'ಶೀಘ್ರದಲ್ಲೇ ರಾಮ ಮಂದಿರ ನಿರ್ಮಾಣವಾಗಲಿ ಎಂದು ನಾವೆಲ್ಲಾ ರಾಮ ಭಕ್ತರು ಈ ಕಾರ್ಯಕ್ರಮದಲ್ಲಿ ಪ್ರತಿಜ್ಞೆ ಕೈಗೊಳ್ಳುತ್ತೇವೆ' ಎಂದು ಹೋಮ್ ಗಾರ್ಡ್ ಡಿಜಿ ಸೂರ್ಯ ಕುಮಾರ್ ಶುಕ್ಲಾ ಪ್ರತಿಜ್ಞೆ ಸ್ವೀಕರಿಸಿದ್ದಾರೆ. ಐಪಿಎಸ್ ಅಧಿಕಾರಿ ಮತ್ತು ಇತರರು ಪ್ರತಿಜ್ಞೆ ಸ್ವೀಕರಿಸುತ್ತಿರುವ ಈ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ.