<p><strong>ನವದೆಹಲಿ:</strong> ಕೇಂದ್ರ ಸರ್ಕಾರದ ಬಾಂಡ್ಗಳನ್ನು ವಿದೇಶದ ಷೇರುಪೇಟೆಗಳಲ್ಲಿ ವಹಿವಾಟು ನಡೆಸುವ ನಿಟ್ಟಿನಲ್ಲಿ ಚಿಂತನೆ ನಡೆಸಲಾಗುತ್ತಿದೆ.</p>.<p>‘ಈ ಸಂಬಂಧ ಈಗಾಗಲೇ ಕೆಲ ಸಂಸ್ಥೆಗಳ ಜತೆ ಚರ್ಚೆ ನಡೆಸಲಾಗಿದೆ. ಸಾಧ್ಯವಾದಷ್ಟು ಬೇಗ ಈ ಆಲೋಚನೆ ಕಾರ್ಯರೂಪಕ್ಕೆ ಬರಲಿದೆ. ತಕ್ಷಣಕ್ಕೆ ಕಾಲಮಿತಿ ನಿಗದಿಪಡಿಸಲು ಸಾಧ್ಯವಿಲ್ಲ’ ಎಂದು ಭಾರತೀಯ ರಿಸರ್ವ್ ಬ್ಯಾಂಕ್ನ ಗವರ್ನರ್ ಶಕ್ತಿಕಾಂತ್ ದಾಸ್ ಹೇಳಿದ್ದಾರೆ.</p>.<p>ಸರ್ಕಾರಿ ಬಾಂಡ್ಗಳು ವಿದೇಶಿ ಷೇರುಪೇಟೆಗಳಲ್ಲಿ ವಹಿವಾಟು ನಡೆಸುವುದರಿಂದ ವಿದೇಶಿ ಬಂಡವಾಳದ ಒಳ ಹರಿವು ಹೆಚ್ಚಲಿದೆ. ದೀರ್ಘಾವಧಿ ಉದ್ದೇಶದ ವಿದೇಶಿ ಬಂಡವಾಳ ಹೂಡಿಕೆ ಆಕರ್ಷಿಸಲೂ ಇದು ನೆರವಾಗಲಿದೆ.</p>.<p>ವಿದೇಶಿ ಹೂಡಿಕೆದಾರರು ಬಹಳ ದಿನಗಳಿಂದ ಈ ಸಲಹೆ ಮುಂದಿಟ್ಟಿದ್ದರು. 2020–21ನೇ ಹಣಕಾಸು ವರ್ಷದ ಬಜೆಟ್ನಲ್ಲಿ ಈ ಬಗ್ಗೆ ಪ್ರಸ್ತಾಪಿಸಲಾಗಿದೆ. ‘ಕೆಲ ನಿರ್ದಿಷ್ಟ ಸಾಲ ಪತ್ರಗಳನ್ನು ವಿದೇಶಿ ಹೂಡಿಕೆದಾರರಿಗೂ ಮುಕ್ತಗೊಳಿಸಲಾಗುವುದು’ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ತಮ್ಮ ಬಜೆಟ್ ಭಾಷಣದಲ್ಲಿ ತಿಳಿಸಿದ್ದರು.</p>.<p>‘ಮುಂಚೂಣಿ 50 ಬ್ಯಾಂಕೇತರ ಹಣಕಾಸು ಸಂಸ್ಥೆಗಳ (ಎನ್ಬಿಎಫ್ಸಿ) ಕಾರ್ಯವೈಖರಿಯ ಮೇಲೆ ಕೇಂದ್ರೀಯ ಬ್ಯಾಂಕ್ ತೀವ್ರ ಸ್ವರೂಪದ ನಿಗಾ ಇರಿಸಿದೆ. ವಾಣಿಜ್ಯ ಬ್ಯಾಂಕ್ಗಳೂ ಸೇರಿದಂತೆ ಒಟ್ಟಾರೆ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಸ್ಥಿರತೆ ಕಾಯ್ದುಕೊಳ್ಳುವುದಕ್ಕೆ ಆರ್ಬಿಐ ಬದ್ಧವಾಗಿದೆ.</p>.<p>‘ಎನ್ಬಿಎಫ್ಸಿ’ಗಳ ಆಡಳಿತ ಮಂಡಳಿ, ಪ್ರವರ್ತಕರ ಜತೆ ಆರ್ಬಿಐ ನಿರಂತರವಾಗಿ ಸಂಪರ್ಕದಲ್ಲಿ ಇದೆ. ಮಾರುಕಟ್ಟೆ ಆಧಾರಿತ ಪರಿಹಾರ ಕ್ರಮಗಳ ಮೂಲಕ ತಮ್ಮ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಲು, ಹೆಚ್ಚುವರಿ ಹಣ ಪಡೆಯಲು ಅವಕಾಶ ಕಲ್ಪಿಸಲಾಗಿದೆ. ಇತ್ತೀಚಿನ ಕೆಲ ತಿಂಗಳುಗಳಿಂದ ಈ ವಲಯದಲ್ಲಿ ಸಾಲ ನೀಡಿಕೆ ಪ್ರಮಾಣದಲ್ಲಿ ಏರಿಕೆ ಕಂಡು ಬರುತ್ತಿದೆ’ ಎಂದೂ ದಾಸ್ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಕೇಂದ್ರ ಸರ್ಕಾರದ ಬಾಂಡ್ಗಳನ್ನು ವಿದೇಶದ ಷೇರುಪೇಟೆಗಳಲ್ಲಿ ವಹಿವಾಟು ನಡೆಸುವ ನಿಟ್ಟಿನಲ್ಲಿ ಚಿಂತನೆ ನಡೆಸಲಾಗುತ್ತಿದೆ.</p>.<p>‘ಈ ಸಂಬಂಧ ಈಗಾಗಲೇ ಕೆಲ ಸಂಸ್ಥೆಗಳ ಜತೆ ಚರ್ಚೆ ನಡೆಸಲಾಗಿದೆ. ಸಾಧ್ಯವಾದಷ್ಟು ಬೇಗ ಈ ಆಲೋಚನೆ ಕಾರ್ಯರೂಪಕ್ಕೆ ಬರಲಿದೆ. ತಕ್ಷಣಕ್ಕೆ ಕಾಲಮಿತಿ ನಿಗದಿಪಡಿಸಲು ಸಾಧ್ಯವಿಲ್ಲ’ ಎಂದು ಭಾರತೀಯ ರಿಸರ್ವ್ ಬ್ಯಾಂಕ್ನ ಗವರ್ನರ್ ಶಕ್ತಿಕಾಂತ್ ದಾಸ್ ಹೇಳಿದ್ದಾರೆ.</p>.<p>ಸರ್ಕಾರಿ ಬಾಂಡ್ಗಳು ವಿದೇಶಿ ಷೇರುಪೇಟೆಗಳಲ್ಲಿ ವಹಿವಾಟು ನಡೆಸುವುದರಿಂದ ವಿದೇಶಿ ಬಂಡವಾಳದ ಒಳ ಹರಿವು ಹೆಚ್ಚಲಿದೆ. ದೀರ್ಘಾವಧಿ ಉದ್ದೇಶದ ವಿದೇಶಿ ಬಂಡವಾಳ ಹೂಡಿಕೆ ಆಕರ್ಷಿಸಲೂ ಇದು ನೆರವಾಗಲಿದೆ.</p>.<p>ವಿದೇಶಿ ಹೂಡಿಕೆದಾರರು ಬಹಳ ದಿನಗಳಿಂದ ಈ ಸಲಹೆ ಮುಂದಿಟ್ಟಿದ್ದರು. 2020–21ನೇ ಹಣಕಾಸು ವರ್ಷದ ಬಜೆಟ್ನಲ್ಲಿ ಈ ಬಗ್ಗೆ ಪ್ರಸ್ತಾಪಿಸಲಾಗಿದೆ. ‘ಕೆಲ ನಿರ್ದಿಷ್ಟ ಸಾಲ ಪತ್ರಗಳನ್ನು ವಿದೇಶಿ ಹೂಡಿಕೆದಾರರಿಗೂ ಮುಕ್ತಗೊಳಿಸಲಾಗುವುದು’ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ತಮ್ಮ ಬಜೆಟ್ ಭಾಷಣದಲ್ಲಿ ತಿಳಿಸಿದ್ದರು.</p>.<p>‘ಮುಂಚೂಣಿ 50 ಬ್ಯಾಂಕೇತರ ಹಣಕಾಸು ಸಂಸ್ಥೆಗಳ (ಎನ್ಬಿಎಫ್ಸಿ) ಕಾರ್ಯವೈಖರಿಯ ಮೇಲೆ ಕೇಂದ್ರೀಯ ಬ್ಯಾಂಕ್ ತೀವ್ರ ಸ್ವರೂಪದ ನಿಗಾ ಇರಿಸಿದೆ. ವಾಣಿಜ್ಯ ಬ್ಯಾಂಕ್ಗಳೂ ಸೇರಿದಂತೆ ಒಟ್ಟಾರೆ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಸ್ಥಿರತೆ ಕಾಯ್ದುಕೊಳ್ಳುವುದಕ್ಕೆ ಆರ್ಬಿಐ ಬದ್ಧವಾಗಿದೆ.</p>.<p>‘ಎನ್ಬಿಎಫ್ಸಿ’ಗಳ ಆಡಳಿತ ಮಂಡಳಿ, ಪ್ರವರ್ತಕರ ಜತೆ ಆರ್ಬಿಐ ನಿರಂತರವಾಗಿ ಸಂಪರ್ಕದಲ್ಲಿ ಇದೆ. ಮಾರುಕಟ್ಟೆ ಆಧಾರಿತ ಪರಿಹಾರ ಕ್ರಮಗಳ ಮೂಲಕ ತಮ್ಮ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಲು, ಹೆಚ್ಚುವರಿ ಹಣ ಪಡೆಯಲು ಅವಕಾಶ ಕಲ್ಪಿಸಲಾಗಿದೆ. ಇತ್ತೀಚಿನ ಕೆಲ ತಿಂಗಳುಗಳಿಂದ ಈ ವಲಯದಲ್ಲಿ ಸಾಲ ನೀಡಿಕೆ ಪ್ರಮಾಣದಲ್ಲಿ ಏರಿಕೆ ಕಂಡು ಬರುತ್ತಿದೆ’ ಎಂದೂ ದಾಸ್ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>