<p><strong>ಚೆನ್ನೈ:</strong> ಅಮೆರಿಕವು ಭಾರತದ ಸರಕುಗಳ ಮೇಲೆ ಶೇ 50ರಷ್ಟು ಸುಂಕ ಹೇರಿರುವುದು ತಮಿಳುನಾಡಿನ ಜವಳಿ ವಲಯದ ಅಂದಾಜು 30 ಲಕ್ಷ ಉದ್ಯೋಗಿಗಳ ಕೆಲಸದ ಮೇಲೆ ನಕಾರಾತ್ಮಕ ಪರಿಣಾಮ ಬೀರಲಿದೆ ಎಂದು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಹೇಳಿದ್ದಾರೆ.</p>.<p>2024–25ರ ಆರ್ಥಿಕ ವರ್ಷದಲ್ಲಿ ದೇಶದ ಜವಳಿ ಉತ್ಪನ್ನಗಳ ರಫ್ತಿನಲ್ಲಿ ತಮಿಳುನಾಡು ಶೇ 28ರಷ್ಟು ಪಾಲನ್ನು ಹೊಂದಿದ್ದು, ದೇಶದ ಇತರೆ ರಾಜ್ಯಗಳಿಗಿಂತ ಹೆಚ್ಚಿನ ಕೊಡುಗೆ ನೀಡಿದೆ. ಈ ವಲಯವು 75 ಲಕ್ಷ ಉದ್ಯೋಗಿಗಳನ್ನು ಹೊಂದಿದ್ದು, ಸುಂಕ ಹೆಚ್ಚಳದಿಂದಾಗಿ ಅಂದಾಜು 30 ಲಕ್ಷ ಉದ್ಯೋಗಿಗಳ ಉದ್ಯೋಗವು ಅಪಾಯದಲ್ಲಿದೆ ಎಂದು ಶನಿವಾರ ಹೇಳಿದ್ದಾರೆ. </p>.<p>ಜವಳಿ ವಲಯಕ್ಕೆ ಶೀಘ್ರ ನೆರವಿನ ಅಗತ್ಯವಿದೆ. ಜವಳಿ ಉತ್ಪನ್ನಗಳನ್ನು ಜಿಎಸ್ಟಿಯ ಶೇ 5ರ ಹಂತದಲ್ಲಿ ತರಬೇಕು, ಎಲ್ಲಾ ಬಗೆಯ ಹತ್ತಿ ಆಮದಿಗೆ ಸುಂಕ ವಿನಾಯಿತಿ ನೀಡಬೇಕು ಎಂದು ಕೇಂದ್ರವನ್ನು ಕೋರಿದ್ದಾರೆ. </p>.<p><strong>ಪ್ರಧಾನಿಗೆ ಪತ್ರ:</strong> ದೇಶದ ಸರಕುಗಳ ಮೇಲೆ ಅಮೆರಿಕದ ಸುಂಕದ ಹೆಚ್ಚಳವು ಕೈಗಾರಿಕೆಗಳು ಮತ್ತು ಉದ್ಯೋಗದ ಮೇಲೆ ಪರಿಣಾಮ ಬೀರಲಿದೆ. ಹೀಗಾಗಿ, ಕೇಂದ್ರ ಸರ್ಕಾರವು ವಿಶೇಷ ಹಣಕಾಸಿನ ನೆರವನ್ನು ನೀಡಬೇಕೆಂದು ಕೋರಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸ್ಟಾಲಿನ್ ಪತ್ರ ಬರೆದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚೆನ್ನೈ:</strong> ಅಮೆರಿಕವು ಭಾರತದ ಸರಕುಗಳ ಮೇಲೆ ಶೇ 50ರಷ್ಟು ಸುಂಕ ಹೇರಿರುವುದು ತಮಿಳುನಾಡಿನ ಜವಳಿ ವಲಯದ ಅಂದಾಜು 30 ಲಕ್ಷ ಉದ್ಯೋಗಿಗಳ ಕೆಲಸದ ಮೇಲೆ ನಕಾರಾತ್ಮಕ ಪರಿಣಾಮ ಬೀರಲಿದೆ ಎಂದು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಹೇಳಿದ್ದಾರೆ.</p>.<p>2024–25ರ ಆರ್ಥಿಕ ವರ್ಷದಲ್ಲಿ ದೇಶದ ಜವಳಿ ಉತ್ಪನ್ನಗಳ ರಫ್ತಿನಲ್ಲಿ ತಮಿಳುನಾಡು ಶೇ 28ರಷ್ಟು ಪಾಲನ್ನು ಹೊಂದಿದ್ದು, ದೇಶದ ಇತರೆ ರಾಜ್ಯಗಳಿಗಿಂತ ಹೆಚ್ಚಿನ ಕೊಡುಗೆ ನೀಡಿದೆ. ಈ ವಲಯವು 75 ಲಕ್ಷ ಉದ್ಯೋಗಿಗಳನ್ನು ಹೊಂದಿದ್ದು, ಸುಂಕ ಹೆಚ್ಚಳದಿಂದಾಗಿ ಅಂದಾಜು 30 ಲಕ್ಷ ಉದ್ಯೋಗಿಗಳ ಉದ್ಯೋಗವು ಅಪಾಯದಲ್ಲಿದೆ ಎಂದು ಶನಿವಾರ ಹೇಳಿದ್ದಾರೆ. </p>.<p>ಜವಳಿ ವಲಯಕ್ಕೆ ಶೀಘ್ರ ನೆರವಿನ ಅಗತ್ಯವಿದೆ. ಜವಳಿ ಉತ್ಪನ್ನಗಳನ್ನು ಜಿಎಸ್ಟಿಯ ಶೇ 5ರ ಹಂತದಲ್ಲಿ ತರಬೇಕು, ಎಲ್ಲಾ ಬಗೆಯ ಹತ್ತಿ ಆಮದಿಗೆ ಸುಂಕ ವಿನಾಯಿತಿ ನೀಡಬೇಕು ಎಂದು ಕೇಂದ್ರವನ್ನು ಕೋರಿದ್ದಾರೆ. </p>.<p><strong>ಪ್ರಧಾನಿಗೆ ಪತ್ರ:</strong> ದೇಶದ ಸರಕುಗಳ ಮೇಲೆ ಅಮೆರಿಕದ ಸುಂಕದ ಹೆಚ್ಚಳವು ಕೈಗಾರಿಕೆಗಳು ಮತ್ತು ಉದ್ಯೋಗದ ಮೇಲೆ ಪರಿಣಾಮ ಬೀರಲಿದೆ. ಹೀಗಾಗಿ, ಕೇಂದ್ರ ಸರ್ಕಾರವು ವಿಶೇಷ ಹಣಕಾಸಿನ ನೆರವನ್ನು ನೀಡಬೇಕೆಂದು ಕೋರಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸ್ಟಾಲಿನ್ ಪತ್ರ ಬರೆದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>