<p><strong>ವಿಟ್ಲ</strong>: ಇಲ್ಲಿನ ಗ್ರಾಮೀಣ ಸಹಕಾರಿ ಸಂಘವು 2025-26ನೇ ಆರ್ಥಿಕ ವರ್ಷದಲ್ಲಿ ₹ 1090 ಕೋಟಿ ವ್ಯವಹಾರ ನಡೆಸಿ, ₹ 4.05 ಕೋಟಿ ಲಾಭ ಗಳಿಸಿದೆ ಎಂದು ಸಂಘದ ಅಧ್ಯಕ್ಷ ಎಚ್.ಜಗನ್ನಾಥ ಸಾಲಿಯಾನ್ ತಿಳಿಸಿದರು.</p>.<p>ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮೂಡುಬಿದಿರೆ ತಾಲ್ಲೂಕಿನ ಬೆಳುವಾಯಿ ಗ್ರಾಮ ಹೊರತು ಉಳಿದ ತಾಲ್ಲೂಕುಗಳಲ್ಲಿ ಕಾರ್ಯವ್ಯಾಪ್ತಿ ಹೊಂದಿದ್ದು, ವಿಟ್ಲದಲ್ಲಿ ಪ್ರಧಾನ ಕಚೇರಿ ಹೊಂದಿದೆ. ಕನ್ಯಾನ, ಕಲ್ಲಡ್ಕ, ಬಿ.ಸಿ.ರೋಡ್ ಮತ್ತು ಪುತ್ತೂರಿನಲ್ಲಿ ಶಾಖೆಗಳಿದ್ದು, 9189 ಸದಸ್ಯರಿದ್ದಾರೆ. ₹ 3.04 ಕೋಟಿ ಪಾಲು ಬಂಡವಾಳ ಇದ್ದು, ಕಳೆದ ಸಾಲಿನ ವ್ಯವಹಾರಕ್ಕಿಂತ ಈ ಸಾಲಿನಲ್ಲಿ ₹ 226 ಕೋಟಿ ಹೆಚ್ಚು ವ್ಯವಹಾರ ನಡೆಸಿ ದಾಖಲೆ ಮಾಡಿದೆ ಎಂದರು.</p>.<p>ಶೇ 95.11ರಷ್ಟು ಸಾಲ ವಸೂಲಾತಿ: ₹ 149.84 ಕೋಟಿ ಠೇವಣಿ ಸಂಗ್ರಹ ಮಾಡಿದ್ದು, ಕಳೆದ ಸಾಲಿಗಿಂತ ಶೇ 11.22ರಷ್ಟು ಹೆಚ್ಚಾಗಿದೆ. ಹೊರಬಾಕಿ ಸಾಲ ₹ 125.63 ಕೋಟಿ ಸಾಲ ವಸೂಲಾತಿ ಶೇ 95.11 ಇದ್ದು, ಕಳೆದ ಸಾಲಿಗಿಂತ ಹೆಚ್ಚು ದಾಖಲಾಗಿದೆ. ಪ್ರಸ್ತುತ ಸಂಘದಲ್ಲಿ ₹ 9.96 ಕೋಟಿ ಮೀಸಲು ನಿಧಿ ಹಾಗೂ ₹ 13.65 ಕೋಟಿಯ ನಿಧಿಗಳಿವೆ. ₹ 4.43 ಕೋಟಿ ಚರ ಮತ್ತು ಸ್ಥಿರಾಸ್ತಿಗಳಿವೆ. ಸಂಘದ ದುಡಿಯುವ ಬಂಡವಾಳ ₹ 180.55 ಕೋಟಿ ಇದೆ. ಕಳೆದ ಸಾಲಿನಲ್ಲಿ ಶೇ 22 ಲಾಭಾಂಶ ನೀಡಲಾಗಿದೆ ಎಂದು ತಿಳಿಸಿದರು.</p>.<p>₹ 160 ಕೋಟಿ ಠೇವಣಿ ಸಂಗ್ರಹದ ಗುರಿ: ಸಂಘವು 2026-27ನೇ ಸಾಲಿನಲ್ಲಿ ₹ 160 ಕೋಟಿ ಅಧಿಕ ಠೇವಣಿ ಸಂಗ್ರಹ, ₹ 135 ಕೋಟಿಗೂ ಮೀರಿ ಸಾಲ ನೀಡಿಕೆ, ₹ 4.45ಕೋಟಿಗೂ ಹೆಚ್ಚಿನ ಲಾಭ ಹಾಗೂ ಶೇ 96 ಸಾಲ ವಸೂಲಾತಿ ಗುರಿ ಇಟ್ಟುಕೊಳ್ಳಲಾಗಿದೆ ಎಂದು ಹೇಳಿದರು.</p>.<p>ಶೀಘ್ರದಲ್ಲೇ ಉಪ್ಪಿನಂಗಡಿ ಶಾಖೆ: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ನಿಂದ ಸಂಘವು ಸತತ ನಾಲ್ಕು ಬಾರಿ ಸಾಧನಾ ಪ್ರಶಸ್ತಿ ಪಡೆದಿದೆ. ಮುಂದಿನ ಕೆಲವೇ ದಿನಗಳಲ್ಲಿ ಸಂಘದ ಐದನೇ ಶಾಖೆಯನ್ನು ಉಪ್ಪಿನಂಗಡಿಯಲ್ಲಿ ಆರಂಭ ಮಾಡಲಾಗುವುದು ಎಂದು ಹೇಳಿದರು. </p>.<p>ಸಂಘದ ಉಪಾಧ್ಯಕ್ಷ ಮನೋರಂಜನ್ ಕೆ.ಆರ್., ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೃಷ್ಣಮುರಳಿ ಶ್ಯಾಮ್ ಮಾಹಿತಿ ನೀಡಿದರು.</p>.<p>ನಿರ್ದೇಶಕರಾದ ಜಯಂತಿ ಎಚ್.ರಾವ್, ಶುಭಲಕ್ಷ್ಮೀ, ದಯಾನಂದ ಆಳ್ವ ಕೆ., ಪೂವಪ್ಪ ಎಸ್., ದಿವಾಕರ ವಿ., ಕೇಶವ ಎ., ಗೋವರ್ಧನ ಕುಮಾರ್ ಐ., ಭಾಸ್ಕರ್ ಶೆಟ್ಟಿ, ರಾಮದಾಸ ಶೆಣೈ, ಮೋಹನ ಕೆ.ಎಸ್., ವಿಶ್ವನಾಥ ಎಂ., ತಿರುಮಲೇಶ್ವರ ಭಟ್ ಪಿ., ಸತೀಶ್ ಪಿ. ಭಾಗವಹಿಸಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260412-29-1349076595</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಟ್ಲ</strong>: ಇಲ್ಲಿನ ಗ್ರಾಮೀಣ ಸಹಕಾರಿ ಸಂಘವು 2025-26ನೇ ಆರ್ಥಿಕ ವರ್ಷದಲ್ಲಿ ₹ 1090 ಕೋಟಿ ವ್ಯವಹಾರ ನಡೆಸಿ, ₹ 4.05 ಕೋಟಿ ಲಾಭ ಗಳಿಸಿದೆ ಎಂದು ಸಂಘದ ಅಧ್ಯಕ್ಷ ಎಚ್.ಜಗನ್ನಾಥ ಸಾಲಿಯಾನ್ ತಿಳಿಸಿದರು.</p>.<p>ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮೂಡುಬಿದಿರೆ ತಾಲ್ಲೂಕಿನ ಬೆಳುವಾಯಿ ಗ್ರಾಮ ಹೊರತು ಉಳಿದ ತಾಲ್ಲೂಕುಗಳಲ್ಲಿ ಕಾರ್ಯವ್ಯಾಪ್ತಿ ಹೊಂದಿದ್ದು, ವಿಟ್ಲದಲ್ಲಿ ಪ್ರಧಾನ ಕಚೇರಿ ಹೊಂದಿದೆ. ಕನ್ಯಾನ, ಕಲ್ಲಡ್ಕ, ಬಿ.ಸಿ.ರೋಡ್ ಮತ್ತು ಪುತ್ತೂರಿನಲ್ಲಿ ಶಾಖೆಗಳಿದ್ದು, 9189 ಸದಸ್ಯರಿದ್ದಾರೆ. ₹ 3.04 ಕೋಟಿ ಪಾಲು ಬಂಡವಾಳ ಇದ್ದು, ಕಳೆದ ಸಾಲಿನ ವ್ಯವಹಾರಕ್ಕಿಂತ ಈ ಸಾಲಿನಲ್ಲಿ ₹ 226 ಕೋಟಿ ಹೆಚ್ಚು ವ್ಯವಹಾರ ನಡೆಸಿ ದಾಖಲೆ ಮಾಡಿದೆ ಎಂದರು.</p>.<p>ಶೇ 95.11ರಷ್ಟು ಸಾಲ ವಸೂಲಾತಿ: ₹ 149.84 ಕೋಟಿ ಠೇವಣಿ ಸಂಗ್ರಹ ಮಾಡಿದ್ದು, ಕಳೆದ ಸಾಲಿಗಿಂತ ಶೇ 11.22ರಷ್ಟು ಹೆಚ್ಚಾಗಿದೆ. ಹೊರಬಾಕಿ ಸಾಲ ₹ 125.63 ಕೋಟಿ ಸಾಲ ವಸೂಲಾತಿ ಶೇ 95.11 ಇದ್ದು, ಕಳೆದ ಸಾಲಿಗಿಂತ ಹೆಚ್ಚು ದಾಖಲಾಗಿದೆ. ಪ್ರಸ್ತುತ ಸಂಘದಲ್ಲಿ ₹ 9.96 ಕೋಟಿ ಮೀಸಲು ನಿಧಿ ಹಾಗೂ ₹ 13.65 ಕೋಟಿಯ ನಿಧಿಗಳಿವೆ. ₹ 4.43 ಕೋಟಿ ಚರ ಮತ್ತು ಸ್ಥಿರಾಸ್ತಿಗಳಿವೆ. ಸಂಘದ ದುಡಿಯುವ ಬಂಡವಾಳ ₹ 180.55 ಕೋಟಿ ಇದೆ. ಕಳೆದ ಸಾಲಿನಲ್ಲಿ ಶೇ 22 ಲಾಭಾಂಶ ನೀಡಲಾಗಿದೆ ಎಂದು ತಿಳಿಸಿದರು.</p>.<p>₹ 160 ಕೋಟಿ ಠೇವಣಿ ಸಂಗ್ರಹದ ಗುರಿ: ಸಂಘವು 2026-27ನೇ ಸಾಲಿನಲ್ಲಿ ₹ 160 ಕೋಟಿ ಅಧಿಕ ಠೇವಣಿ ಸಂಗ್ರಹ, ₹ 135 ಕೋಟಿಗೂ ಮೀರಿ ಸಾಲ ನೀಡಿಕೆ, ₹ 4.45ಕೋಟಿಗೂ ಹೆಚ್ಚಿನ ಲಾಭ ಹಾಗೂ ಶೇ 96 ಸಾಲ ವಸೂಲಾತಿ ಗುರಿ ಇಟ್ಟುಕೊಳ್ಳಲಾಗಿದೆ ಎಂದು ಹೇಳಿದರು.</p>.<p>ಶೀಘ್ರದಲ್ಲೇ ಉಪ್ಪಿನಂಗಡಿ ಶಾಖೆ: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ನಿಂದ ಸಂಘವು ಸತತ ನಾಲ್ಕು ಬಾರಿ ಸಾಧನಾ ಪ್ರಶಸ್ತಿ ಪಡೆದಿದೆ. ಮುಂದಿನ ಕೆಲವೇ ದಿನಗಳಲ್ಲಿ ಸಂಘದ ಐದನೇ ಶಾಖೆಯನ್ನು ಉಪ್ಪಿನಂಗಡಿಯಲ್ಲಿ ಆರಂಭ ಮಾಡಲಾಗುವುದು ಎಂದು ಹೇಳಿದರು. </p>.<p>ಸಂಘದ ಉಪಾಧ್ಯಕ್ಷ ಮನೋರಂಜನ್ ಕೆ.ಆರ್., ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೃಷ್ಣಮುರಳಿ ಶ್ಯಾಮ್ ಮಾಹಿತಿ ನೀಡಿದರು.</p>.<p>ನಿರ್ದೇಶಕರಾದ ಜಯಂತಿ ಎಚ್.ರಾವ್, ಶುಭಲಕ್ಷ್ಮೀ, ದಯಾನಂದ ಆಳ್ವ ಕೆ., ಪೂವಪ್ಪ ಎಸ್., ದಿವಾಕರ ವಿ., ಕೇಶವ ಎ., ಗೋವರ್ಧನ ಕುಮಾರ್ ಐ., ಭಾಸ್ಕರ್ ಶೆಟ್ಟಿ, ರಾಮದಾಸ ಶೆಣೈ, ಮೋಹನ ಕೆ.ಎಸ್., ವಿಶ್ವನಾಥ ಎಂ., ತಿರುಮಲೇಶ್ವರ ಭಟ್ ಪಿ., ಸತೀಶ್ ಪಿ. ಭಾಗವಹಿಸಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260412-29-1349076595</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>