<p>ಹುಬ್ಬಳ್ಳಿ: ‘ರಾಷ್ಟ್ರೀಯ ಪಿಂಚಣಿ ವ್ಯವಸ್ಥೆ (ಎನ್ಪಿಎಸ್) ದೀರ್ಘಕಾಲೀನ ಆರ್ಥಿಕ ಭದ್ರತಾ ಯೋಜನೆಯಾಗಿದೆ. ಪ್ರಸ್ತುತ ದಿನಗಳಲ್ಲಿ ಇದು ಪ್ರತಿಯೊಬ್ಬರಿಗೂ ಅಗತ್ಯ. ವಿಶೇಷವಾಗಿ ಉದ್ಯಮಿಗಳು ಮತ್ತು ಸ್ವಉದ್ಯೋಗಿಗಳಿಗೆ ನಿವೃತ್ತಿ ಜೀವನವನ್ನು ಸುರಕ್ಷಿತಗೊಳಿಸುವ ಅತ್ಯುತ್ತಮ ಸಾಧನವಾಗಿದೆ’ ಎಂದು ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆಯ ಅಧ್ಯಕ್ಷ ಜಿ.ಕೆ. ಆದಪ್ಪಗೌಡರ ಹೇಳಿದರು.</p>.<p>ಇಲ್ಲಿನ ಜೆ.ಸಿ. ನಗರದ ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆಯಲ್ಲಿ ವಿಷನ್ ಕರ್ನಾಟಕ ಫೌಂಡೇಷನ್, ಪಿಂಚಣಿ ನಿಧಿ ನಿಯಂತ್ರಣ ಮತ್ತು ಅಭಿವೃದ್ಧಿ ಪ್ರಾಧಿಕಾರದ ಸಹಯೋಗದಲ್ಲಿ ಈಚೆಗೆ ನಡೆದ ರಾಷ್ಟ್ರೀಯ ಪಿಂಚಣಿ ವ್ಯವಸ್ಥೆ ಕುರಿತು ವಿಶೇಷ ಜಾಗೃತಿ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.</p>.<p>ಎನ್ಪಿಎಸ್ ಯೋಜನೆಯ ಲಾಭ, ತೆರಿಗೆ ವಿನಾಯಿತಿ, ಹೂಡಿಕೆ, ಪಿಂಚಣಿ ಲೆಕ್ಕಾಚಾರ ಹಾಗೂ ಉದ್ಯಮ, ವ್ಯಾಪಾರ ವಲಯದಲ್ಲಿ ಉದ್ಯೋಗಿಗಳ ಆರ್ಥಿಕ ಮತ್ತು ಸಾಮಾಜಿಕ ಭದ್ರತೆಯಲ್ಲಿ ಎನ್ಪಿಎಸ್ ಮಹತ್ವದ ಕುರಿತು ತಜ್ಞರು ಉಪನ್ಯಾಸ ನೀಡಿದರು.</p>.<p>ಪಿಎಫ್ಆರ್ಡಿಎ ಸಹಾಯಕ ವ್ಯವಸ್ಥಾಪಕ ಶೈಲೆಂದರ್ ಬಾಬು ಅವರು, ಎನ್ಪಿಎಸ್ ಯೋಜನೆಯ ವೈಶಿಷ್ಟ್ಯ ಹಾಗೂ ಸರ್ಕಾರದಿಂದ ನೀಡಲಾಗುತ್ತಿರುವ ಸೌಲಭ್ಯಗಳ ಕುರಿತು ಮಾಹಿತಿ ನೀಡಿದರು.</p>.<p>ಸಂಸ್ಥೆಯ ಉಪಾಧ್ಯಕ್ಷ ಸಿದ್ದೇಶ್ವರ ಕಮ್ಮಾರ, ಗೌರವ ಕಾರ್ಯದರ್ಶಿ ಉದಯ ರೇವಣಕರ, ಸಾಗರ್ ಬಿ.ಟಿ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260601-24-1012940350</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹುಬ್ಬಳ್ಳಿ: ‘ರಾಷ್ಟ್ರೀಯ ಪಿಂಚಣಿ ವ್ಯವಸ್ಥೆ (ಎನ್ಪಿಎಸ್) ದೀರ್ಘಕಾಲೀನ ಆರ್ಥಿಕ ಭದ್ರತಾ ಯೋಜನೆಯಾಗಿದೆ. ಪ್ರಸ್ತುತ ದಿನಗಳಲ್ಲಿ ಇದು ಪ್ರತಿಯೊಬ್ಬರಿಗೂ ಅಗತ್ಯ. ವಿಶೇಷವಾಗಿ ಉದ್ಯಮಿಗಳು ಮತ್ತು ಸ್ವಉದ್ಯೋಗಿಗಳಿಗೆ ನಿವೃತ್ತಿ ಜೀವನವನ್ನು ಸುರಕ್ಷಿತಗೊಳಿಸುವ ಅತ್ಯುತ್ತಮ ಸಾಧನವಾಗಿದೆ’ ಎಂದು ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆಯ ಅಧ್ಯಕ್ಷ ಜಿ.ಕೆ. ಆದಪ್ಪಗೌಡರ ಹೇಳಿದರು.</p>.<p>ಇಲ್ಲಿನ ಜೆ.ಸಿ. ನಗರದ ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆಯಲ್ಲಿ ವಿಷನ್ ಕರ್ನಾಟಕ ಫೌಂಡೇಷನ್, ಪಿಂಚಣಿ ನಿಧಿ ನಿಯಂತ್ರಣ ಮತ್ತು ಅಭಿವೃದ್ಧಿ ಪ್ರಾಧಿಕಾರದ ಸಹಯೋಗದಲ್ಲಿ ಈಚೆಗೆ ನಡೆದ ರಾಷ್ಟ್ರೀಯ ಪಿಂಚಣಿ ವ್ಯವಸ್ಥೆ ಕುರಿತು ವಿಶೇಷ ಜಾಗೃತಿ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.</p>.<p>ಎನ್ಪಿಎಸ್ ಯೋಜನೆಯ ಲಾಭ, ತೆರಿಗೆ ವಿನಾಯಿತಿ, ಹೂಡಿಕೆ, ಪಿಂಚಣಿ ಲೆಕ್ಕಾಚಾರ ಹಾಗೂ ಉದ್ಯಮ, ವ್ಯಾಪಾರ ವಲಯದಲ್ಲಿ ಉದ್ಯೋಗಿಗಳ ಆರ್ಥಿಕ ಮತ್ತು ಸಾಮಾಜಿಕ ಭದ್ರತೆಯಲ್ಲಿ ಎನ್ಪಿಎಸ್ ಮಹತ್ವದ ಕುರಿತು ತಜ್ಞರು ಉಪನ್ಯಾಸ ನೀಡಿದರು.</p>.<p>ಪಿಎಫ್ಆರ್ಡಿಎ ಸಹಾಯಕ ವ್ಯವಸ್ಥಾಪಕ ಶೈಲೆಂದರ್ ಬಾಬು ಅವರು, ಎನ್ಪಿಎಸ್ ಯೋಜನೆಯ ವೈಶಿಷ್ಟ್ಯ ಹಾಗೂ ಸರ್ಕಾರದಿಂದ ನೀಡಲಾಗುತ್ತಿರುವ ಸೌಲಭ್ಯಗಳ ಕುರಿತು ಮಾಹಿತಿ ನೀಡಿದರು.</p>.<p>ಸಂಸ್ಥೆಯ ಉಪಾಧ್ಯಕ್ಷ ಸಿದ್ದೇಶ್ವರ ಕಮ್ಮಾರ, ಗೌರವ ಕಾರ್ಯದರ್ಶಿ ಉದಯ ರೇವಣಕರ, ಸಾಗರ್ ಬಿ.ಟಿ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260601-24-1012940350</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>