ಹಲವು ನ್ಯಾಯಾಲಯಗಳಲ್ಲಿ ನೇರ ತೆರಿಗೆಗೆ ಸಂಬಂಧಿಸಿದ 4,83,000 ಪ್ರಕರಣಗಳು ಬಾಕಿ ಉಳಿದಿವೆ. ವಿವಾದ್ ಸೇ ವಿಶ್ವಾಸ್ ಯೋಜನೆ ಮೂಲಕ ಪ್ರಕರಣಗಳನ್ನು ಬಗೆ ಹರಿಸಲು ಸರ್ಕಾರ ಮುಂದಾಗಿದೆ. ತೆರಿಗೆ ಸಂಬಂಧಿತ ಪ್ರಕರಣಗಳಲ್ಲಿ ಸಿಲುಕಿರುವವರು 2020ರ ಮಾರ್ಚ್ 31ರೊಳಗೆ ಬಾಕಿ ತೆರಿಗೆಯನ್ನು ಪಾವತಿಸಿ, ದಂಡ ಮತ್ತು ಬಡ್ಡಿಯಿಂದ ಮುಕ್ತಿ ಪಡೆಯುವ ಅವಕಾಶವನ್ನು ಈ ಯೋಜನೆ ನೀಡಲಿದೆ.