ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲಾಕ್‌ಡೌನ್ | ಪ್ಯಾಕೇಜ್‌ ಘೋಷಿಸಿದ ಭಾರತ ಸರ್ಕಾರಕ್ಕೆ ವ್ಯಂಗ್ಯವಾಡಿದ ವಿಜಯ್‌ ಮಲ್ಯ

Last Updated 14 ಮೇ 2020, 6:43 IST
ಅಕ್ಷರ ಗಾತ್ರ

ನವದೆಹಲಿ: ಕೋವಿಡ್‌–19 ಬಿಕ್ಕಿಟ್ಟಿನ ಹಿನ್ನೆಲೆ ಕೇಂದ್ರ ಸರ್ಕಾರ ದೊಡ್ಡ ಮೊತ್ತದ ಆರ್ಥಿಕ ಪ್ಯಾಕೇಜ್‌ ಘೋಷಿಸಿರುವುದಕ್ಕೆ ಉದ್ಯಮಿ ವಿಜಯ್‌ ಮಲ್ಯ ಅಭಿನಂದನೆ ಸಲ್ಲಿಸಿದ್ದಾರೆ.

ಈ ಕುರಿತು ಟ್ವೀಟ್‌ ಮಾಡಿರುವ ಅವರು, ಕೊರೊನಾ ಬಿಕ್ಕಟ್ಟಿನ ಸಂದರ್ಭದಲ್ಲಿ ಆರ್ಥಿಕ ಪ್ಯಾಕೇಜ್‌ ಘೋಷಿಸಿರುವ ಕೇಂದ್ರ ಸರ್ಕಾರವನ್ನು ನಾನು ಅಭಿನಂದಿಸುತ್ತೇನೆ. ಅವರಿಗೆ ಎಷ್ಟು ಬೇಕೋ ಅಷ್ಟುಹಣವನ್ನು ಮುದ್ರಿಸಬಹುದು. ಆದರೆ, ಸ್ಟೇಟ್‌ ಬ್ಯಾಂಕ್‌ನಿಂದ ಪಡೆದ ಸಾಲವನ್ನುಹಿಂದಿರುಗಿಸಲು ಬಯಸುವ ನನ್ನಂತಹ ಸಣ್ಣ ಕೊಡುಗೆದಾರನನ್ನು ನಿರ್ಲಕ್ಷಿಸಬೇಕೇ?ನನಗೆ ಸಾಲವಾಗಿ ನೀಡಿರುವ ಹಣವನ್ನು ಯಾವುದೇ ಷರತ್ತು ವಿಧಿಸದೆ ವಾಪಸ್‌ ಪಡೆದುಪ್ರಕರಣಕ್ಕೆಅಂತ್ಯ ಹಾಡುವಂತೆಮನವಿ ಮಾಡಿದ್ದಾರೆ.

ಭಾರತದ ಬ್ಯಾಂಕುಗಳಿಗೆ ಸುಮಾರು ₹ 9,000 ಕೋಟಿ ಸಾಲ ಮರುಪಾವತಿ ಮಾಡದ ಪ್ರಕರಣದಲ್ಲಿ ವಿಜಯ್ ಮಲ್ಯ ಆರೋಪಿಯಾಗಿದ್ದು, ದೀರ್ಘ ಕಾಲದಿಂದ ಅವರು ಲಂಡನ್‌ನಲ್ಲಿ ನೆಲೆಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT