ಭಾನುವಾರ, 28 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೌಶಲ್ಯ ತರಬೇತಿ ಕೇಂದ್ರಕ್ಕೆ ನೆರವು

Last Updated 28 ಜೂನ್ 2018, 18:34 IST
ಅಕ್ಷರ ಗಾತ್ರ

ಬೆಂಗಳೂರು: ಕರ್ನಾಟಕ ವಾಣಿಜ್ಯೋದ್ಯಮ ಮಹಾಸಂಘದ (ಎಫ್‌ಕೆಸಿಸಿಐ) ಕೌಶಲ್ಯ ಶ್ರೇಷ್ಠತಾ ಕೇಂದ್ರಕ್ಕೆ ಗುರುವಾರ ಇಲ್ಲಿ ಶಿಲಾನ್ಯಾಸ ನೆರವೇರಿಸಲಾಯಿತು.

‘ಈ ಕೇಂದ್ರಕ್ಕೆ ಅಗತ್ಯ ಇರುವ ನೆರವನ್ನು ಒದಗಿಸುವುದಾಗಿ ಕೌಶಲ್ಯಾಭಿವೃದ್ಧಿ ಸಚಿವ ಆರ್. ವಿ. ದೇಶಪಾಂಡೆ ಅವರು ಭರವಸೆ ನೀಡಿದರು. ಮುಖ್ಯಮಂತ್ರಿ ಎಚ್‌. ಡಿ. ಕುಮಾರಸ್ವಾಮಿ ಅವರ ಅನುಪಸ್ಥಿತಿಯಲ್ಲಿ ಶಿಲಾನ್ಯಾಸ ನೆರವೇರಿಸಿ ಅವರು ಮಾತನಾಡುತ್ತಿದ್ದರು.

‘ಅತ್ಯಾಧುನಿಕ ತಂತ್ರಜ್ಞಾನದಿಂದ ಉದ್ಯೋಗ ಅವಕಾಶಗಳು ಕಡಿಮೆಯಾಗುವ ಭೀತಿ ವ್ಯಕ್ತವಾಗುತ್ತಿದೆ. ಹೊಸ ತಂತ್ರಜ್ಞಾನದ ಕೌಶಲ್ಯ ಕರಗತ ಮಾಡಿಕೊಂಡರೆ ಉದ್ಯೋಗ ಅವಕಾಶಗಳು ಹೆಚ್ಚಲಿವೆ’ ಎಂದರು.

‘ಸರಕುಗಳ ತಯಾರಿಕೆ ಕ್ಷೇತ್ರದಲ್ಲಿ ಕೃತಕ ಬುದ್ಧಿಮತ್ತೆ, ಪರಸ್ಪರ ಸಂಪರ್ಕ ಸಾಧಿಸುವ ಡಿಜಿಟಲ್‌ ಸಾಧನ (ಐಒಟಿ), ರೋಬೊ ತಂತ್ರಜ್ಞಾನ ಬಳಕೆಗೆ ಸಂಬಂಧಿಸಿದ ನಾಲ್ಕನೇ ಕೈಗಾರಿಕಾ ಕ್ರಾಂತಿಯು (4.0) ತ್ವರಿತವಾಗಿ ನಡೆಯುತ್ತಿದೆ. ಇದಕ್ಕೆ ಪೂರಕವಾದ ಕೌಶಲ್ಯ ಅಭಿವೃದ್ಧಿಪಡಿಸುವುದು ಈ ಕೇಂದ್ರದ ಉದ್ದೇಶವಾಗಿದೆ. ದಾಬಸ್‌ಪೇಟೆ ಬಳಿ 1.6 ಎಕರೆ ಪ್ರದೇಶದಲ್ಲಿ ಈ ಕೇಂದ್ರ ಅಸ್ತಿತ್ವಕ್ಕೆ ಬರಲಿದೆ.

ವಿದೇಶಿ ಸಂಸ್ಥೆಗಳ ಸಹಯೋಗದಲ್ಲಿ ಇಲ್ಲಿ ಕೌಶಲ್ಯ ವೃದ್ಧಿ ತರಬೇತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು’ ಎಂದು ಎಫ್‌ಕೆಸಿಸಿಐ ಅಧ್ಯಕ್ಷ ಕೆ. ರವಿ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT