ನವದೆಹಲಿ: ಯೆಸ್ ಬ್ಯಾಂಕ್ ಸಮಸ್ಯೆ ಪರಿಹರಿಸಲು ಆರ್ಬಿಐ ಪ್ರಯತ್ನಿಸುತ್ತಿದೆ. ಯೆಸ್ ಬ್ಯಾಂಕ್ನಲ್ಲಿ ಠೇವಣಿ ಇರಿಸಿದವರ ಹಣ ಸುರಕ್ಷಿತವಾಗಿದೆ ಎಂದು ಆರ್ಬಿಐ ಗವರ್ನರ್ ಹೇಳಿರುವುದಾಗಿವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.
ಯೆಸ್ ಬ್ಯಾಂಕ್ನಲ್ಲಿ ಠೇವಣಿ ಇರಿಸಿರುವವರ ಹಣ ಸುರಕ್ಷಿತವಾಗಿದೆ ಎಂದು ನಾನು ಭರವಸೆ ನೀಡುತ್ತೇನೆ. ಆರ್ಬಿಐ ಜತೆ ನಾವು ನಿರಂತರ ಸಂಪರ್ಕದಲ್ಲಿದ್ದೇವೆ ಎಂದು ಶುಕ್ರವಾರ ಮಾಧ್ಯಮದವರಲ್ಲಿ ಮಾತನಾಡಿದ ಸಚಿವೆ ಹೇಳಿದ್ದಾರೆ.