿಸಿದಾರರಿಗೆ ಐಪಿಒದಲ್ಲಿ ಶೇ 10ರವರೆಗೆ ಷೇರುಗಳನ್ನು ಮೀಸಲಿಡುವ ಪ್ರಸ್ತಾಪ ಇದೆ.</p>.<p>ಏಪ್ರಿಲ್ 1ರಿಂದ ಆರಂಭವಾಗಲಿರುವ ಮುಂದಿನ ಹಣಕಾಸು ವರ್ಷದಲ್ಲಿ ಎಲ್ಐಸಿ ಐಪಿಒ ಬಿಡುಗಡೆ ಮಾಡುವುದಾಗಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬಜೆಟ್ ಭಾಷಣದಲ್ಲಿ ತಿಳಿಸಿದ್ದರು.</p>.<p>ಎಲ್ಐಸಿ ತಿದ್ದುಪಡಿ ಕಾಯ್ದೆಯನ್ನು ಹಣಕಾಸು ಮಸೂದೆಯ ಭಾಗವನ್ನಾಗಿ ಮಾಡಲಾಗಿದೆ. ಐಪಿಒಗೂ ಮುಂಚಿನ ವಹಿವಾಟಿನ ಸಲಹೆಗಾರರನ್ನಾಗಿ ಡೆಲಾಯ್ಟ್ ಮತ್ತು ಎಸ್ಬಿಐ ಕ್ಯಾಪ್ಸ್ ಕಂಪನಿಗಳನ್ನು ನೇಮಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>