<p>ವಿಜಯಪುರ: ಪ್ರಸ್ತುತ ಆರ್ಥಿಕ ವರ್ಷದಲ್ಲಿ ₹16,367.83 ಕೋಟಿ ವಾರ್ಷಿಕ ಸಾಲ ಯೋಜನೆ ಗುರಿ ಹೊಂದಲಾಗಿದ್ದು, ಕೃಷಿ ಹಾಗೂ ಉದ್ಯಮ ವಲಯಕ್ಕೆ ಹೆಚ್ಚಿನ ಆದ್ಯತೆ ನೀಡಲಾಗಿದೆ ಸಿಇಒ ರಿಷಿ ಆನಂದ ಹೇಳಿದರು.</p>.<p>ಜಿಲ್ಲಾ ವಾರ್ಷಿಕ ಸಾಲ ಯೋಜನೆ ಗುರಿ ನಿಗದಿ ಮೊದಲಾದ ವಿಷಯಗಳ ಬಗ್ಗೆ ಬುಧವಾರ ಜಿ.ಪಂ. ಸಭಾಂಗಣದಲ್ಲಿ ಸಿಇಒ ರಿಷಿ ಆನಂದ ಅಧ್ಯಕ್ಷತೆಯಲ್ಲಿ ನಡೆದ ಅಗ್ರಣೀಯ ಬ್ಯಾಂಕ್ ಕೆನರಾ ಬ್ಯಾಂಕ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ಮಹತ್ವದ ನಿರ್ಧಾರ ಕೈಗೊಳ್ಳಲಾಯಿತು. ಕಳೆದ ಬಾರಿಗಿಂತ ಈ ಬಾರಿ ಶೇ.10.90 ಹೆಚ್ಚಿನ ಗುರಿಯನ್ನು ಹೊಂದಲಾಗಿದೆ ಎಂದರು.</p>.<p>ಪ್ರಸ್ತುತ ವರ್ಷದ ಸಾಲ ಯೋಜನೆಯ ₹16367.83 ಕೋಟಿ ವಿತರಣೆಯ ಗುರಿಯನ್ನು ಹೊಂದಿದೆ. ಆದ್ಯತಾ ವಲಯಕ್ಕೆ ಯೋಜನೆಯ ಶೇ. 69.59 ರಷ್ಟು ಅಂದರೆ ₹11389.96 ಕೋಟಿ ಮೀಸಲಿಡಲಾಗಿದೆ. ಕೃಷಿ ವಲಯಕ್ಕೆ ಒಟ್ಟು ಯೋಜನೆಯ ಶೇ. 51.46 ರಷ್ಟು ಅಂದರೆ ₹8422.71 ಕೋಟಿ ಮೀಸಲಿಡಲಾಗಿದೆ. ಉದ್ಯಮಿ ವಲಯಕ್ಕೆ ಒಟ್ಟು ಯೋಜನೆಯ ಯೋಜನೆಯ ಶೇ. 16.90 ಅಂದರೆ ₹2765.48 ಕೋಟಿ ಮೀಸಲಿಡಲು. ತೀರ್ಮಾನಿಸಲಾಯಿತು.</p>.<p>ಶಿಕ್ಷಣ ಸಾಲ ₹53.43 ಕೋಟಿ, ವಸತಿ ಸಾಲ ₹94.07 ಕೋಟಿ ಮತ್ತು ಇತರೆ ಸಾಲ ₹28.84 ಕೋಟಿ ಸಾಲದ ಗುರಿ ಹೊಂದಲಾಗಿದೆ. ಕಳೆದ ಸಾಲಿನ ವಾರ್ಷಿಕ ಯೋಜನೆಯ ಪ್ರಗತಿಯ ಅಂಕಿ ಅಂಶಗಳನ್ನು ಅಗ್ರಣಿ ಬ್ಯಾಂಕ್ ಮುಖ್ಯ ಪ್ರಬಂಧಕ ಕೆ ಸಿದ್ದಯ್ಯ, ಸಾಲ ಮತ್ತು ಠೇವಣಿಯ ಅನುಪಾತ ಶೇ. 106 ಆಗಿದ್ದು, ಅತ್ಯುತ್ತಮ ಗುರಿ ಸಾಧನೆ ಎಂದರು.</p>.<p>ನಬಾರ್ಡ್ ಡಿ.ಡಿ.ಎಂ. ವಿಕಾಸ ರಾಠೋಡ, ಕೆನರಾ ಬ್ಯಾಂಕ್ ವಿಭಾಗಿಯ ಪ್ರಬಂಧಕ ದೀಪಕ್ ಕುಮಾರ, ಕರ್ನಾಟಕ ಗ್ರಾಮೀಣ ಬ್ಯಾಂಕ್ ಪ್ರಾದೇಶಿಕ ವ್ಯವಸ್ಥಾಪಕ ಅಶೋಕ ಸೋಂಗರಿ, ಮುಖ್ಯ ವ್ಯವಸ್ಥಾಪಕ ವಿ.ಬಿ. ಕುಲಕರ್ಣಿ, ಎಸ್ ಬಿ ಐ ಮುಖ್ಯವಸ್ಥಾಪಕ ಹರೀಶ್ ನಾಯಕ, ವಿನೋದ್ ಮಾದರ, ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಪ್ರಬಂಧಕ ಅನಿಲ ಮಹಾಕಾಳಿ, ಡಿಸಿಸಿ ಬ್ಯಾಂಕ್ ಪ್ರಬಂಧಕ ರಮೇಶ್ ಹಿಟ್ಟನಹಳ್ಳಿ ಸೇರಿದಂತೆ ವಿವಿಧ ಬ್ಯಾಂಕುಗಳ ಜಿಲ್ಲಾ ಸಂಯೋಜಕರು ಮತ್ತು ಲೈನ್ ಇಲಾಖೆಗಳ ಅಧಿಕಾರಿಗಳು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260430-26-1787188515</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ವಿಜಯಪುರ: ಪ್ರಸ್ತುತ ಆರ್ಥಿಕ ವರ್ಷದಲ್ಲಿ ₹16,367.83 ಕೋಟಿ ವಾರ್ಷಿಕ ಸಾಲ ಯೋಜನೆ ಗುರಿ ಹೊಂದಲಾಗಿದ್ದು, ಕೃಷಿ ಹಾಗೂ ಉದ್ಯಮ ವಲಯಕ್ಕೆ ಹೆಚ್ಚಿನ ಆದ್ಯತೆ ನೀಡಲಾಗಿದೆ ಸಿಇಒ ರಿಷಿ ಆನಂದ ಹೇಳಿದರು.</p>.<p>ಜಿಲ್ಲಾ ವಾರ್ಷಿಕ ಸಾಲ ಯೋಜನೆ ಗುರಿ ನಿಗದಿ ಮೊದಲಾದ ವಿಷಯಗಳ ಬಗ್ಗೆ ಬುಧವಾರ ಜಿ.ಪಂ. ಸಭಾಂಗಣದಲ್ಲಿ ಸಿಇಒ ರಿಷಿ ಆನಂದ ಅಧ್ಯಕ್ಷತೆಯಲ್ಲಿ ನಡೆದ ಅಗ್ರಣೀಯ ಬ್ಯಾಂಕ್ ಕೆನರಾ ಬ್ಯಾಂಕ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ಮಹತ್ವದ ನಿರ್ಧಾರ ಕೈಗೊಳ್ಳಲಾಯಿತು. ಕಳೆದ ಬಾರಿಗಿಂತ ಈ ಬಾರಿ ಶೇ.10.90 ಹೆಚ್ಚಿನ ಗುರಿಯನ್ನು ಹೊಂದಲಾಗಿದೆ ಎಂದರು.</p>.<p>ಪ್ರಸ್ತುತ ವರ್ಷದ ಸಾಲ ಯೋಜನೆಯ ₹16367.83 ಕೋಟಿ ವಿತರಣೆಯ ಗುರಿಯನ್ನು ಹೊಂದಿದೆ. ಆದ್ಯತಾ ವಲಯಕ್ಕೆ ಯೋಜನೆಯ ಶೇ. 69.59 ರಷ್ಟು ಅಂದರೆ ₹11389.96 ಕೋಟಿ ಮೀಸಲಿಡಲಾಗಿದೆ. ಕೃಷಿ ವಲಯಕ್ಕೆ ಒಟ್ಟು ಯೋಜನೆಯ ಶೇ. 51.46 ರಷ್ಟು ಅಂದರೆ ₹8422.71 ಕೋಟಿ ಮೀಸಲಿಡಲಾಗಿದೆ. ಉದ್ಯಮಿ ವಲಯಕ್ಕೆ ಒಟ್ಟು ಯೋಜನೆಯ ಯೋಜನೆಯ ಶೇ. 16.90 ಅಂದರೆ ₹2765.48 ಕೋಟಿ ಮೀಸಲಿಡಲು. ತೀರ್ಮಾನಿಸಲಾಯಿತು.</p>.<p>ಶಿಕ್ಷಣ ಸಾಲ ₹53.43 ಕೋಟಿ, ವಸತಿ ಸಾಲ ₹94.07 ಕೋಟಿ ಮತ್ತು ಇತರೆ ಸಾಲ ₹28.84 ಕೋಟಿ ಸಾಲದ ಗುರಿ ಹೊಂದಲಾಗಿದೆ. ಕಳೆದ ಸಾಲಿನ ವಾರ್ಷಿಕ ಯೋಜನೆಯ ಪ್ರಗತಿಯ ಅಂಕಿ ಅಂಶಗಳನ್ನು ಅಗ್ರಣಿ ಬ್ಯಾಂಕ್ ಮುಖ್ಯ ಪ್ರಬಂಧಕ ಕೆ ಸಿದ್ದಯ್ಯ, ಸಾಲ ಮತ್ತು ಠೇವಣಿಯ ಅನುಪಾತ ಶೇ. 106 ಆಗಿದ್ದು, ಅತ್ಯುತ್ತಮ ಗುರಿ ಸಾಧನೆ ಎಂದರು.</p>.<p>ನಬಾರ್ಡ್ ಡಿ.ಡಿ.ಎಂ. ವಿಕಾಸ ರಾಠೋಡ, ಕೆನರಾ ಬ್ಯಾಂಕ್ ವಿಭಾಗಿಯ ಪ್ರಬಂಧಕ ದೀಪಕ್ ಕುಮಾರ, ಕರ್ನಾಟಕ ಗ್ರಾಮೀಣ ಬ್ಯಾಂಕ್ ಪ್ರಾದೇಶಿಕ ವ್ಯವಸ್ಥಾಪಕ ಅಶೋಕ ಸೋಂಗರಿ, ಮುಖ್ಯ ವ್ಯವಸ್ಥಾಪಕ ವಿ.ಬಿ. ಕುಲಕರ್ಣಿ, ಎಸ್ ಬಿ ಐ ಮುಖ್ಯವಸ್ಥಾಪಕ ಹರೀಶ್ ನಾಯಕ, ವಿನೋದ್ ಮಾದರ, ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಪ್ರಬಂಧಕ ಅನಿಲ ಮಹಾಕಾಳಿ, ಡಿಸಿಸಿ ಬ್ಯಾಂಕ್ ಪ್ರಬಂಧಕ ರಮೇಶ್ ಹಿಟ್ಟನಹಳ್ಳಿ ಸೇರಿದಂತೆ ವಿವಿಧ ಬ್ಯಾಂಕುಗಳ ಜಿಲ್ಲಾ ಸಂಯೋಜಕರು ಮತ್ತು ಲೈನ್ ಇಲಾಖೆಗಳ ಅಧಿಕಾರಿಗಳು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260430-26-1787188515</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>