<p><strong>ಮುಂಬೈ:</strong> ದೇಶದ ಆರ್ಥಿಕ ವೃದ್ಧಿ ದರವು (ಜಿಡಿಪಿ) ಪ್ರಸಕ್ತ ಹಣಕಾಸು ವರ್ಷದಲ್ಲಿ ಶೇ 1.1ಕ್ಕೆ ಕುಸಿಯುವ ಸಾಧ್ಯತೆ ಇದೆ ಎಂದು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ (ಎಸ್ಬಿಐ) ಸಂಶೋಧನಾ ವರದಿ ಅಂದಾಜು ಮಾಡಿದೆ.</p>.<p>2019–20ರಲ್ಲಿ ಜಿಡಿಪಿ ಶೇ 4.1ರಷ್ಟು ಇರುವ ಅಂದಾಜು ಮಾಡಲಾಗಿದೆ. ಇದೀಗ ಕೊರೊನಾ ಸೋಂಕು ತೀವ್ರವಾಗಿ ವ್ಯಾಪಿಸುತ್ತಿರುವುದರಿಂದ ಪ್ರಸಕ್ತ ಹಣಕಾಸು ವರ್ಷದಲ್ಲಿ ಆರ್ಥಿಕತೆಯ ಮೇಲೆ ಭಾರಿ ಪ್ರರಿಣಾಮ ಬೀರುವ ಸಾಧ್ಯತೆ ಕಂಡು ಬಂದಿದೆ.</p>.<p>ಲಾಕ್ಡೌನ್ ಅವಧಿಯನ್ನು ಮೇ 3ರವರೆಗೆ ವಿಸ್ತರಿಸಲಾಗಿದೆ. ಇದರಿಂದ ಆರ್ಥಿಕತೆಗೆ ₹ 12.1 ಲಕ್ಷ ಕೋಟಿ ನಷ್ಟವಾಗಲಿದೆ.</p>.<p>ಸ್ವಂತ ಉದ್ಯೋಗ ನಡೆಸುತ್ತಿರುವ 37.3 ಕೋಟಿ ಮಂದಿಯ ದಿನದಆದಾಯದಲ್ಲಿ ₹ 10 ಸಾವಿರ ಕೋಟಿ ಕಡಿಮೆ ಆಗಲಿದ್ದು, ಲಾಕ್ಡೌನ್ ಅವಧಿಗೆ ಒಟ್ಟಾರೆ ನಷ್ಟ ₹ 4.05 ಲಕ್ಷ ಕೋಟಿಗಳಷ್ಟಾಗಲಿದೆ. ಸಾಮಾನ್ಯ ಕಾರ್ಮಿಕರ ವರಮಾನ ನಷ್ಟ ₹ 1 ಲಕ್ಷ ಕೋಟಿಗಳಷ್ಟಾಗಲಿದೆ. ಹೀಗಾಗಿ ಯಾವುದೇ ರೀತಿಯ ವಿತ್ತೀಯ ಕೊಡುಗೆಯು ಕನಿಷ್ಠ ₹ 4 ಲಕ್ಷ ಕೋಟಿ ವರಮಾನ ನಷ್ಟ ತುಂಬಿಕೊಡುವಂತಿರಬೇಕು ಎಂದಿದೆ.</p>.<p>ನಿವ್ವಳ ತೆರಿಗೆ ವರಮಾನ ಕೊರತೆ ₹ 4.12 ಲಕ್ಷ ಕೋಟಿಗಳಷ್ಟಾಗಲಿದೆ. ರಾಜ್ಯಗಳ ತೆರಿಗೆ ವರಮಾನ ಕೊರತೆ ₹ 1.32 ಲಕ್ಷ ಕೋಟಿಗಳಷ್ಟಾಗಲಿದೆ ಎಂದು ವರದಿಯಲ್ಲಿ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ:</strong> ದೇಶದ ಆರ್ಥಿಕ ವೃದ್ಧಿ ದರವು (ಜಿಡಿಪಿ) ಪ್ರಸಕ್ತ ಹಣಕಾಸು ವರ್ಷದಲ್ಲಿ ಶೇ 1.1ಕ್ಕೆ ಕುಸಿಯುವ ಸಾಧ್ಯತೆ ಇದೆ ಎಂದು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ (ಎಸ್ಬಿಐ) ಸಂಶೋಧನಾ ವರದಿ ಅಂದಾಜು ಮಾಡಿದೆ.</p>.<p>2019–20ರಲ್ಲಿ ಜಿಡಿಪಿ ಶೇ 4.1ರಷ್ಟು ಇರುವ ಅಂದಾಜು ಮಾಡಲಾಗಿದೆ. ಇದೀಗ ಕೊರೊನಾ ಸೋಂಕು ತೀವ್ರವಾಗಿ ವ್ಯಾಪಿಸುತ್ತಿರುವುದರಿಂದ ಪ್ರಸಕ್ತ ಹಣಕಾಸು ವರ್ಷದಲ್ಲಿ ಆರ್ಥಿಕತೆಯ ಮೇಲೆ ಭಾರಿ ಪ್ರರಿಣಾಮ ಬೀರುವ ಸಾಧ್ಯತೆ ಕಂಡು ಬಂದಿದೆ.</p>.<p>ಲಾಕ್ಡೌನ್ ಅವಧಿಯನ್ನು ಮೇ 3ರವರೆಗೆ ವಿಸ್ತರಿಸಲಾಗಿದೆ. ಇದರಿಂದ ಆರ್ಥಿಕತೆಗೆ ₹ 12.1 ಲಕ್ಷ ಕೋಟಿ ನಷ್ಟವಾಗಲಿದೆ.</p>.<p>ಸ್ವಂತ ಉದ್ಯೋಗ ನಡೆಸುತ್ತಿರುವ 37.3 ಕೋಟಿ ಮಂದಿಯ ದಿನದಆದಾಯದಲ್ಲಿ ₹ 10 ಸಾವಿರ ಕೋಟಿ ಕಡಿಮೆ ಆಗಲಿದ್ದು, ಲಾಕ್ಡೌನ್ ಅವಧಿಗೆ ಒಟ್ಟಾರೆ ನಷ್ಟ ₹ 4.05 ಲಕ್ಷ ಕೋಟಿಗಳಷ್ಟಾಗಲಿದೆ. ಸಾಮಾನ್ಯ ಕಾರ್ಮಿಕರ ವರಮಾನ ನಷ್ಟ ₹ 1 ಲಕ್ಷ ಕೋಟಿಗಳಷ್ಟಾಗಲಿದೆ. ಹೀಗಾಗಿ ಯಾವುದೇ ರೀತಿಯ ವಿತ್ತೀಯ ಕೊಡುಗೆಯು ಕನಿಷ್ಠ ₹ 4 ಲಕ್ಷ ಕೋಟಿ ವರಮಾನ ನಷ್ಟ ತುಂಬಿಕೊಡುವಂತಿರಬೇಕು ಎಂದಿದೆ.</p>.<p>ನಿವ್ವಳ ತೆರಿಗೆ ವರಮಾನ ಕೊರತೆ ₹ 4.12 ಲಕ್ಷ ಕೋಟಿಗಳಷ್ಟಾಗಲಿದೆ. ರಾಜ್ಯಗಳ ತೆರಿಗೆ ವರಮಾನ ಕೊರತೆ ₹ 1.32 ಲಕ್ಷ ಕೋಟಿಗಳಷ್ಟಾಗಲಿದೆ ಎಂದು ವರದಿಯಲ್ಲಿ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>