<p><strong>ನವದೆಹಲಿ:</strong> ಉಕ್ಕಿನ ಆಮದು ಸುಂಕವನ್ನು ಶೇ 7.5ರಿಂದ ಶೇ 12ಕ್ಕೆ ಏರಿಸಲು ಹಣಕಾಸು ಸಚಿವರಿಗೆ ಮನವರಿಕೆ ಮಾಡಲು ಪ್ರಯತ್ನಿಸುತ್ತೇನೆ ಎಂದು ಕೇಂದ್ರ ಭಾರಿ ಕೈಗಾರಿಕೆ ಹಾಗೂ ಉಕ್ಕು ಸಚಿವ ಎಚ್.ಡಿ.ಕುಮಾರಸ್ವಾಮಿ ಭರವಸೆ ನೀಡಿದರು. </p>.<p>ಭಾರತೀಯ ಉಕ್ಕು ಸಂಘಟನೆಯು ಗುರುವಾರ ಇಲ್ಲಿ ಆಯೋಜಿಸಿದ್ದ ಐದನೇ ಉಕ್ಕು ಸಮ್ಮೇಳನದಲ್ಲಿ ಅವರು ಮಾತನಾಡಿದರು.</p>.<p>‘ಕಳೆದ ಎರಡು ತಿಂಗಳಲ್ಲಿ ಹಲವು ಉಕ್ಕು ಉದ್ಯಮಿಗಳನ್ನು ತಮ್ಮನ್ನು ಭೇಟಿ ಮಾಡಿ ಈ ಉದ್ಯಮ ಕ್ಷೇತ್ರದಲ್ಲಿ ತಾವು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಚರ್ಚಿಸಿದ್ದಾರೆ. ಚೀನಾದಿಂದ ಎದುರಿಸುತ್ತಿರುವ ಸವಾಲುಗಳ ಬಗ್ಗೆ ಬೆಳಕು ಚೆಲ್ಲಿದ್ದಾರೆ. ಹೀಗಾಗಿ, ಚೀನಾದ ಉಕ್ಕಿನ ಆಮದಿನ ಮೇಲೆ ಹೆಚ್ಚಿನ ಸುಂಕ ವಿಧಿಸುವುದು ಅನಿವಾರ್ಯ’ ಎಂದರು. </p>.<p>ಜಾಗತಿಕ ಬೇಡಿಕೆ ಕುಸಿತದಂತಹ ಸವಾಲುಗಳ ವಿರುದ್ಧ ಜಾಗರೂಕರಾಗಿರಬೇಕಾದ ಅಗತ್ಯವನ್ನು ಸಚಿವರು ಒತ್ತಿ ಹೇಳಿದರು. ನಮ್ಮ ದೇಶವು ವಿಶ್ವದ ಎರಡನೇ ಅತಿ ದೊಡ್ಡ ಉಕ್ಕು ಉತ್ಪಾದಕ ಹಾಗೂ ಗ್ರಾಹಕ ದೇಶವಾಗಿದೆ. ಭಾರತದ ಉಕ್ಕಿನ ಉದ್ಯಮವು ಹೊಸ ಎತ್ತರಕ್ಕೆ ಏರಲು ಸಿದ್ಧವಾಗಿದೆ ಎಂದರು. </p>.<p>ಕಳೆದ ಮೂರು ವರ್ಷಗಳಲ್ಲಿ ಬೇಡಿಕೆಯು ಎರಡಂಕಿಯ ದರದಲ್ಲಿ ಬೆಳೆಯುತ್ತಿದೆ ಮತ್ತು ಈ ಪ್ರವೃತ್ತಿಯು ಮುಂದುವರಿಯುವ ನಿರೀಕ್ಷೆಯಿದೆ ಎಂದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಉಕ್ಕಿನ ಆಮದು ಸುಂಕವನ್ನು ಶೇ 7.5ರಿಂದ ಶೇ 12ಕ್ಕೆ ಏರಿಸಲು ಹಣಕಾಸು ಸಚಿವರಿಗೆ ಮನವರಿಕೆ ಮಾಡಲು ಪ್ರಯತ್ನಿಸುತ್ತೇನೆ ಎಂದು ಕೇಂದ್ರ ಭಾರಿ ಕೈಗಾರಿಕೆ ಹಾಗೂ ಉಕ್ಕು ಸಚಿವ ಎಚ್.ಡಿ.ಕುಮಾರಸ್ವಾಮಿ ಭರವಸೆ ನೀಡಿದರು. </p>.<p>ಭಾರತೀಯ ಉಕ್ಕು ಸಂಘಟನೆಯು ಗುರುವಾರ ಇಲ್ಲಿ ಆಯೋಜಿಸಿದ್ದ ಐದನೇ ಉಕ್ಕು ಸಮ್ಮೇಳನದಲ್ಲಿ ಅವರು ಮಾತನಾಡಿದರು.</p>.<p>‘ಕಳೆದ ಎರಡು ತಿಂಗಳಲ್ಲಿ ಹಲವು ಉಕ್ಕು ಉದ್ಯಮಿಗಳನ್ನು ತಮ್ಮನ್ನು ಭೇಟಿ ಮಾಡಿ ಈ ಉದ್ಯಮ ಕ್ಷೇತ್ರದಲ್ಲಿ ತಾವು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಚರ್ಚಿಸಿದ್ದಾರೆ. ಚೀನಾದಿಂದ ಎದುರಿಸುತ್ತಿರುವ ಸವಾಲುಗಳ ಬಗ್ಗೆ ಬೆಳಕು ಚೆಲ್ಲಿದ್ದಾರೆ. ಹೀಗಾಗಿ, ಚೀನಾದ ಉಕ್ಕಿನ ಆಮದಿನ ಮೇಲೆ ಹೆಚ್ಚಿನ ಸುಂಕ ವಿಧಿಸುವುದು ಅನಿವಾರ್ಯ’ ಎಂದರು. </p>.<p>ಜಾಗತಿಕ ಬೇಡಿಕೆ ಕುಸಿತದಂತಹ ಸವಾಲುಗಳ ವಿರುದ್ಧ ಜಾಗರೂಕರಾಗಿರಬೇಕಾದ ಅಗತ್ಯವನ್ನು ಸಚಿವರು ಒತ್ತಿ ಹೇಳಿದರು. ನಮ್ಮ ದೇಶವು ವಿಶ್ವದ ಎರಡನೇ ಅತಿ ದೊಡ್ಡ ಉಕ್ಕು ಉತ್ಪಾದಕ ಹಾಗೂ ಗ್ರಾಹಕ ದೇಶವಾಗಿದೆ. ಭಾರತದ ಉಕ್ಕಿನ ಉದ್ಯಮವು ಹೊಸ ಎತ್ತರಕ್ಕೆ ಏರಲು ಸಿದ್ಧವಾಗಿದೆ ಎಂದರು. </p>.<p>ಕಳೆದ ಮೂರು ವರ್ಷಗಳಲ್ಲಿ ಬೇಡಿಕೆಯು ಎರಡಂಕಿಯ ದರದಲ್ಲಿ ಬೆಳೆಯುತ್ತಿದೆ ಮತ್ತು ಈ ಪ್ರವೃತ್ತಿಯು ಮುಂದುವರಿಯುವ ನಿರೀಕ್ಷೆಯಿದೆ ಎಂದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>