ರಾಷ್ಟ್ರೀಯ ನಾಟಕ ಶಾಲೆಯ ಬೆಂಗಳೂರು ಕೇಂದ್ರದ ನಿರ್ದೇಶಕ ಸಿ. ಬಸವಲಿಂಗಯ್ಯ ಮಾತನಾಡಿ, ‘ಸ್ನೇಹ ಧ್ವಜ ಎಂಬ ಘೋಷವಾಕ್ಯದೊಂದಿಗೆ ಈ ಉತ್ಸವ ನಡೆಯುತ್ತಿದೆ. ಮಾರ್ಚ್ 6ರವರೆಗೆ ರವೀಂದ್ರ ಕಲಾಕ್ಷೇತ್ರ, ಮಲ್ಲತ್ತಹಳ್ಳಿಯ ಕಲಾಗ್ರಾಮದ ಸಮುಚ್ಚಯ ಭವನದಲ್ಲಿ 25 ನಾಟಕಗಳು ಪ್ರದರ್ಶನಗೊಳ್ಳಲಿವೆ. 60 ರಂಗ ತಜ್ಞರಿಂದ ಕಾರ್ಯಾಗಾರ ಆಯೋಜಿಸಲಾಗಿದೆ’ ಎಂದರು.