<p>ಕಲಬುರಗಿ: ಕಲ್ಯಾಣ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯಲ್ಲಿ (ಕೆಕೆಸಿಸಿಐ) ವತಿಯಿಂದ ‘ಪಿಚ್ ಯುವರ್ ಐಡಿಯಾ’ ಸ್ಟಾರ್ಟ್ಅಪ್ ಕಾರ್ಯಕ್ರಮವನ್ನು ಸಂಸ್ಥೆಯ ಎಸ್. ಎಸ್. ಪಾಟೀಲ ಸಭಾಂಗಣದಲ್ಲಿ ಆಯೋಜಿಸಲಾಗಿತ್ತು.</p>.<p>ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಗಣ್ಯರು ಕೃಷಿ ಹಾಗೂ ಸಂಬಂಧಿತ ಕ್ಷೇತ್ರಗಳು ಮತ್ತು ಗ್ರಾಮೀಣ ನವೋದ್ಯಮಗಳ ಮೇಲೆ ತಮ್ಮ ಆಲೋಚನೆಗಳನ್ನು ಪ್ರಸ್ತುಪಡಿಸಿದರು. ಕೃಷಿಕಲ್ಪ ಸಂಸ್ಥೆಯು ಆನ್ಲೈನ್ ಮೂಲಕ ಈ ಕಾರ್ಯಕ್ರಮ ನಿರ್ವಹಿಸಿತು. ಕಾಲೇಜುಗಳಲ್ಲಿ ಉದ್ಯಮಶೀಲತೆಯನ್ನು ಬೆಳೆಸುತ್ತಿರುವ ಶಿಕ್ಷಕರು, ಜೀವಪರಿಸರ ಕಾಪಾಡುವವರು, ಹಾಗೂ ₹2 ಕೋಟಿಗೂ ಹೆಚ್ಚು ವ್ಯವಹಾರ ಸಾಧನೆ ಮಾಡಿದ 5–6 ಪ್ರಮುಖ ರೈತ ಉತ್ಪಾದಕ ಸಂಸ್ಥೆಯವರೂ ಭಾಗವಹಿಸಿದ್ದರು. ಈ ಸಮಾರಂಭವು ನವೀನತೆ, ಸಹಕಾರ ಮತ್ತು ಉದ್ಯಮ ಚಟುವಟಿಕೆಗಳಿಗೆ ಸಶಕ್ತ ವೇದಿಕೆಯಾಗಿ ಪರಿಣಮಿಸಿತು.</p>.<p>ಕಾರ್ಯಕ್ರಮದ ಉದ್ಘಾಟನೆಯಲ್ಲಿ ಮಾತನಾಡಿದ ಕೃಷಿಕಲ್ಪ ಸಂಸ್ಥೆಯ ಸಿಇಒ ಸಿ.ಎಂ. ಪಾಟೀಲ, ಅಭಿವೃದ್ಧಿಗೆ ಉದ್ಯಮಶೀಲತೆಯ ಮೂಲಕ ಉತ್ತೇಜನ ನೀಡುವ ಸಂಸ್ಥೆಯ ಧ್ಯೇಯವನ್ನು ವಿವರಿಸಿದರು. ಯುವಕರಿಗೆ ಸವಾಲುಗಳನ್ನು ಸ್ವೀಕರಿಸಿ ಸ್ವಾವಲಂಬಿ ಭವಿಷ್ಯ ನಿರ್ಮಾಣಕ್ಕೆ ಕೈಜೋಡಿಸುವಂತೆ ಸಲಹೆ ನೀಡಿದರು.</p>.<p>ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್, ಕೆಕೆಸಿಸಿಐ ಅಧ್ಯಕ್ಷ ಶರಣಬಸಪ್ಪ ಎಂ. ಪಪ್ಪ, ಗೌರವ ಕಾರ್ಯದರ್ಶಿ ಶಿವರಾಜ್ ವಿ. ಇಂಗಿನಶೆಟ್ಟಿ, ಜಂಟಿ ಕೃಷಿ ನಿರ್ದೇಶಕ ಸಮದ್ ಪಟೇಲ್ ಮತ್ತಿತರರು ಮಾತನಾಡಿದರು. ಕಾರ್ಯಕ್ರಮದಲ್ಲಿ 120ಕ್ಕೂ ಹೆಚ್ಚು ಆರಂಭಿಕ ಹಂತದ ಸ್ಟಾರ್ಟ್ಅಪ್ ಸ್ಥಾಪಕರು ಭಾಗವಹಿಸಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260417-34-1689453828</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕಲಬುರಗಿ: ಕಲ್ಯಾಣ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯಲ್ಲಿ (ಕೆಕೆಸಿಸಿಐ) ವತಿಯಿಂದ ‘ಪಿಚ್ ಯುವರ್ ಐಡಿಯಾ’ ಸ್ಟಾರ್ಟ್ಅಪ್ ಕಾರ್ಯಕ್ರಮವನ್ನು ಸಂಸ್ಥೆಯ ಎಸ್. ಎಸ್. ಪಾಟೀಲ ಸಭಾಂಗಣದಲ್ಲಿ ಆಯೋಜಿಸಲಾಗಿತ್ತು.</p>.<p>ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಗಣ್ಯರು ಕೃಷಿ ಹಾಗೂ ಸಂಬಂಧಿತ ಕ್ಷೇತ್ರಗಳು ಮತ್ತು ಗ್ರಾಮೀಣ ನವೋದ್ಯಮಗಳ ಮೇಲೆ ತಮ್ಮ ಆಲೋಚನೆಗಳನ್ನು ಪ್ರಸ್ತುಪಡಿಸಿದರು. ಕೃಷಿಕಲ್ಪ ಸಂಸ್ಥೆಯು ಆನ್ಲೈನ್ ಮೂಲಕ ಈ ಕಾರ್ಯಕ್ರಮ ನಿರ್ವಹಿಸಿತು. ಕಾಲೇಜುಗಳಲ್ಲಿ ಉದ್ಯಮಶೀಲತೆಯನ್ನು ಬೆಳೆಸುತ್ತಿರುವ ಶಿಕ್ಷಕರು, ಜೀವಪರಿಸರ ಕಾಪಾಡುವವರು, ಹಾಗೂ ₹2 ಕೋಟಿಗೂ ಹೆಚ್ಚು ವ್ಯವಹಾರ ಸಾಧನೆ ಮಾಡಿದ 5–6 ಪ್ರಮುಖ ರೈತ ಉತ್ಪಾದಕ ಸಂಸ್ಥೆಯವರೂ ಭಾಗವಹಿಸಿದ್ದರು. ಈ ಸಮಾರಂಭವು ನವೀನತೆ, ಸಹಕಾರ ಮತ್ತು ಉದ್ಯಮ ಚಟುವಟಿಕೆಗಳಿಗೆ ಸಶಕ್ತ ವೇದಿಕೆಯಾಗಿ ಪರಿಣಮಿಸಿತು.</p>.<p>ಕಾರ್ಯಕ್ರಮದ ಉದ್ಘಾಟನೆಯಲ್ಲಿ ಮಾತನಾಡಿದ ಕೃಷಿಕಲ್ಪ ಸಂಸ್ಥೆಯ ಸಿಇಒ ಸಿ.ಎಂ. ಪಾಟೀಲ, ಅಭಿವೃದ್ಧಿಗೆ ಉದ್ಯಮಶೀಲತೆಯ ಮೂಲಕ ಉತ್ತೇಜನ ನೀಡುವ ಸಂಸ್ಥೆಯ ಧ್ಯೇಯವನ್ನು ವಿವರಿಸಿದರು. ಯುವಕರಿಗೆ ಸವಾಲುಗಳನ್ನು ಸ್ವೀಕರಿಸಿ ಸ್ವಾವಲಂಬಿ ಭವಿಷ್ಯ ನಿರ್ಮಾಣಕ್ಕೆ ಕೈಜೋಡಿಸುವಂತೆ ಸಲಹೆ ನೀಡಿದರು.</p>.<p>ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್, ಕೆಕೆಸಿಸಿಐ ಅಧ್ಯಕ್ಷ ಶರಣಬಸಪ್ಪ ಎಂ. ಪಪ್ಪ, ಗೌರವ ಕಾರ್ಯದರ್ಶಿ ಶಿವರಾಜ್ ವಿ. ಇಂಗಿನಶೆಟ್ಟಿ, ಜಂಟಿ ಕೃಷಿ ನಿರ್ದೇಶಕ ಸಮದ್ ಪಟೇಲ್ ಮತ್ತಿತರರು ಮಾತನಾಡಿದರು. ಕಾರ್ಯಕ್ರಮದಲ್ಲಿ 120ಕ್ಕೂ ಹೆಚ್ಚು ಆರಂಭಿಕ ಹಂತದ ಸ್ಟಾರ್ಟ್ಅಪ್ ಸ್ಥಾಪಕರು ಭಾಗವಹಿಸಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260417-34-1689453828</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>