<p><strong>ರಾಂಚಿ:</strong> 'ಪಶ್ಚಿಮ ಏಷ್ಯಾದಲ್ಲಿ ಬಿಕ್ಕಟ್ಟು ತೀವ್ರಗೊಂಡಿರುವ ಹಿನ್ನೆಲೆಯಲ್ಲಿ ಅದರ ಸಂಭಾವ್ಯ ಪರಿಣಾಮಗಳನ್ನು ಎದುರಿಸಲು ದೇಶ ಸಜ್ಜಾಗಿರಬೇಕು' ಎಂದು ನಾಗರಿಕ ವಿಮಾನಯಾನ ಸಚಿವ ಕೆ. ರಾಮ್ ಮೋಹನ್ ನಾಯ್ಡು ಬುಧವಾರ ಕರೆ ನೀಡಿದ್ದಾರೆ. </p><p>'ಆದರೂ ದೇಶದ ಪಾಲಿಗೆ ಈಗಿನ ಪರಿಸ್ಥಿತಿ ಆತಂಕಕಾರಿಯಾಗಿಲ್ಲ' ಎಂದು ತಿಳಿಸಿದ್ದಾರೆ. </p><p>ರಾಂಚಿಗೆ ತಮ್ಮ ಮೊದಲ ಭೇಟಿಯ ಸಂದರ್ಭದಲ್ಲಿ ಮಾತನಾಡಿದ ಅವರು, 'ಸಂಭಾವ್ಯ ಬಿಕ್ಕಟ್ಟಿನ ಪರಿಣಾಮವನ್ನು ತಗ್ಗಿಸಲು ಪೂರ್ವಯೋಜಿತವಾಗಿ ಕ್ರಮಗಳನ್ನು ಕೈಗೊಳ್ಳಬೇಕು' ಎಂದು ಹೇಳಿದ್ದಾರೆ. </p><p>'ಈಗಿನ ಪರಿಸ್ಥಿತಿ ಕಳವಳಕಾರಿಯಾಗಿಲ್ಲ. ಆದರೆ ನಾವು ಜಾಗರೂಕರಾಗಿರಬೇಕು. ನಾಗರಿಕ ವಿಮಾನಯಾನ ಸೇರಿದಂತೆ ಪ್ರತಿಯೊಂದು ವಲಯವು ಪರಿಣಾಮವನ್ನು ಎದುರಿಸಲು ಸಜ್ಜಾಗಿರಬೇಕು. ಅಲ್ಪಾವಧಿ, ಮಧ್ಯಮ ಅವಧಿ ಹಾಗೂ ದೀರ್ಘಾವಧಿಯ ಕಾರ್ಯತಂತ್ರಗಳನ್ನು ಸಿದ್ಧಪಡಿಸಬೇಕು' ಎಂದು ತಿಳಿಸಿದ್ದಾರೆ. </p><p>ಜಾಗತಿಕ ಅನಿಶ್ಚಿತತೆಯ ನಡುವೆ ವಿಮಾನಯಾನ ವೆಚ್ಚ ಹೆಚ್ಚಳದ ಬಗ್ಗೆ ಕಳವಳ ವ್ಯಕ್ತಪಡಿಸಿದ ಸಚಿವರು, 'ದೇಶೀಯ ಪ್ರಯಾಣಿಕರಿಗೆ ಯಾವುದೇ ಹೊರೆ ಉಂಟಾಗದಂತೆ ನೋಡಿಕೊಳ್ಳಲು ಕೇಂದ್ರ ಸರ್ಕಾರವು ಕ್ರಮ ಕೈಗೊಳ್ಳಲು ಪ್ರಾರಂಭಿಸಿದೆ' ಎಂದು ಹೇಳಿದ್ದಾರೆ. </p><p>'ಇದರ ಭಾಗವಾಗಿ ವಿಮಾನ ನಿಲ್ದಾಣಗಳಲ್ಲಿ ಲ್ಯಾಂಡಿಂಗ್ ಹಾಗೂ ಪಾರ್ಕಿಂಗ್ ಶುಲ್ಕ ಮತ್ತು ವಿಮಾನ ಇಂಧನದ (ಎಟಿಎಫ್) ಬೆಲೆ ಕಡಿಮೆ ಮಾಡಲಾಗಿದೆ' ಎಂದು ತಿಳಿಸಿದ್ದಾರೆ. </p><p>'ದೇಶೀಯ ಮಾರ್ಗಗಳಲ್ಲಿ ಪ್ರತಿದಿನ ಸುಮಾರು ಐದು ಲಕ್ಷ ಪ್ರಯಾಣಿಕರು ಸಂಚರಿಸುತ್ತಾರೆ. ನಾವು ವಿಮಾನ ದರಗಳನ್ನು ನಿರಂತರವಾಗಿ ಮೌಲ್ಯಮಾಪನ ಮಾಡುತ್ತಿದ್ದೇವೆ. ಬೇಡಿಕೆಗೆ ತಕ್ಕಂತೆ ಸಂಪರ್ಕವನ್ನು ಹೆಚ್ಚಿಸುತ್ತೇವೆ' ಎಂದು ಹೇಳಿದ್ದಾರೆ. </p><p>'ಶೀಘ್ರದಲ್ಲೇ ₹29,000 ಕೋಟಿ ವೆಚ್ಚದ ಉಡಾನ್ 2 ಯೋಜನೆಯನ್ನು ಆರಂಭಿಸಲಾಗುವುದು. ಇದರ ಭಾಗವಾಗಿ ದೇಶವು 10 ವರ್ಷಗಳಲ್ಲಿ 100 ಹೊಸ ವಿಮಾನ ನಿಲ್ದಾಣ ಹಾಗೂ 200 ಹೆಲಿಪ್ಯಾಡ್ ಹೊಂದಲಿವೆ' ಎಂದು ತಿಳಿಸಿದ್ದಾರೆ. </p>.ಜೂನ್ 1ರಿಂದ ಬೀದರ್–ಬೆಂಗಳೂರು ಮಧ್ಯೆ ವಿಮಾನ ಸೇವೆ: ಸಚಿವ ಈಶ್ವರ ಖಂಡ್ರೆ.ಟೆಹರಾನ್ನಲ್ಲಿ ವಿಮಾನ ಹಾರಾಟ ಪುನರಾರಂಭ: ಅಮೆರಿಕ–ಇರಾನ್ ಸಂಘರ್ಷ ಅಂತ್ಯ? .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಂಚಿ:</strong> 'ಪಶ್ಚಿಮ ಏಷ್ಯಾದಲ್ಲಿ ಬಿಕ್ಕಟ್ಟು ತೀವ್ರಗೊಂಡಿರುವ ಹಿನ್ನೆಲೆಯಲ್ಲಿ ಅದರ ಸಂಭಾವ್ಯ ಪರಿಣಾಮಗಳನ್ನು ಎದುರಿಸಲು ದೇಶ ಸಜ್ಜಾಗಿರಬೇಕು' ಎಂದು ನಾಗರಿಕ ವಿಮಾನಯಾನ ಸಚಿವ ಕೆ. ರಾಮ್ ಮೋಹನ್ ನಾಯ್ಡು ಬುಧವಾರ ಕರೆ ನೀಡಿದ್ದಾರೆ. </p><p>'ಆದರೂ ದೇಶದ ಪಾಲಿಗೆ ಈಗಿನ ಪರಿಸ್ಥಿತಿ ಆತಂಕಕಾರಿಯಾಗಿಲ್ಲ' ಎಂದು ತಿಳಿಸಿದ್ದಾರೆ. </p><p>ರಾಂಚಿಗೆ ತಮ್ಮ ಮೊದಲ ಭೇಟಿಯ ಸಂದರ್ಭದಲ್ಲಿ ಮಾತನಾಡಿದ ಅವರು, 'ಸಂಭಾವ್ಯ ಬಿಕ್ಕಟ್ಟಿನ ಪರಿಣಾಮವನ್ನು ತಗ್ಗಿಸಲು ಪೂರ್ವಯೋಜಿತವಾಗಿ ಕ್ರಮಗಳನ್ನು ಕೈಗೊಳ್ಳಬೇಕು' ಎಂದು ಹೇಳಿದ್ದಾರೆ. </p><p>'ಈಗಿನ ಪರಿಸ್ಥಿತಿ ಕಳವಳಕಾರಿಯಾಗಿಲ್ಲ. ಆದರೆ ನಾವು ಜಾಗರೂಕರಾಗಿರಬೇಕು. ನಾಗರಿಕ ವಿಮಾನಯಾನ ಸೇರಿದಂತೆ ಪ್ರತಿಯೊಂದು ವಲಯವು ಪರಿಣಾಮವನ್ನು ಎದುರಿಸಲು ಸಜ್ಜಾಗಿರಬೇಕು. ಅಲ್ಪಾವಧಿ, ಮಧ್ಯಮ ಅವಧಿ ಹಾಗೂ ದೀರ್ಘಾವಧಿಯ ಕಾರ್ಯತಂತ್ರಗಳನ್ನು ಸಿದ್ಧಪಡಿಸಬೇಕು' ಎಂದು ತಿಳಿಸಿದ್ದಾರೆ. </p><p>ಜಾಗತಿಕ ಅನಿಶ್ಚಿತತೆಯ ನಡುವೆ ವಿಮಾನಯಾನ ವೆಚ್ಚ ಹೆಚ್ಚಳದ ಬಗ್ಗೆ ಕಳವಳ ವ್ಯಕ್ತಪಡಿಸಿದ ಸಚಿವರು, 'ದೇಶೀಯ ಪ್ರಯಾಣಿಕರಿಗೆ ಯಾವುದೇ ಹೊರೆ ಉಂಟಾಗದಂತೆ ನೋಡಿಕೊಳ್ಳಲು ಕೇಂದ್ರ ಸರ್ಕಾರವು ಕ್ರಮ ಕೈಗೊಳ್ಳಲು ಪ್ರಾರಂಭಿಸಿದೆ' ಎಂದು ಹೇಳಿದ್ದಾರೆ. </p><p>'ಇದರ ಭಾಗವಾಗಿ ವಿಮಾನ ನಿಲ್ದಾಣಗಳಲ್ಲಿ ಲ್ಯಾಂಡಿಂಗ್ ಹಾಗೂ ಪಾರ್ಕಿಂಗ್ ಶುಲ್ಕ ಮತ್ತು ವಿಮಾನ ಇಂಧನದ (ಎಟಿಎಫ್) ಬೆಲೆ ಕಡಿಮೆ ಮಾಡಲಾಗಿದೆ' ಎಂದು ತಿಳಿಸಿದ್ದಾರೆ. </p><p>'ದೇಶೀಯ ಮಾರ್ಗಗಳಲ್ಲಿ ಪ್ರತಿದಿನ ಸುಮಾರು ಐದು ಲಕ್ಷ ಪ್ರಯಾಣಿಕರು ಸಂಚರಿಸುತ್ತಾರೆ. ನಾವು ವಿಮಾನ ದರಗಳನ್ನು ನಿರಂತರವಾಗಿ ಮೌಲ್ಯಮಾಪನ ಮಾಡುತ್ತಿದ್ದೇವೆ. ಬೇಡಿಕೆಗೆ ತಕ್ಕಂತೆ ಸಂಪರ್ಕವನ್ನು ಹೆಚ್ಚಿಸುತ್ತೇವೆ' ಎಂದು ಹೇಳಿದ್ದಾರೆ. </p><p>'ಶೀಘ್ರದಲ್ಲೇ ₹29,000 ಕೋಟಿ ವೆಚ್ಚದ ಉಡಾನ್ 2 ಯೋಜನೆಯನ್ನು ಆರಂಭಿಸಲಾಗುವುದು. ಇದರ ಭಾಗವಾಗಿ ದೇಶವು 10 ವರ್ಷಗಳಲ್ಲಿ 100 ಹೊಸ ವಿಮಾನ ನಿಲ್ದಾಣ ಹಾಗೂ 200 ಹೆಲಿಪ್ಯಾಡ್ ಹೊಂದಲಿವೆ' ಎಂದು ತಿಳಿಸಿದ್ದಾರೆ. </p>.ಜೂನ್ 1ರಿಂದ ಬೀದರ್–ಬೆಂಗಳೂರು ಮಧ್ಯೆ ವಿಮಾನ ಸೇವೆ: ಸಚಿವ ಈಶ್ವರ ಖಂಡ್ರೆ.ಟೆಹರಾನ್ನಲ್ಲಿ ವಿಮಾನ ಹಾರಾಟ ಪುನರಾರಂಭ: ಅಮೆರಿಕ–ಇರಾನ್ ಸಂಘರ್ಷ ಅಂತ್ಯ? .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>