ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯೆಸ್ ಬ್ಯಾಂಕ್‌ನಲ್ಲಿ ಹಣ ಸುರಕ್ಷಿತವಾಗಿದೆ: ನಿರ್ಮಲಾ ಸೀತಾರಾಮನ್ 

Last Updated 6 ಮಾರ್ಚ್ 2020, 9:23 IST
ಅಕ್ಷರ ಗಾತ್ರ

ನವದೆಹಲಿ: ಯೆಸ್ ಬ್ಯಾಂಕ್ ಸಮಸ್ಯೆ ಪರಿಹರಿಸಲು ಆರ್‌ಬಿಐ ಪ್ರಯತ್ನಿಸುತ್ತಿದೆ. ಯೆಸ್ ಬ್ಯಾಂಕ್‌ನಲ್ಲಿ ಠೇವಣಿ ಇರಿಸಿದವರ ಹಣ ಸುರಕ್ಷಿತವಾಗಿದೆ ಎಂದು ಆರ್‌ಬಿಐ ಗವರ್ನರ್ ಹೇಳಿರುವುದಾಗಿವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

ಯೆಸ್ ಬ್ಯಾಂಕ್‌ನಲ್ಲಿ ಠೇವಣಿ ಇರಿಸಿರುವವರ ಹಣ ಸುರಕ್ಷಿತವಾಗಿದೆ ಎಂದು ನಾನು ಭರವಸೆ ನೀಡುತ್ತೇನೆ. ಆರ್‌ಬಿಐ ಜತೆ ನಾವು ನಿರಂತರ ಸಂಪರ್ಕದಲ್ಲಿದ್ದೇವೆ ಎಂದು ಶುಕ್ರವಾರ ಮಾಧ್ಯಮದವರಲ್ಲಿ ಮಾತನಾಡಿದ ಸಚಿವೆ ಹೇಳಿದ್ದಾರೆ.

ಆರ್‌ಬಿಐ ಮತ್ತು ಸರ್ಕಾರ ಯೆಸ್ ಬ್ಯಾಂಕ್‌ನ ಸಮಸ್ಯೆಗಳನ್ನು ಪರಿಹರಿಸಲು ಯತ್ನಿಸುತ್ತಿದ್ದು, ಎಲ್ಲರ ಹಿತ ಕಾಪಾಡಲಾಗುವುದು ಎಂದು ನಿರ್ಮಲಾ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT