<p><strong>ಬೆಂಗಳೂರು: </strong>ವಿದೇಶಿ ಸಾಂಸ್ಥಿಕ ಹೂಡಿಕೆದಾರರು (ಎಫ್ಐಐ) ಭಾರತದ ಷೇರುಪೇಟೆಗಳಲ್ಲಿ ಲಾಭ ಗಳಿಕೆಗೆ ಹೆಚ್ಚು ಗಮನ ಹರಿಸಿದ್ದಾರೆ. ಹೀಗಾಗಿ ಬಂಡವಾಳ ಹೊರಹರಿವು ಹೆಚ್ಚಾಗುತ್ತಲೇ ಇದೆ.</p>.<p>ನ್ಯಾಷನಲ್ ಸೆಕ್ಯುರಿಟೀಸ್ ಡೆಪಾಸಿಟರಿ ಲಿಮಿಟೆಡ್ನಲ್ಲಿ ಇರುವ ಮಾಹಿತಿಯ ಪ್ರಕಾರ, ಜನವರಿ 2 ರಿಂದ 27ರವರೆಗಿನ ಅವಧಿಯಲ್ಲಿ ವಿದೇಶಿ ಸಾಂಸ್ಥಿಕ ಹೂಡಿಕೆದಾರರು ₹29,232 ಕೋಟಿ ಮೌಲ್ಯದ ಷೇರುಗಳನ್ನು ಮಾರಾಟ ಮಾಡಿದ್ದಾರೆ.</p>.<p>‘ಮಾರುಕಟ್ಟೆ ಮೌಲ್ಯ ಕಡಿಮೆ ಇರುವ ಚೀನಾ, ಹಾಂಗ್ಕಾಂಗ್, ದಕ್ಷಿಣ ಕೊರಿಯಾ ಮತ್ತು ಥಾಯ್ಲೆಂಡ್ ಷೇರುಪೇಟೆಗಳಲ್ಲಿ ಬಂಡವಾಳ ಹೂಡಿಕೆ ಮಾಡುವುದನ್ನು ವಿದೇಶಿ ಹೂಡಿಕೆದಾರರು ಮುಂದುವರಿಸಿದ್ದಾರೆ. ಅದಾನಿ ಸಮೂಹದ ವಿರುದ್ಧದ ವರದಿಯು ಷೇರುಪೇಟೆಯಲ್ಲಿ ನಕಾರಾತ್ಮಕ ವಹಿವಾಟಿಗೆ ಕಾರಣವಾಗುತ್ತಿದೆ. ಇದರಿಂದಾಗಿ ಜನವರಿ 27ರಂದು ಒಂದೇ ದಿನ ₹5,977 ಕೋಟಿಗೂ ಅಧಿಕ ಮೊತ್ತದ ಷೇರುಗಳನ್ನು ಅವರು ಮಾರಾಟ ಮಾಡಿದ್ದಾರೆ ಎಂದು ಜಿಯೋಜಿತ್ ಫೈನಾನ್ಶಿಯಲ್ ಸರ್ವಿಸಸ್ನ ಮುಖ್ಯ ಹೂಡಿಕೆ ತಜ್ಞ ವಿ.ಕೆ. ವಿಜಯಕುಮಾರ್ ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>ದೇಶಿ ಸಾಂಸ್ಥಿಕ ಹೂಡಿಕೆದಾರರು (ಡಿಐಐ) ನಿರಂತರವಾಗಿ ಷೇರುಗಳನ್ನು ಖರೀದಿಸುತ್ತಿದ್ದು, ಷೇರುಪೇಟೆಯನ್ನು ಹೆಚ್ಚಿನ ಕುಸಿತ ಕಾಣದಂತೆ ತಡೆಯುತ್ತಿದ್ದಾರೆ.</p>.<p>ಜನವರಿ 2 ರಿಂದ 27ರವರೆಗಿನ ವಹಿವಾಟು ಅವಧಿಯಲ್ಲಿ ₹23,390 ಕೋಟಿ ಮೌಲ್ಯದ ಷೇರುಗಳನ್ನು ಖರೀದಿ ಮಾಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ವಿದೇಶಿ ಸಾಂಸ್ಥಿಕ ಹೂಡಿಕೆದಾರರು (ಎಫ್ಐಐ) ಭಾರತದ ಷೇರುಪೇಟೆಗಳಲ್ಲಿ ಲಾಭ ಗಳಿಕೆಗೆ ಹೆಚ್ಚು ಗಮನ ಹರಿಸಿದ್ದಾರೆ. ಹೀಗಾಗಿ ಬಂಡವಾಳ ಹೊರಹರಿವು ಹೆಚ್ಚಾಗುತ್ತಲೇ ಇದೆ.</p>.<p>ನ್ಯಾಷನಲ್ ಸೆಕ್ಯುರಿಟೀಸ್ ಡೆಪಾಸಿಟರಿ ಲಿಮಿಟೆಡ್ನಲ್ಲಿ ಇರುವ ಮಾಹಿತಿಯ ಪ್ರಕಾರ, ಜನವರಿ 2 ರಿಂದ 27ರವರೆಗಿನ ಅವಧಿಯಲ್ಲಿ ವಿದೇಶಿ ಸಾಂಸ್ಥಿಕ ಹೂಡಿಕೆದಾರರು ₹29,232 ಕೋಟಿ ಮೌಲ್ಯದ ಷೇರುಗಳನ್ನು ಮಾರಾಟ ಮಾಡಿದ್ದಾರೆ.</p>.<p>‘ಮಾರುಕಟ್ಟೆ ಮೌಲ್ಯ ಕಡಿಮೆ ಇರುವ ಚೀನಾ, ಹಾಂಗ್ಕಾಂಗ್, ದಕ್ಷಿಣ ಕೊರಿಯಾ ಮತ್ತು ಥಾಯ್ಲೆಂಡ್ ಷೇರುಪೇಟೆಗಳಲ್ಲಿ ಬಂಡವಾಳ ಹೂಡಿಕೆ ಮಾಡುವುದನ್ನು ವಿದೇಶಿ ಹೂಡಿಕೆದಾರರು ಮುಂದುವರಿಸಿದ್ದಾರೆ. ಅದಾನಿ ಸಮೂಹದ ವಿರುದ್ಧದ ವರದಿಯು ಷೇರುಪೇಟೆಯಲ್ಲಿ ನಕಾರಾತ್ಮಕ ವಹಿವಾಟಿಗೆ ಕಾರಣವಾಗುತ್ತಿದೆ. ಇದರಿಂದಾಗಿ ಜನವರಿ 27ರಂದು ಒಂದೇ ದಿನ ₹5,977 ಕೋಟಿಗೂ ಅಧಿಕ ಮೊತ್ತದ ಷೇರುಗಳನ್ನು ಅವರು ಮಾರಾಟ ಮಾಡಿದ್ದಾರೆ ಎಂದು ಜಿಯೋಜಿತ್ ಫೈನಾನ್ಶಿಯಲ್ ಸರ್ವಿಸಸ್ನ ಮುಖ್ಯ ಹೂಡಿಕೆ ತಜ್ಞ ವಿ.ಕೆ. ವಿಜಯಕುಮಾರ್ ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>ದೇಶಿ ಸಾಂಸ್ಥಿಕ ಹೂಡಿಕೆದಾರರು (ಡಿಐಐ) ನಿರಂತರವಾಗಿ ಷೇರುಗಳನ್ನು ಖರೀದಿಸುತ್ತಿದ್ದು, ಷೇರುಪೇಟೆಯನ್ನು ಹೆಚ್ಚಿನ ಕುಸಿತ ಕಾಣದಂತೆ ತಡೆಯುತ್ತಿದ್ದಾರೆ.</p>.<p>ಜನವರಿ 2 ರಿಂದ 27ರವರೆಗಿನ ವಹಿವಾಟು ಅವಧಿಯಲ್ಲಿ ₹23,390 ಕೋಟಿ ಮೌಲ್ಯದ ಷೇರುಗಳನ್ನು ಖರೀದಿ ಮಾಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>