<p><strong>ನವದೆಹಲಿ:</strong> ಚೀನಾದ ಉತ್ಪನ್ನಗಳ ಆಮದು ನಿರ್ಬಂಧಿಸಿರುವ ಕೇಂದ್ರ ಸರ್ಕಾರವು ಭಾರತದಲ್ಲೇ ಉತ್ಪನ್ನಗಳನ್ನು ತಯಾರಿಸಲು ಮುಂದೆ ಬರುವವರಿಗೆ ವಿನಾಯಿತಿಗಳನ್ನು ಶೀಘ್ರದಲ್ಲೇ ಘೋಷಿಸುವ ನಿರೀಕ್ಷೆ ಇದೆ. ಉದ್ಯಮಿಗಳು ಬಯಸಿದ ಕಡೆ ಸುಲಭವಾಗಿ ಜಮೀನುಕೊಡಿಸುವುದು, ತೀರಾ ಕಡಿಮೆ ಬಡ್ಡಿದರದಲ್ಲಿ ಸಾಲ ನೀಡುವುದು ಈ ವಿನಾಯಿತಿಗಳ ಭಾಗವಾಗಬಹುದು.</p>.<p>ಪ್ರತ್ಯೇಕ ಹಣಕಾಸು ಸಂಸ್ಥೆಯೊಂದನ್ನು ತೆರೆದು, ಅದರ ಮೂಲಕ ಶೇಕಡ 5 ಅಥವಾ ಶೇ 6ಕ್ಕಿಂತ ಕಡಿಮೆ ಬಡ್ಡಿದರದಲ್ಲಿ ಸಾಲ ಕೊಡುವ ಚಿಂತನೆಯೂ ಸರ್ಕಾರಕ್ಕಿದೆ. ಉತ್ಪಾದನೆ ಆಧಾರಿತ ಪ್ರೋತ್ಸಾಹಕ ಕೊಡುಗೆಗಳನ್ನು ನೀಡಲು ಕೇಂದ್ರವು 20 ವಲಯಗಳನ್ನು ಗುರುತಿಸಿದೆ. ಜವಳಿ, ಚರ್ಮದ ಉತ್ಪನ್ನಗಳು, ಕೈಗಾರಿಕಾ ಯಂತ್ರೋಪಕರಣಗಳ ತಯಾರಿಕಾ ವಲಯಗಳು ಇವುಗಳಲ್ಲಿ ಸೇರಿವೆ ಎಂದು ಮೂಲಗಳು ತಿಳಿಸಿವೆ.</p>.<p>‘ಕೈಗಾರಿಕಾ ವಲಯಕ್ಕೆ ಇನ್ನೂ ಹೆಚ್ಚಿನ ಕೊಡುಗೆಗಳು ಸಿಗಲಿವೆ. ಪ್ರಧಾನಿ ನರೇಂದ್ರ ಮೋದಿ ಅವರು ಸ್ವಾತಂತ್ರ್ಯೋತ್ಸವದ ಅಂಗವಾಗಿ ಮಾಡುವ ಭಾಷಣದಲ್ಲಿ ಈ ವಲಯಕ್ಕಾಗಿ ಸರ್ಕಾರ ರೂಪಿಸಿರುವ ಯೋಜನೆಗಳ ಕುರಿತು ಹೆಚ್ಚಿನ ವಿವರಗಳು ಇರಬಹುದು’ ಎಂದು ಮೂಲಗಳು ವಿವರಿಸಿವೆ.</p>.<p>ಭೂಬ್ಯಾಂಕ್ ಪೋರ್ಟಲ್ಗಾಗಿ ಆರು ರಾಜ್ಯಗಳ ವ್ಯಾಪ್ತಿಯಲ್ಲಿ ಒಟ್ಟು 5 ಲಕ್ಷ ಹೆಕ್ಟೇರ್ ಜಮೀನು ಗುರುತಿಸಲಾಗಿದೆ. ಉದ್ಯಮಿಗಳು ಲಭ್ಯವಿರುವ ಜಮೀನಿನ ಪರಿಶೀಲನೆಯನ್ನುಈ ಪೋರ್ಟಲ್ ಮೂಲಕ ನಡೆಸಬಹುದು. ಈ ವ್ಯವಸ್ಥೆ ಶೀಘ್ರವೇ ಆರಂಭಗೊಳ್ಳಲಿದೆ. ಉತ್ತರ ಪ್ರದೇಶದ ಮಾದರಿಯಲ್ಲಿ ಕಾರ್ಮಿಕ ಕಾನೂನುಗಳನ್ನು ಸಡಿಲಿಸುವ ವಿಚಾರವಾಗಿಯೂ ಕೇಂದ್ರವು ರಾಜ್ಯ ಸರ್ಕಾರಗಳ ಜೊತೆ ಮಾತುಕತೆ ನಡೆಸುತ್ತಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಚೀನಾದ ಉತ್ಪನ್ನಗಳ ಆಮದು ನಿರ್ಬಂಧಿಸಿರುವ ಕೇಂದ್ರ ಸರ್ಕಾರವು ಭಾರತದಲ್ಲೇ ಉತ್ಪನ್ನಗಳನ್ನು ತಯಾರಿಸಲು ಮುಂದೆ ಬರುವವರಿಗೆ ವಿನಾಯಿತಿಗಳನ್ನು ಶೀಘ್ರದಲ್ಲೇ ಘೋಷಿಸುವ ನಿರೀಕ್ಷೆ ಇದೆ. ಉದ್ಯಮಿಗಳು ಬಯಸಿದ ಕಡೆ ಸುಲಭವಾಗಿ ಜಮೀನುಕೊಡಿಸುವುದು, ತೀರಾ ಕಡಿಮೆ ಬಡ್ಡಿದರದಲ್ಲಿ ಸಾಲ ನೀಡುವುದು ಈ ವಿನಾಯಿತಿಗಳ ಭಾಗವಾಗಬಹುದು.</p>.<p>ಪ್ರತ್ಯೇಕ ಹಣಕಾಸು ಸಂಸ್ಥೆಯೊಂದನ್ನು ತೆರೆದು, ಅದರ ಮೂಲಕ ಶೇಕಡ 5 ಅಥವಾ ಶೇ 6ಕ್ಕಿಂತ ಕಡಿಮೆ ಬಡ್ಡಿದರದಲ್ಲಿ ಸಾಲ ಕೊಡುವ ಚಿಂತನೆಯೂ ಸರ್ಕಾರಕ್ಕಿದೆ. ಉತ್ಪಾದನೆ ಆಧಾರಿತ ಪ್ರೋತ್ಸಾಹಕ ಕೊಡುಗೆಗಳನ್ನು ನೀಡಲು ಕೇಂದ್ರವು 20 ವಲಯಗಳನ್ನು ಗುರುತಿಸಿದೆ. ಜವಳಿ, ಚರ್ಮದ ಉತ್ಪನ್ನಗಳು, ಕೈಗಾರಿಕಾ ಯಂತ್ರೋಪಕರಣಗಳ ತಯಾರಿಕಾ ವಲಯಗಳು ಇವುಗಳಲ್ಲಿ ಸೇರಿವೆ ಎಂದು ಮೂಲಗಳು ತಿಳಿಸಿವೆ.</p>.<p>‘ಕೈಗಾರಿಕಾ ವಲಯಕ್ಕೆ ಇನ್ನೂ ಹೆಚ್ಚಿನ ಕೊಡುಗೆಗಳು ಸಿಗಲಿವೆ. ಪ್ರಧಾನಿ ನರೇಂದ್ರ ಮೋದಿ ಅವರು ಸ್ವಾತಂತ್ರ್ಯೋತ್ಸವದ ಅಂಗವಾಗಿ ಮಾಡುವ ಭಾಷಣದಲ್ಲಿ ಈ ವಲಯಕ್ಕಾಗಿ ಸರ್ಕಾರ ರೂಪಿಸಿರುವ ಯೋಜನೆಗಳ ಕುರಿತು ಹೆಚ್ಚಿನ ವಿವರಗಳು ಇರಬಹುದು’ ಎಂದು ಮೂಲಗಳು ವಿವರಿಸಿವೆ.</p>.<p>ಭೂಬ್ಯಾಂಕ್ ಪೋರ್ಟಲ್ಗಾಗಿ ಆರು ರಾಜ್ಯಗಳ ವ್ಯಾಪ್ತಿಯಲ್ಲಿ ಒಟ್ಟು 5 ಲಕ್ಷ ಹೆಕ್ಟೇರ್ ಜಮೀನು ಗುರುತಿಸಲಾಗಿದೆ. ಉದ್ಯಮಿಗಳು ಲಭ್ಯವಿರುವ ಜಮೀನಿನ ಪರಿಶೀಲನೆಯನ್ನುಈ ಪೋರ್ಟಲ್ ಮೂಲಕ ನಡೆಸಬಹುದು. ಈ ವ್ಯವಸ್ಥೆ ಶೀಘ್ರವೇ ಆರಂಭಗೊಳ್ಳಲಿದೆ. ಉತ್ತರ ಪ್ರದೇಶದ ಮಾದರಿಯಲ್ಲಿ ಕಾರ್ಮಿಕ ಕಾನೂನುಗಳನ್ನು ಸಡಿಲಿಸುವ ವಿಚಾರವಾಗಿಯೂ ಕೇಂದ್ರವು ರಾಜ್ಯ ಸರ್ಕಾರಗಳ ಜೊತೆ ಮಾತುಕತೆ ನಡೆಸುತ್ತಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>