<figcaption>""</figcaption>.<p><strong>ಮುಂಬೈ: </strong>ಲಕ್ಷ್ಮಿ ವಿಲಾಸ್ ಬ್ಯಾಂಕ್ ಮೇಲೆ ಸರ್ಕಾರವು ಒಂದು ತಿಂಗಳ ತಾತ್ಕಾಲಿಕ ನಿಷೇಧ ಹೇರಿದ್ದು, ಬ್ಯಾಂಕ್ ಖಾತೆದಾರರಿಗೆ ಹಣ ಹಿಂಪಡೆಯುವ ಗರಿಷ್ಠ ಮಿತಿ ₹25,000 ವಿಧಿಸಿದೆ.</p>.<p>ಭಾರತೀಯ ರಿಸರ್ವ್ ಬ್ಯಾಂಕ್ನ (ಆರ್ಬಿಐ) ಸಲಹೆ ಮೇರೆಗೆ ಸರ್ಕಾರ ಈ ನಿರ್ಧಾರ ಕೈಗೊಂಡಿದೆ. ಖಾಸಗಿ ವಲಯದ ಲಕ್ಷ್ಮಿ ವಿಲಾಸ್ ಬ್ಯಾಂಕ್ನ ಹಣಕಾಸು ಪರಿಸ್ಥಿತಿ ಹದಗೆಡುತ್ತಿದ್ದ ಬೆನ್ನಲ್ಲೇ ಈ ನಿರ್ಧಾರಕ್ಕೆ ಬರಲಾಗಿದೆ. ಬ್ಯಾಂಕ್ನ ನಿರ್ದೇಶಕರ ಮಂಡಳಿಯನ್ನು ರದ್ದು ಪಡಿಸಲಾಗಿದೆ.</p>.<p>ಆರ್ಬಿಐ ಪ್ರಕಟಣೆಯಲ್ಲಿ ‘ಬ್ಯಾಂಕಿನ ಪುನಶ್ಚೇತನಕ್ಕೆ ವಿಶ್ವಾಸಾರ್ಹ ಯೋಜನೆ ಇರಲಿಲ್ಲ. ಹೀಗಾಗಿ, ಠೇವಣಿದಾರರ ಹಿತಾಸಕ್ತಿಯನ್ನು ಕಾಯುವ ಉದ್ದೇಶದಿಂದ, ಹಣಕಾಸು ಮತ್ತು ಬ್ಯಾಂಕಿಂಗ್ ಕ್ಷೇತ್ರದ ಸ್ಥಿರತೆಯ ದೃಷ್ಟಿಯಿಂದ ಈ ಕ್ರಮ ಕೈಗೊಳ್ಳುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸುವುದನ್ನು ಹೊರತುಪಡಿಸಿ ಬೇರೆ ಆಯ್ಕೆಗಳು ಇರಲಿಲ್ಲ’ ಎಂದು ಆರ್ಬಿಐ ಹೇಳಿದೆ ಎಂದು ತಿಳಿಸಿದೆ.</p>.<p>ಆರ್ಬಿಐನ ಮನವಿಯನ್ನು ಪರಿಗಣಿಸಿರುವ ಕೇಂದ್ರ ಸರ್ಕಾರವು, 30 ದಿನಗಳ ವರೆಗೂ ಬ್ಯಾಂಕ್ ಮೇಲೆ ನಿರ್ಬಂಧ ವಿಧಿಸಿದೆ ಎಂದು ಪ್ರಕಟಣೆಯಲ್ಲಿ ಹೇಳಿದೆ.</p>.<p>ಆರ್ಬಿಐ ಅನುಮತಿ ಇಲ್ಲದೆಯೇ ಯಾವುದೇ ಕಾರಣದಿಂದಲೂ ಲಕ್ಷ್ಮಿ ವಿಲಾಸ್ ಬ್ಯಾಂಕ್, 25 ಸಾವಿರ ರೂಪಾಯಿಗಿಂತ ಹೆಚ್ಚಿನ ಹಣವನ್ನು ಬ್ಯಾಂಕ್ನ ಗ್ರಾಹಕರಿಗೆ ನೀಡುವಂತಿಲ್ಲ. ಕೆನರಾ ಬ್ಯಾಂಕ್ನ ಮಾಜಿ ಕಾರ್ಯನಿರ್ವಾಹಕೇತರ ಅಧ್ಯಕ್ಷ ಟಿ.ಎನ್.ಮನೋಹರನ್ ಅವರನ್ನು ಬ್ಯಾಂಕ್ನ ಆಡಳಿತ ಅಧಿಕಾರಿಯಾಗಿ ನೇಮಿಸಲಾಗಿದೆ.</p>.<p class="bodytext"><strong>ಅರವತ್ತು ಶಾಖೆಗಳು</strong></p>.<p class="bodytext">ಬೆಂಗಳೂರು: ಎಲ್ವಿಬಿ ವೆಬ್ಸೈಟ್ನಲ್ಲಿ ಇರುವ ಮಾಹಿತಿ ಅನ್ವಯ, ಬ್ಯಾಂಕಿನ ಅರವತ್ತು ಶಾಖೆಗಳು ಕರ್ನಾಟಕದಲ್ಲಿ ಇವೆ. 2017ರ ಜುಲೈನಲ್ಲಿ ₹ 190ರಷ್ಟಿದ್ದ ಈ ಬ್ಯಾಂಕಿನ ಷೇರು ಮೌಲ್ಯವು ಈಗ ₹ 15.50ಕ್ಕೆ ಕುಸಿತ ಕಂಡಿದೆ.</p>.<p><strong>ಡಿಬಿಎಸ್ ಬ್ಯಾಂಕ್ ಜೊತೆ ವಿಲೀನ?</strong></p>.<p>ನವದೆಹಲಿ (ರಾಯಿಟರ್ಸ್): ಲಕ್ಷ್ಮೀ ವಿಲಾಸ್ ಬ್ಯಾಂಕ್ಅನ್ನು ಸಿಂಗಪುರದ ಡಿಬಿಎಸ್ ಬ್ಯಾಂಕ್ನ ಭಾರತೀಯ ಘಟಕದ ಜೊತೆ ವಿಲೀನಗೊಳಿಸುವ ಪ್ರಸ್ತಾವನೆಯನ್ನು ಆರ್ಬಿಐ ಮಂಗಳವಾರ ಮುಂದಿಟ್ಟಿದೆ.</p>.<p>ಎಲ್ವಿಬಿ ಮಾರಾಟಕ್ಕೆ ಒಂದು ವರ್ಷದಿಂದಲೂ ಯತ್ನ ನಡೆದಿದೆ. ಖರೀದಿದಾರನ್ನು ಎಲ್ವಿಬಿ ಅರಸುತ್ತ ಇದೆ. ಇಂಡಿಯಾಬುಲ್ಸ್ ಹೌಸಿಂಗ್ ಫೈನಾನ್ಸ್ ಲಿಮಿಟೆಡ್ ಜೊತೆ ಎಲ್ವಿಬಿಯನ್ನು ವಿಲೀನ ಮಾಡುವ ಪ್ರಸ್ತಾವನೆಯನ್ನು ಆರ್ಬಿಐ ಕಳೆದ ವರ್ಷ ತಿರಸ್ಕರಿಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<figcaption>""</figcaption>.<p><strong>ಮುಂಬೈ: </strong>ಲಕ್ಷ್ಮಿ ವಿಲಾಸ್ ಬ್ಯಾಂಕ್ ಮೇಲೆ ಸರ್ಕಾರವು ಒಂದು ತಿಂಗಳ ತಾತ್ಕಾಲಿಕ ನಿಷೇಧ ಹೇರಿದ್ದು, ಬ್ಯಾಂಕ್ ಖಾತೆದಾರರಿಗೆ ಹಣ ಹಿಂಪಡೆಯುವ ಗರಿಷ್ಠ ಮಿತಿ ₹25,000 ವಿಧಿಸಿದೆ.</p>.<p>ಭಾರತೀಯ ರಿಸರ್ವ್ ಬ್ಯಾಂಕ್ನ (ಆರ್ಬಿಐ) ಸಲಹೆ ಮೇರೆಗೆ ಸರ್ಕಾರ ಈ ನಿರ್ಧಾರ ಕೈಗೊಂಡಿದೆ. ಖಾಸಗಿ ವಲಯದ ಲಕ್ಷ್ಮಿ ವಿಲಾಸ್ ಬ್ಯಾಂಕ್ನ ಹಣಕಾಸು ಪರಿಸ್ಥಿತಿ ಹದಗೆಡುತ್ತಿದ್ದ ಬೆನ್ನಲ್ಲೇ ಈ ನಿರ್ಧಾರಕ್ಕೆ ಬರಲಾಗಿದೆ. ಬ್ಯಾಂಕ್ನ ನಿರ್ದೇಶಕರ ಮಂಡಳಿಯನ್ನು ರದ್ದು ಪಡಿಸಲಾಗಿದೆ.</p>.<p>ಆರ್ಬಿಐ ಪ್ರಕಟಣೆಯಲ್ಲಿ ‘ಬ್ಯಾಂಕಿನ ಪುನಶ್ಚೇತನಕ್ಕೆ ವಿಶ್ವಾಸಾರ್ಹ ಯೋಜನೆ ಇರಲಿಲ್ಲ. ಹೀಗಾಗಿ, ಠೇವಣಿದಾರರ ಹಿತಾಸಕ್ತಿಯನ್ನು ಕಾಯುವ ಉದ್ದೇಶದಿಂದ, ಹಣಕಾಸು ಮತ್ತು ಬ್ಯಾಂಕಿಂಗ್ ಕ್ಷೇತ್ರದ ಸ್ಥಿರತೆಯ ದೃಷ್ಟಿಯಿಂದ ಈ ಕ್ರಮ ಕೈಗೊಳ್ಳುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸುವುದನ್ನು ಹೊರತುಪಡಿಸಿ ಬೇರೆ ಆಯ್ಕೆಗಳು ಇರಲಿಲ್ಲ’ ಎಂದು ಆರ್ಬಿಐ ಹೇಳಿದೆ ಎಂದು ತಿಳಿಸಿದೆ.</p>.<p>ಆರ್ಬಿಐನ ಮನವಿಯನ್ನು ಪರಿಗಣಿಸಿರುವ ಕೇಂದ್ರ ಸರ್ಕಾರವು, 30 ದಿನಗಳ ವರೆಗೂ ಬ್ಯಾಂಕ್ ಮೇಲೆ ನಿರ್ಬಂಧ ವಿಧಿಸಿದೆ ಎಂದು ಪ್ರಕಟಣೆಯಲ್ಲಿ ಹೇಳಿದೆ.</p>.<p>ಆರ್ಬಿಐ ಅನುಮತಿ ಇಲ್ಲದೆಯೇ ಯಾವುದೇ ಕಾರಣದಿಂದಲೂ ಲಕ್ಷ್ಮಿ ವಿಲಾಸ್ ಬ್ಯಾಂಕ್, 25 ಸಾವಿರ ರೂಪಾಯಿಗಿಂತ ಹೆಚ್ಚಿನ ಹಣವನ್ನು ಬ್ಯಾಂಕ್ನ ಗ್ರಾಹಕರಿಗೆ ನೀಡುವಂತಿಲ್ಲ. ಕೆನರಾ ಬ್ಯಾಂಕ್ನ ಮಾಜಿ ಕಾರ್ಯನಿರ್ವಾಹಕೇತರ ಅಧ್ಯಕ್ಷ ಟಿ.ಎನ್.ಮನೋಹರನ್ ಅವರನ್ನು ಬ್ಯಾಂಕ್ನ ಆಡಳಿತ ಅಧಿಕಾರಿಯಾಗಿ ನೇಮಿಸಲಾಗಿದೆ.</p>.<p class="bodytext"><strong>ಅರವತ್ತು ಶಾಖೆಗಳು</strong></p>.<p class="bodytext">ಬೆಂಗಳೂರು: ಎಲ್ವಿಬಿ ವೆಬ್ಸೈಟ್ನಲ್ಲಿ ಇರುವ ಮಾಹಿತಿ ಅನ್ವಯ, ಬ್ಯಾಂಕಿನ ಅರವತ್ತು ಶಾಖೆಗಳು ಕರ್ನಾಟಕದಲ್ಲಿ ಇವೆ. 2017ರ ಜುಲೈನಲ್ಲಿ ₹ 190ರಷ್ಟಿದ್ದ ಈ ಬ್ಯಾಂಕಿನ ಷೇರು ಮೌಲ್ಯವು ಈಗ ₹ 15.50ಕ್ಕೆ ಕುಸಿತ ಕಂಡಿದೆ.</p>.<p><strong>ಡಿಬಿಎಸ್ ಬ್ಯಾಂಕ್ ಜೊತೆ ವಿಲೀನ?</strong></p>.<p>ನವದೆಹಲಿ (ರಾಯಿಟರ್ಸ್): ಲಕ್ಷ್ಮೀ ವಿಲಾಸ್ ಬ್ಯಾಂಕ್ಅನ್ನು ಸಿಂಗಪುರದ ಡಿಬಿಎಸ್ ಬ್ಯಾಂಕ್ನ ಭಾರತೀಯ ಘಟಕದ ಜೊತೆ ವಿಲೀನಗೊಳಿಸುವ ಪ್ರಸ್ತಾವನೆಯನ್ನು ಆರ್ಬಿಐ ಮಂಗಳವಾರ ಮುಂದಿಟ್ಟಿದೆ.</p>.<p>ಎಲ್ವಿಬಿ ಮಾರಾಟಕ್ಕೆ ಒಂದು ವರ್ಷದಿಂದಲೂ ಯತ್ನ ನಡೆದಿದೆ. ಖರೀದಿದಾರನ್ನು ಎಲ್ವಿಬಿ ಅರಸುತ್ತ ಇದೆ. ಇಂಡಿಯಾಬುಲ್ಸ್ ಹೌಸಿಂಗ್ ಫೈನಾನ್ಸ್ ಲಿಮಿಟೆಡ್ ಜೊತೆ ಎಲ್ವಿಬಿಯನ್ನು ವಿಲೀನ ಮಾಡುವ ಪ್ರಸ್ತಾವನೆಯನ್ನು ಆರ್ಬಿಐ ಕಳೆದ ವರ್ಷ ತಿರಸ್ಕರಿಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>