ಲಾಕ್ಡೌನ್ ನಿರ್ಬಂಧಗಳನ್ನು ತೆಗೆದ ಬಳಿಕ ಬೇಡಿಕೆಯಲ್ಲಿ ಸುಧಾರಣೆ ಕಂಡುಬರುತ್ತಿರುವುದನ್ನು ಸಿಪಿಐ ಹಣದುಬ್ಬರದಲ್ಲಿ ಆಗುತ್ತಿರುವ ಏರಿಕೆಯು ಸೂಚಿಸುತ್ತಿದೆ. ಹೀಗಿದ್ದರೂ ಬಹುಪಾಲು ಬೇಡಿಕೆಯು ಹಬ್ಬಕ್ಕೆ ಸಂಬಂಧಿಸಿದ್ದಾಗಿದೆ. ಹೀಗಾಗಿ ಇದು ಸಹಜವಾದ ಚೇತರಿಕೆ ಎಂದು ಈಗಲೇ ಹೇಳಲಾಗುವುದಿಲ್ಲ ಎಂದು ಇಂಡಿಯಾ ರೇಟಿಂಗ್ಸ್ ಆ್ಯಂಡ್ ರಿಸರ್ಚ್ನ ಮುಖ್ಯ ಆರ್ಥಿಕ ತಜ್ಞ ಡಿ.ಕೆ. ಪಂತ್ ತಿಳಿಸಿದ್ದಾರೆ.