<p><strong>ಮೈಸೂರು: </strong>ಸ್ಮಶಾನದ ಬಳಿಗೆ ಎಳೆದೊಯ್ದು 60 ವರ್ಷದ ವೃದ್ಧೆಯ ಮೇಲೆ ಅತ್ಯಾಚಾರ ಎಸಗಿದ್ದ ರವಿ ಅಲಿಯಾಸ್ ರವಿಚಂದ್ರ (42) ಎಂಬಾತನಿಗೆ ಅತ್ಯಾಚಾರ ಪ್ರಕರಣಗಳ ವಿಶೇಷ ನ್ಯಾಯಾಲಯ 7 ವರ್ಷ ಕಠಿಣ ಜೈಲು ಹಾಗೂ ₹ 10,500 ದಂಡ ವಿಧಿಸಿದೆ.</p>.<p>ಎಚ್.ಡಿ.ಕೋಟೆ ತಾಲ್ಲೂಕಿನ ಅಂತರಸಂತೆ ಬಳಿ 2015ರ ಜ.14ರ ರಾತ್ರಿ ಈ ಕೃತ್ಯ ನಡೆದಿತ್ತು. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶ ಪಿ.ಚಂದ್ರಶೇಖರ್, ಆರೋಪಿಯನ್ನು ತಪ್ಪಿತಸ್ಥನೆಂದು ಆದೇಶಿಸಿದ್ದರು. ಶಿಕ್ಷೆಯ ಪ್ರಮಾಣವನ್ನು ಶುಕ್ರವಾರ ಪ್ರಕಟಿಸಿದರು.</p>.<p>ದುಗ್ಗಲಮ್ಮ ದೇಗುಲಕ್ಕೆ ವೃದ್ಧೆ ಏಕಾಂಗಿಯಾಗಿ ತೆರಳಿದ್ದರು. ಊರಿಗೆ ಮರಳುವ ಹೊತ್ತಿಗೆ ಸಂಜೆಯಾಗಿತ್ತು. ಗ್ರಾಮಕ್ಕೆ ಸಾಗುವ ರಸ್ತೆಯಲ್ಲಿ ವಾಹನಕ್ಕಾಗಿ ಕಾಯುತ್ತಿದ್ದ ಸಂದರ್ಭದಲ್ಲಿ ನೂರಲಕುಪ್ಪೆಯ ರವಿಚಂದ್ರ ಸಿಕ್ಕಿದ್ದ. ಪರಿಚಯಸ್ಥನಾಗಿದ್ದ ಆರೋಪಿ ಮನೆಗೆ ತಲುಪಿಸುವುದಾಗಿ ಭರವಸೆ ನೀಡಿ ಕರೆದೊಯ್ದಿದ್ದ.</p>.<p>‘ಮಾರ್ಗ ಮಧ್ಯದ ಅಂತರಸಂತೆಯ ಸ್ಮಶಾನದ ಬಳಿ ವೃದ್ಧೆಯ ಮೇಲೆ ಅತ್ಯಾಚಾರ ಎಸಗಿದ್ದ. ತೀವ್ರವಾಗಿ ಬಳಲಿದ್ದ ಸಂತ್ರಸ್ತೆಯನ್ನು ಸಾರ್ವಜನಿಕರು ಮನೆಗೆ ಸೇರಿಸಿದ್ದರು. ಇದರಿಂದ ಖಿನ್ನತೆಗೆ ಒಳಗಾಗಿದ್ದ ಸಂತ್ರಸ್ತೆ ಈ ವಿಷಯವನ್ನು ಮಕ್ಕಳಿಗೆ ತಿಳಿಸಿರಲಿಲ್ಲ. ನೋವಿನಿಂದ ನರಳುತ್ತಿದ್ದ ಅವರನ್ನು ಆಸ್ಪತ್ರೆಗೆ ಕರೆದೊಯ್ದ ಬಳಿಕ ಕೃತ್ಯ ಬೆಳಕಿಗೆ ಬಂದಿತ್ತು. ತನಿಖೆ ನಡೆಸಿದ ಬೀಚನಹಳ್ಳಿ ಠಾಣೆಯ ಪೊಲೀಸರು ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು’ ಎಂದು ಸರ್ಕಾರದ ಪರ ವಾದ ಮಂಡಿಸಿದ ಪಬ್ಲಿಕ್ ಪ್ರಾಸಿಕ್ಯೂಟರ್ ಮಹಾಂತಪ್ಪ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು: </strong>ಸ್ಮಶಾನದ ಬಳಿಗೆ ಎಳೆದೊಯ್ದು 60 ವರ್ಷದ ವೃದ್ಧೆಯ ಮೇಲೆ ಅತ್ಯಾಚಾರ ಎಸಗಿದ್ದ ರವಿ ಅಲಿಯಾಸ್ ರವಿಚಂದ್ರ (42) ಎಂಬಾತನಿಗೆ ಅತ್ಯಾಚಾರ ಪ್ರಕರಣಗಳ ವಿಶೇಷ ನ್ಯಾಯಾಲಯ 7 ವರ್ಷ ಕಠಿಣ ಜೈಲು ಹಾಗೂ ₹ 10,500 ದಂಡ ವಿಧಿಸಿದೆ.</p>.<p>ಎಚ್.ಡಿ.ಕೋಟೆ ತಾಲ್ಲೂಕಿನ ಅಂತರಸಂತೆ ಬಳಿ 2015ರ ಜ.14ರ ರಾತ್ರಿ ಈ ಕೃತ್ಯ ನಡೆದಿತ್ತು. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶ ಪಿ.ಚಂದ್ರಶೇಖರ್, ಆರೋಪಿಯನ್ನು ತಪ್ಪಿತಸ್ಥನೆಂದು ಆದೇಶಿಸಿದ್ದರು. ಶಿಕ್ಷೆಯ ಪ್ರಮಾಣವನ್ನು ಶುಕ್ರವಾರ ಪ್ರಕಟಿಸಿದರು.</p>.<p>ದುಗ್ಗಲಮ್ಮ ದೇಗುಲಕ್ಕೆ ವೃದ್ಧೆ ಏಕಾಂಗಿಯಾಗಿ ತೆರಳಿದ್ದರು. ಊರಿಗೆ ಮರಳುವ ಹೊತ್ತಿಗೆ ಸಂಜೆಯಾಗಿತ್ತು. ಗ್ರಾಮಕ್ಕೆ ಸಾಗುವ ರಸ್ತೆಯಲ್ಲಿ ವಾಹನಕ್ಕಾಗಿ ಕಾಯುತ್ತಿದ್ದ ಸಂದರ್ಭದಲ್ಲಿ ನೂರಲಕುಪ್ಪೆಯ ರವಿಚಂದ್ರ ಸಿಕ್ಕಿದ್ದ. ಪರಿಚಯಸ್ಥನಾಗಿದ್ದ ಆರೋಪಿ ಮನೆಗೆ ತಲುಪಿಸುವುದಾಗಿ ಭರವಸೆ ನೀಡಿ ಕರೆದೊಯ್ದಿದ್ದ.</p>.<p>‘ಮಾರ್ಗ ಮಧ್ಯದ ಅಂತರಸಂತೆಯ ಸ್ಮಶಾನದ ಬಳಿ ವೃದ್ಧೆಯ ಮೇಲೆ ಅತ್ಯಾಚಾರ ಎಸಗಿದ್ದ. ತೀವ್ರವಾಗಿ ಬಳಲಿದ್ದ ಸಂತ್ರಸ್ತೆಯನ್ನು ಸಾರ್ವಜನಿಕರು ಮನೆಗೆ ಸೇರಿಸಿದ್ದರು. ಇದರಿಂದ ಖಿನ್ನತೆಗೆ ಒಳಗಾಗಿದ್ದ ಸಂತ್ರಸ್ತೆ ಈ ವಿಷಯವನ್ನು ಮಕ್ಕಳಿಗೆ ತಿಳಿಸಿರಲಿಲ್ಲ. ನೋವಿನಿಂದ ನರಳುತ್ತಿದ್ದ ಅವರನ್ನು ಆಸ್ಪತ್ರೆಗೆ ಕರೆದೊಯ್ದ ಬಳಿಕ ಕೃತ್ಯ ಬೆಳಕಿಗೆ ಬಂದಿತ್ತು. ತನಿಖೆ ನಡೆಸಿದ ಬೀಚನಹಳ್ಳಿ ಠಾಣೆಯ ಪೊಲೀಸರು ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು’ ಎಂದು ಸರ್ಕಾರದ ಪರ ವಾದ ಮಂಡಿಸಿದ ಪಬ್ಲಿಕ್ ಪ್ರಾಸಿಕ್ಯೂಟರ್ ಮಹಾಂತಪ್ಪ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>