<p>ಹುಬ್ಬಳ್ಳಿ: ‘ಉತ್ತರ ಕರ್ನಾಟಕ ಭಾಗದ ಆರ್ಥಿಕ ಅಭಿವೃದ್ಧಿಗೆ ಗಂಭೀರ ಚಿಂತನೆ ಮಾಡುವ ಅಗತ್ಯ ಇದೆ’ ಎಂದು ಬೆಳಗಾವಿ ಸಂಸದ ಜಗದೀಶ ಶೆಟ್ಟರ್ ಹೇಳಿದರು.</p>.<p>ನಗರದ ಎಪಿಎಂಸಿ ಆವರಣದ ವಿವಿಧೋದ್ದೇಶ ಕೈಗಾರಿಕಾ ಮತ್ತು ವಾಣಿಜ್ಯ ವಸ್ತುಪ್ರದರ್ಶನ ಕೇಂದ್ರದಲ್ಲಿ ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆಯಿಂದ ಆಯೋಜಿಸಿರುವ ‘ಇನ್ಕಾಮೆಕ್ಸ್–2026’ ಬೃಹತ್ ವಸ್ತುಪ್ರದರ್ಶನದ ಅಂಗವಾಗಿ ಮಂಗಳವಾರ ನಡೆದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ರಾಜ್ಯ ಸರ್ಕಾರವು ಪ್ರೊ.ಎಂ. ಗೋವಿಂದರಾವ್ ಅಧ್ಯಕ್ಷತೆಯಲ್ಲಿ ರಚಿಸಿದ್ದ ಪ್ರಾದೇಶಿಕ ಅಸಮತೋಲನಾ ನಿವಾರಣೆ ಸಮಿತಿ ವರದಿಯಂತೆ ರಾಜ್ಯದ 236 ತಾಲ್ಲೂಕುಗಳ ಪೈಕಿ 177 ತಾಲ್ಲೂಕುಗಳು ಹಿಂದುಳಿದಿವೆ. 59 ಅತಿ ಹಿಂದುಳಿದ ತಾಲ್ಲೂಕುಗಳ ಪೈಕಿ 43 ತಾಲ್ಲೂಕುಗಳು ಉತ್ತರ ಕರ್ನಾಟಕ ಭಾಗದಲ್ಲಿವೆ’ ಎಂದರು.</p>.<p>‘ಡಿ.ಎಂ. ನಂಜುಂಡಪ್ಪ ವರದಿ ಪ್ರಕಾರ ಹಿಂದುಳಿದ ತಾಲ್ಲೂಕುಗಳ ಅಭಿವೃದ್ಧಿಗೆ ಈವರೆಗೆ ₹35 ಸಾವಿರ ಕೋಟಿ ವೆಚ್ಚ ಮಾಡಲಾಗಿದೆ. ಆದರೆ, ಅದರಿಂದ ಯಾವುದೇ ಪ್ರಯೋಜನವಾಗಿಲ್ಲ’ ಎಂದು ಹೇಳಿದರು.</p>.<p>‘ನೆರೆಯ ರಾಜ್ಯಗಳು ಅಗತ್ಯ ಸೌಲಭ್ಯಗಳನ್ನು ನೀಡುವ ಮೂಲಕ ಕಂಪನಿಗಳನ್ನು ಹೂಡಿಕೆಗೆ ಆಕರ್ಷಿಸುತ್ತಿವೆ. ಜಿಲ್ಲೆಯ ಮಮ್ಮಿಗಟ್ಟಿಯಲ್ಲಿ ಎಫ್ಎಂಸಿಜಿ ಕ್ಲಸ್ಟರ್ಗೆ 200 ಎಕರೆ ಜಾಗ ಮೀಸಲಿಡಲಾಗಿತ್ತು. 20 ಕಂಪನಿಗಳ ಜತೆಗೆ ಒಪ್ಪಂದವನ್ನೂ ಮಾಡಿಕೊಳ್ಳಲಾಗಿತ್ತು. ಆದರೆ, ಭೂಮಿಯ ದರವನ್ನು ಎಕರೆಗೆ ₹1.39 ಕೋಟಿಗೆ ಹೆಚ್ಚಿಸಿದ್ದರಿಂದ ಯಾವ ಕಂಪನಿಗಳು ಇಲ್ಲಿಗೆ ಬರಲಿಲ್ಲ’ ಎಂದು ಬೇಸರ ವ್ಯಕ್ತಪಡಿಸಿದರು.</p>.<p>‘ಮೊದಲು ನಿಗದಿಪಡಿಸಿದ್ದ ದರಕ್ಕೆ ಭೂಮಿ ನೀಡಿದ್ದರೆ ಕಂಪನಿಗಳು ಇಲ್ಲಿ ಹೂಡಿಕೆ ಮಾಡುತ್ತಿದ್ದವು. ಇದರಿಂದ ಒಂದು ಲಕ್ಷ ಉದ್ಯೋಗಗಳು ಸೃಷ್ಟಿಯಾಗುತ್ತಿದ್ದವು. ಜಾಗದ ದರವನ್ನು ಕಡಿಮೆ ಮಾಡಿದರೆ ಕಂಪನಿಗಳು ಮತ್ತೆ ಹೂಡಿಕೆ ಮಾಡಲು ಮುಂದೆ ಬರುತ್ತವೆ’ ಎಂದರು.</p>.<p>‘ಧಾರವಾಡ–ಬೆಳಗಾವಿ ರೈಲು ಮಾರ್ಗ ನಿರ್ಮಾಣ ಮಾಡಬೇಕು ಎಂಬುದು ದಿವಂಗತ ಸುರೇಶ ಅಂಗಡಿ ಅವರ ಕನಸಾಗಿತ್ತು. ಈ ಯೋಜನೆಗೆ 1,700 ಎಕರೆ ಭೂಸ್ವಾಧೀನಕ್ಕೆ ಅಂತಿಮ ಅಧಿಸೂಚನೆ ಹೊರಡಿಸಲಾಗಿದೆ. ಧಾರವಾಡ ಜಿಲ್ಲೆಯಲ್ಲಿ 60 ಎಕರೆ ಮಾತ್ರ ಭೂಸ್ವಾಧೀನ ಪ್ರಕ್ರಿಯೆ ಬಾಕಿ ಇದೆ. ರಾಜ್ಯ ಸರ್ಕಾರ ಭೂಸ್ವಾಧೀನ ಮಾಡಿ, ಪರಿಹಾರ ನೀಡಿದರೆ ಆರೇಳು ತಿಂಗಳಲ್ಲಿ ರೈಲು ಮಾರ್ಗದ ಕಾಮಗಾರಿ ಆರಂಭವಾಗಲಿದೆ’ ಎಂದು ತಿಳಿಸಿದರು.</p>.<p>‘ದೆಹಲಿ, ಬೆಂಗಳೂರಿನಂತೆ ಇಲ್ಲಿಯೂ ಸುಸಜ್ಜಿತ ಪ್ರದರ್ಶನ ಕೇಂದ್ರ ಇರಬೇಕು ಎಂಬ ಉದ್ದೇಶದಿಂದ ನಾನು ಕಂದಾಯ ಸಚಿವನಾಗಿದ್ಧಾಗ ಸಂಸ್ಥೆಗೆ ಒಂಬತ್ತು ಎಕರೆ ಜಾಗ ನೀಡಲಾಗಿತ್ತು. ಆದರೆ, ನಿರೀಕ್ಷೆಯಂತೆ ಇಲ್ಲಿ ಕಾರ್ಯಕ್ರಮಗಳು ನಡೆಯುತ್ತಿಲ್ಲ. ಮೂರ್ನಾಲ್ಕು ತಿಂಗಳಿಗೊಮ್ಮೆಯಾದರೂ ಕಾರ್ಯಕ್ರಮಗಳು ನಡೆಯಬೇಕು’ ಎಂದರು.</p>.<p>ವಿಧಾನ ಪರಿಷತ್ ಸದಸ್ಯ ಪ್ರದೀಪ ಶೆಟ್ಟರ್, ಹುಬ್ಬಳ್ಳಿ–ಧಾರವಾಡ ಮಹಾನಗರ ಪಾಲಿಕೆ ಸದಸ್ಯ ಮಲ್ಲಿಕಾರ್ಜುನ ಗುಂಡೂರ, ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆ ಅಧ್ಯಕ್ಷ ಜಿ.ಕೆ. ಆದಪ್ಪಗೌಡರ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260429-24-1012707888</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹುಬ್ಬಳ್ಳಿ: ‘ಉತ್ತರ ಕರ್ನಾಟಕ ಭಾಗದ ಆರ್ಥಿಕ ಅಭಿವೃದ್ಧಿಗೆ ಗಂಭೀರ ಚಿಂತನೆ ಮಾಡುವ ಅಗತ್ಯ ಇದೆ’ ಎಂದು ಬೆಳಗಾವಿ ಸಂಸದ ಜಗದೀಶ ಶೆಟ್ಟರ್ ಹೇಳಿದರು.</p>.<p>ನಗರದ ಎಪಿಎಂಸಿ ಆವರಣದ ವಿವಿಧೋದ್ದೇಶ ಕೈಗಾರಿಕಾ ಮತ್ತು ವಾಣಿಜ್ಯ ವಸ್ತುಪ್ರದರ್ಶನ ಕೇಂದ್ರದಲ್ಲಿ ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆಯಿಂದ ಆಯೋಜಿಸಿರುವ ‘ಇನ್ಕಾಮೆಕ್ಸ್–2026’ ಬೃಹತ್ ವಸ್ತುಪ್ರದರ್ಶನದ ಅಂಗವಾಗಿ ಮಂಗಳವಾರ ನಡೆದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ರಾಜ್ಯ ಸರ್ಕಾರವು ಪ್ರೊ.ಎಂ. ಗೋವಿಂದರಾವ್ ಅಧ್ಯಕ್ಷತೆಯಲ್ಲಿ ರಚಿಸಿದ್ದ ಪ್ರಾದೇಶಿಕ ಅಸಮತೋಲನಾ ನಿವಾರಣೆ ಸಮಿತಿ ವರದಿಯಂತೆ ರಾಜ್ಯದ 236 ತಾಲ್ಲೂಕುಗಳ ಪೈಕಿ 177 ತಾಲ್ಲೂಕುಗಳು ಹಿಂದುಳಿದಿವೆ. 59 ಅತಿ ಹಿಂದುಳಿದ ತಾಲ್ಲೂಕುಗಳ ಪೈಕಿ 43 ತಾಲ್ಲೂಕುಗಳು ಉತ್ತರ ಕರ್ನಾಟಕ ಭಾಗದಲ್ಲಿವೆ’ ಎಂದರು.</p>.<p>‘ಡಿ.ಎಂ. ನಂಜುಂಡಪ್ಪ ವರದಿ ಪ್ರಕಾರ ಹಿಂದುಳಿದ ತಾಲ್ಲೂಕುಗಳ ಅಭಿವೃದ್ಧಿಗೆ ಈವರೆಗೆ ₹35 ಸಾವಿರ ಕೋಟಿ ವೆಚ್ಚ ಮಾಡಲಾಗಿದೆ. ಆದರೆ, ಅದರಿಂದ ಯಾವುದೇ ಪ್ರಯೋಜನವಾಗಿಲ್ಲ’ ಎಂದು ಹೇಳಿದರು.</p>.<p>‘ನೆರೆಯ ರಾಜ್ಯಗಳು ಅಗತ್ಯ ಸೌಲಭ್ಯಗಳನ್ನು ನೀಡುವ ಮೂಲಕ ಕಂಪನಿಗಳನ್ನು ಹೂಡಿಕೆಗೆ ಆಕರ್ಷಿಸುತ್ತಿವೆ. ಜಿಲ್ಲೆಯ ಮಮ್ಮಿಗಟ್ಟಿಯಲ್ಲಿ ಎಫ್ಎಂಸಿಜಿ ಕ್ಲಸ್ಟರ್ಗೆ 200 ಎಕರೆ ಜಾಗ ಮೀಸಲಿಡಲಾಗಿತ್ತು. 20 ಕಂಪನಿಗಳ ಜತೆಗೆ ಒಪ್ಪಂದವನ್ನೂ ಮಾಡಿಕೊಳ್ಳಲಾಗಿತ್ತು. ಆದರೆ, ಭೂಮಿಯ ದರವನ್ನು ಎಕರೆಗೆ ₹1.39 ಕೋಟಿಗೆ ಹೆಚ್ಚಿಸಿದ್ದರಿಂದ ಯಾವ ಕಂಪನಿಗಳು ಇಲ್ಲಿಗೆ ಬರಲಿಲ್ಲ’ ಎಂದು ಬೇಸರ ವ್ಯಕ್ತಪಡಿಸಿದರು.</p>.<p>‘ಮೊದಲು ನಿಗದಿಪಡಿಸಿದ್ದ ದರಕ್ಕೆ ಭೂಮಿ ನೀಡಿದ್ದರೆ ಕಂಪನಿಗಳು ಇಲ್ಲಿ ಹೂಡಿಕೆ ಮಾಡುತ್ತಿದ್ದವು. ಇದರಿಂದ ಒಂದು ಲಕ್ಷ ಉದ್ಯೋಗಗಳು ಸೃಷ್ಟಿಯಾಗುತ್ತಿದ್ದವು. ಜಾಗದ ದರವನ್ನು ಕಡಿಮೆ ಮಾಡಿದರೆ ಕಂಪನಿಗಳು ಮತ್ತೆ ಹೂಡಿಕೆ ಮಾಡಲು ಮುಂದೆ ಬರುತ್ತವೆ’ ಎಂದರು.</p>.<p>‘ಧಾರವಾಡ–ಬೆಳಗಾವಿ ರೈಲು ಮಾರ್ಗ ನಿರ್ಮಾಣ ಮಾಡಬೇಕು ಎಂಬುದು ದಿವಂಗತ ಸುರೇಶ ಅಂಗಡಿ ಅವರ ಕನಸಾಗಿತ್ತು. ಈ ಯೋಜನೆಗೆ 1,700 ಎಕರೆ ಭೂಸ್ವಾಧೀನಕ್ಕೆ ಅಂತಿಮ ಅಧಿಸೂಚನೆ ಹೊರಡಿಸಲಾಗಿದೆ. ಧಾರವಾಡ ಜಿಲ್ಲೆಯಲ್ಲಿ 60 ಎಕರೆ ಮಾತ್ರ ಭೂಸ್ವಾಧೀನ ಪ್ರಕ್ರಿಯೆ ಬಾಕಿ ಇದೆ. ರಾಜ್ಯ ಸರ್ಕಾರ ಭೂಸ್ವಾಧೀನ ಮಾಡಿ, ಪರಿಹಾರ ನೀಡಿದರೆ ಆರೇಳು ತಿಂಗಳಲ್ಲಿ ರೈಲು ಮಾರ್ಗದ ಕಾಮಗಾರಿ ಆರಂಭವಾಗಲಿದೆ’ ಎಂದು ತಿಳಿಸಿದರು.</p>.<p>‘ದೆಹಲಿ, ಬೆಂಗಳೂರಿನಂತೆ ಇಲ್ಲಿಯೂ ಸುಸಜ್ಜಿತ ಪ್ರದರ್ಶನ ಕೇಂದ್ರ ಇರಬೇಕು ಎಂಬ ಉದ್ದೇಶದಿಂದ ನಾನು ಕಂದಾಯ ಸಚಿವನಾಗಿದ್ಧಾಗ ಸಂಸ್ಥೆಗೆ ಒಂಬತ್ತು ಎಕರೆ ಜಾಗ ನೀಡಲಾಗಿತ್ತು. ಆದರೆ, ನಿರೀಕ್ಷೆಯಂತೆ ಇಲ್ಲಿ ಕಾರ್ಯಕ್ರಮಗಳು ನಡೆಯುತ್ತಿಲ್ಲ. ಮೂರ್ನಾಲ್ಕು ತಿಂಗಳಿಗೊಮ್ಮೆಯಾದರೂ ಕಾರ್ಯಕ್ರಮಗಳು ನಡೆಯಬೇಕು’ ಎಂದರು.</p>.<p>ವಿಧಾನ ಪರಿಷತ್ ಸದಸ್ಯ ಪ್ರದೀಪ ಶೆಟ್ಟರ್, ಹುಬ್ಬಳ್ಳಿ–ಧಾರವಾಡ ಮಹಾನಗರ ಪಾಲಿಕೆ ಸದಸ್ಯ ಮಲ್ಲಿಕಾರ್ಜುನ ಗುಂಡೂರ, ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆ ಅಧ್ಯಕ್ಷ ಜಿ.ಕೆ. ಆದಪ್ಪಗೌಡರ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260429-24-1012707888</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>