<p>ಬೆಳಗಾವಿ: ವಿಶ್ವೇಶ್ವರಯ್ಯ ಸಂಶೋಧನೆ ಮತ್ತು ನವೀನತಾ ಪ್ರತಿಷ್ಠಾನವು ರಾಜ್ಯ ಸರ್ಕಾರದ ಟೆಕ್ನಾಲಜಿ ಬಿಜಿನೆಸ್ ಇಂಕ್ಯೂಬೇಟರ್ ಸ್ಟಾರ್ಟ್ಅಪ್ಗಳ ಅಭಿವೃದ್ಧಿಗಾಗಿ ‘ನವೋದಯ’ ಯೋಜನೆ ಜಾರಿಗೊಳಿಸಿದೆ.</p>.<p>ಇಲ್ಲಿನ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ (ವಿಟಿಯು) ಕ್ಯಾಂಪಸ್ನಲ್ಲಿ ಬೆಳಗಾವಿ ಆಕ್ಸಿಜನ್ ಪ್ರೈವೇಟ್ ಲಿಮಿಟೆಡ್ನ ವ್ಯವಸ್ಥಾಪಕ ನಿರ್ದೇಶಕ ವೆಂಕಟೇಶ ಪಾಟೀಲ ಹಾಗೂ ಕುಲಪತಿ ಪ್ರೊ. ಎಸ್.ವಿದ್ಯಾಶಂಕರ ಅವರು ಯೋಜನೆಗೆ ಚಾಲನೆ ನೀಡಿದರು.</p>.<p>‘ಆರಂಭಿಕ ಮತ್ತು ಬೆಳವಣಿಗೆ ಹಂತದಲ್ಲಿರುವ ಸ್ಟಾರ್ಟಪ್ಗಳಿಗೆ ಬೆಂಬಲ ನೀಡಲು ಈ ಯೋಜನೆ ವಿನ್ಯಾಸಗೊಳಿಸಲಾಗಿದೆ’ ಎಂದು ವಿದ್ಯಾಶಂಕರ ಹೇಳಿದರು.</p>.<p>‘ಇದು ಉತ್ತಮ ಕಾರ್ಯಕ್ರಮ. ಇದರಿಂದ ಹೊಸದಾಗಿ ಉದ್ಯಮ ಆರಂಭಿಸುವವರಿಗೆ ಬಹಳ ಅನುಕೂಲವಾಗಲಿದೆ. ಕಂಪನಿಗಳು ಒಳ್ಳೆಯ ಸಹ ಸ್ಥಾಪಕರನ್ನು ಆಯ್ಕೆ ಮಾಡಿಕೊಳ್ಳಿ. ವೈಫಲ್ಯಕ್ಕೆ ಹೆದರಬೇಡಿ. ಒಳ್ಳೆಯ ತಂಡ ನಿರ್ಮಿಸಿಕೊಳ್ಳಿ’ ಎಂದು ವೆಂಕಟೇಶ ಪಾಟೀಲ ತಿಳಿಸಿದರು.</p>.<p>ವಿಟಿಯು ಕುಲಸಚಿವ ಪ್ರಸಾದ್ ರಾಂಪುರೆ, ಮೌಲ್ಯಮಾಪನ ಕುಲಸಚಿವ ಯು.ಜೆ.ಉಜ್ವಲ್, ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ನ ವರುಣ, ಸಂತೋಷ ಹಿಟ್ಟಣಗಿ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260527-21-1467897502</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಳಗಾವಿ: ವಿಶ್ವೇಶ್ವರಯ್ಯ ಸಂಶೋಧನೆ ಮತ್ತು ನವೀನತಾ ಪ್ರತಿಷ್ಠಾನವು ರಾಜ್ಯ ಸರ್ಕಾರದ ಟೆಕ್ನಾಲಜಿ ಬಿಜಿನೆಸ್ ಇಂಕ್ಯೂಬೇಟರ್ ಸ್ಟಾರ್ಟ್ಅಪ್ಗಳ ಅಭಿವೃದ್ಧಿಗಾಗಿ ‘ನವೋದಯ’ ಯೋಜನೆ ಜಾರಿಗೊಳಿಸಿದೆ.</p>.<p>ಇಲ್ಲಿನ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ (ವಿಟಿಯು) ಕ್ಯಾಂಪಸ್ನಲ್ಲಿ ಬೆಳಗಾವಿ ಆಕ್ಸಿಜನ್ ಪ್ರೈವೇಟ್ ಲಿಮಿಟೆಡ್ನ ವ್ಯವಸ್ಥಾಪಕ ನಿರ್ದೇಶಕ ವೆಂಕಟೇಶ ಪಾಟೀಲ ಹಾಗೂ ಕುಲಪತಿ ಪ್ರೊ. ಎಸ್.ವಿದ್ಯಾಶಂಕರ ಅವರು ಯೋಜನೆಗೆ ಚಾಲನೆ ನೀಡಿದರು.</p>.<p>‘ಆರಂಭಿಕ ಮತ್ತು ಬೆಳವಣಿಗೆ ಹಂತದಲ್ಲಿರುವ ಸ್ಟಾರ್ಟಪ್ಗಳಿಗೆ ಬೆಂಬಲ ನೀಡಲು ಈ ಯೋಜನೆ ವಿನ್ಯಾಸಗೊಳಿಸಲಾಗಿದೆ’ ಎಂದು ವಿದ್ಯಾಶಂಕರ ಹೇಳಿದರು.</p>.<p>‘ಇದು ಉತ್ತಮ ಕಾರ್ಯಕ್ರಮ. ಇದರಿಂದ ಹೊಸದಾಗಿ ಉದ್ಯಮ ಆರಂಭಿಸುವವರಿಗೆ ಬಹಳ ಅನುಕೂಲವಾಗಲಿದೆ. ಕಂಪನಿಗಳು ಒಳ್ಳೆಯ ಸಹ ಸ್ಥಾಪಕರನ್ನು ಆಯ್ಕೆ ಮಾಡಿಕೊಳ್ಳಿ. ವೈಫಲ್ಯಕ್ಕೆ ಹೆದರಬೇಡಿ. ಒಳ್ಳೆಯ ತಂಡ ನಿರ್ಮಿಸಿಕೊಳ್ಳಿ’ ಎಂದು ವೆಂಕಟೇಶ ಪಾಟೀಲ ತಿಳಿಸಿದರು.</p>.<p>ವಿಟಿಯು ಕುಲಸಚಿವ ಪ್ರಸಾದ್ ರಾಂಪುರೆ, ಮೌಲ್ಯಮಾಪನ ಕುಲಸಚಿವ ಯು.ಜೆ.ಉಜ್ವಲ್, ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ನ ವರುಣ, ಸಂತೋಷ ಹಿಟ್ಟಣಗಿ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260527-21-1467897502</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>