<p><strong>ಬೆಂಗಳೂರು</strong>: ‘ಎರಡು ದಿನದ ಬೆಂಗಳೂರು ಭೇಟಿಯಲ್ಲಿ ₹3,200 ಕೋಟಿ ಹೂಡಿಕೆಯ ಪ್ರಸ್ತಾವ ಸ್ವೀಕರಿಸಲಾಗಿದೆ. ಇದರಿಂದ ಮಧ್ಯಪ್ರದೇಶದಲ್ಲಿ 7 ಸಾವಿರಕ್ಕೂ ಹೆಚ್ಚು ಉದ್ಯೋಗಾವಕಾಶಗಳು ಸೃಷ್ಟಿಯಾಗಲಿವೆ’ ಎಂದು ಮಧ್ಯಪ್ರದೇಶದ ಮುಖ್ಯಮಂತ್ರಿ ಮೋಹನ್ ಯಾದವ್ ತಿಳಿಸಿದರು.</p>.<p>ನಗರದಲ್ಲಿ ಗುರುವಾರ ಹಮ್ಮಿಕೊಂಡಿದ್ದ ‘ಮಧ್ಯಪ್ರದೇಶದಲ್ಲಿ ಹೂಡಿಕೆಗೆ ಅವಕಾಶಗಳು’ ಕುರಿತ ಸಮಾವೇಶದಲ್ಲಿ ಅವರು ಮಾತನಾಡಿದರು.</p>.<p>‘ಭೋಪಾಲ್ನಲ್ಲಿ 2025ರ ಫೆಬ್ರುವರಿ 7 ಮತ್ತು 8ರಂದು ಜಾಗತಿಕ ಹೂಡಿಕೆದಾರರ ಶೃಂಗಸಭೆ ಆಯೋಜಿಸಲಾಗಿದೆ. ಮಧ್ಯಪ್ರದೇಶದಲ್ಲಿ ಸ್ಟಾರ್ಟ್ಅಪ್ ಹಬ್ ಮತ್ತು ಸೆಂಟರ್ ಆಫ್ ಎಕ್ಸಲೆನ್ಸ್ (ಶ್ರೇಷ್ಠತಾ ಕೇಂದ್ರ) ಸ್ಥಾಪಿಸಲು ಗೂಗಲ್ ಕ್ಲೌಡ್ ಪ್ರಸ್ತಾವ ಸಲ್ಲಿಸಿದೆ’ ಎಂದರು.</p>.<p>ಬುಧವಾರ ಹಿಂದುಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ಗೆ ಭೇಟಿ ನೀಡಲಾಗಿತ್ತು. ಎಚ್ಎಎಲ್ ಕೇಂದ್ರವನ್ನು ನಮ್ಮ ರಾಜ್ಯದಲ್ಲಿಯೂ ಸ್ಥಾಪಿಸುವ ಕುರಿತು ಚರ್ಚಿಸಲಾಗಿದ್ದು, ಸಕಾರಾತ್ಮಕ ಫಲಿತಾಂಶ ಬರುವ ನಿರೀಕ್ಷೆಯಿದೆ ಎಂದು ಹೇಳಿದರು. </p>.<p>ರಾಜ್ಯಗಳು ಅಭಿವೃದ್ಧಿಯಾದರೆ ಮಾತ್ರ ದೇಶದ ಸರ್ವಾಂಗೀಣ ಪ್ರಗತಿ ಸಾಧ್ಯ. ಆದ್ದರಿಂದ ಹೂಡಿಕೆದಾರರು ಮಧ್ಯಪ್ರದೇಶದಲ್ಲಿ ಹೂಡಿಕೆಗೆ ಮುಂದಾಗಬೇಕು. ಇದಕ್ಕೆ ಅಗತ್ಯವಿರುವ ಎಲ್ಲಾ ಸವಲತ್ತು ಒದಗಿಸಲಾಗುವುದು ಎಂದು ತಿಳಿಸಿದರು.</p>.<p>ಪ್ರವಾಸೋದ್ಯಮ, ಎಂಎಸ್ಎಂಇ, ತಂತ್ರಜ್ಞಾನ ಸೇರಿ ಇತರೆ ವಲಯಗಳಲ್ಲಿ ಹೂಡಿಕೆಗೆ ಅವಕಾಶಗಳಿವೆ. ಹೂಡಿಕೆದಾರರಿಗೆ ಅನುಕೂಲ ಕಲ್ಪಿಸಲು ಏಕಗವಾಕ್ಷಿ ಪದ್ಧತಿಯನ್ನು ಅಳವಡಿಸಿಕೊಳ್ಳಲಾಗಿದೆ. ಮಧ್ಯಪ್ರದೇಶವು ಹೇರಳ ಖನಿಜ ಸಂಪನ್ಮೂಲಗಳನ್ನು ಹೊಂದಿದೆ ಎಂದು ಹೇಳಿದರು.</p>.<p>ಉದ್ಯಮಿ ಮೋಹನ್ದಾಸ್ ಪೈ ಮಾತನಾಡಿ, ಕರ್ನಾಟಕ ಮತ್ತು ಮಧ್ಯಪ್ರದೇಶ ಸಹೋದರರಿದ್ದಂತೆ. ಅಲ್ಲಿಯೂ ಹೂಡಿಕೆ ಮಾಡಬೇಕು. ಕರ್ನಾಟಕದಲ್ಲಿಯೂ ಹೂಡಿಕೆ ಮಾಡಬೇಕು. ಇದರಿಂದ ಎರಡೂ ರಾಜ್ಯಗಳಿಗೆ ಅನುಕೂಲವಾಗಲಿದೆ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ಎರಡು ದಿನದ ಬೆಂಗಳೂರು ಭೇಟಿಯಲ್ಲಿ ₹3,200 ಕೋಟಿ ಹೂಡಿಕೆಯ ಪ್ರಸ್ತಾವ ಸ್ವೀಕರಿಸಲಾಗಿದೆ. ಇದರಿಂದ ಮಧ್ಯಪ್ರದೇಶದಲ್ಲಿ 7 ಸಾವಿರಕ್ಕೂ ಹೆಚ್ಚು ಉದ್ಯೋಗಾವಕಾಶಗಳು ಸೃಷ್ಟಿಯಾಗಲಿವೆ’ ಎಂದು ಮಧ್ಯಪ್ರದೇಶದ ಮುಖ್ಯಮಂತ್ರಿ ಮೋಹನ್ ಯಾದವ್ ತಿಳಿಸಿದರು.</p>.<p>ನಗರದಲ್ಲಿ ಗುರುವಾರ ಹಮ್ಮಿಕೊಂಡಿದ್ದ ‘ಮಧ್ಯಪ್ರದೇಶದಲ್ಲಿ ಹೂಡಿಕೆಗೆ ಅವಕಾಶಗಳು’ ಕುರಿತ ಸಮಾವೇಶದಲ್ಲಿ ಅವರು ಮಾತನಾಡಿದರು.</p>.<p>‘ಭೋಪಾಲ್ನಲ್ಲಿ 2025ರ ಫೆಬ್ರುವರಿ 7 ಮತ್ತು 8ರಂದು ಜಾಗತಿಕ ಹೂಡಿಕೆದಾರರ ಶೃಂಗಸಭೆ ಆಯೋಜಿಸಲಾಗಿದೆ. ಮಧ್ಯಪ್ರದೇಶದಲ್ಲಿ ಸ್ಟಾರ್ಟ್ಅಪ್ ಹಬ್ ಮತ್ತು ಸೆಂಟರ್ ಆಫ್ ಎಕ್ಸಲೆನ್ಸ್ (ಶ್ರೇಷ್ಠತಾ ಕೇಂದ್ರ) ಸ್ಥಾಪಿಸಲು ಗೂಗಲ್ ಕ್ಲೌಡ್ ಪ್ರಸ್ತಾವ ಸಲ್ಲಿಸಿದೆ’ ಎಂದರು.</p>.<p>ಬುಧವಾರ ಹಿಂದುಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ಗೆ ಭೇಟಿ ನೀಡಲಾಗಿತ್ತು. ಎಚ್ಎಎಲ್ ಕೇಂದ್ರವನ್ನು ನಮ್ಮ ರಾಜ್ಯದಲ್ಲಿಯೂ ಸ್ಥಾಪಿಸುವ ಕುರಿತು ಚರ್ಚಿಸಲಾಗಿದ್ದು, ಸಕಾರಾತ್ಮಕ ಫಲಿತಾಂಶ ಬರುವ ನಿರೀಕ್ಷೆಯಿದೆ ಎಂದು ಹೇಳಿದರು. </p>.<p>ರಾಜ್ಯಗಳು ಅಭಿವೃದ್ಧಿಯಾದರೆ ಮಾತ್ರ ದೇಶದ ಸರ್ವಾಂಗೀಣ ಪ್ರಗತಿ ಸಾಧ್ಯ. ಆದ್ದರಿಂದ ಹೂಡಿಕೆದಾರರು ಮಧ್ಯಪ್ರದೇಶದಲ್ಲಿ ಹೂಡಿಕೆಗೆ ಮುಂದಾಗಬೇಕು. ಇದಕ್ಕೆ ಅಗತ್ಯವಿರುವ ಎಲ್ಲಾ ಸವಲತ್ತು ಒದಗಿಸಲಾಗುವುದು ಎಂದು ತಿಳಿಸಿದರು.</p>.<p>ಪ್ರವಾಸೋದ್ಯಮ, ಎಂಎಸ್ಎಂಇ, ತಂತ್ರಜ್ಞಾನ ಸೇರಿ ಇತರೆ ವಲಯಗಳಲ್ಲಿ ಹೂಡಿಕೆಗೆ ಅವಕಾಶಗಳಿವೆ. ಹೂಡಿಕೆದಾರರಿಗೆ ಅನುಕೂಲ ಕಲ್ಪಿಸಲು ಏಕಗವಾಕ್ಷಿ ಪದ್ಧತಿಯನ್ನು ಅಳವಡಿಸಿಕೊಳ್ಳಲಾಗಿದೆ. ಮಧ್ಯಪ್ರದೇಶವು ಹೇರಳ ಖನಿಜ ಸಂಪನ್ಮೂಲಗಳನ್ನು ಹೊಂದಿದೆ ಎಂದು ಹೇಳಿದರು.</p>.<p>ಉದ್ಯಮಿ ಮೋಹನ್ದಾಸ್ ಪೈ ಮಾತನಾಡಿ, ಕರ್ನಾಟಕ ಮತ್ತು ಮಧ್ಯಪ್ರದೇಶ ಸಹೋದರರಿದ್ದಂತೆ. ಅಲ್ಲಿಯೂ ಹೂಡಿಕೆ ಮಾಡಬೇಕು. ಕರ್ನಾಟಕದಲ್ಲಿಯೂ ಹೂಡಿಕೆ ಮಾಡಬೇಕು. ಇದರಿಂದ ಎರಡೂ ರಾಜ್ಯಗಳಿಗೆ ಅನುಕೂಲವಾಗಲಿದೆ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>