ನವದೆಹಲಿ: ದೇಶದಲ್ಲಿ ಆ್ಯಪಲ್ ಐಫೋನ್ ಉತ್ಪಾದನಾ ಘಟಕ ಸ್ಥಾಪನೆಗೆ ವೇದಾಂತ ಲಿಮಿಟೆಡ್ ಮುಂದಾಗಿದೆ.
ಆ್ಯಪಲ್ ಕಂಪನಿಯ ಐಫೋನ್ ಮತ್ತು ಟಿವಿ, ಇತರ ಉಪಕರಣಗಳನ್ನು ಉತ್ಪಾದಿಸುವ ಘಟಕ ಸ್ಥಾಪಿಸಲು ವೇದಾಂತ ಲಿ. ನಿರ್ಧರಿಸಿದೆ. ಮಹಾರಾಷ್ಟ್ರದಲ್ಲಿ ನೂತನ ಘಟಕ ನಿರ್ಮಿಸುವ ಗುರಿಯಿದೆ ಎಂದು ಸಿಎನ್ಬಿಸಿ ಟಿವಿ18ಗೆ ವೇದಾಂತ ಚೇರ್ಮನ್ ಅನಿಲ್ ಅಗರ್ವಾಲ್ ಸಂದರ್ಶನವೊಂದರಲ್ಲಿ ಹೇಳಿದ್ದಾರೆ.
ಆದರೆ ಈ ಕುರಿತು ಆ್ಯಪಲ್ ಸಂಸ್ಥೆ ಯಾವುದೇ ಹೇಳಿಕೆ ಬಿಡುಗಡೆ ಮಾಡಿಲ್ಲ.