ಕಳೆದ ಮಂಗಳವಾರ ಕೇಂದ್ರ ಸರ್ಕಾರವು ಆರ್ಬಿಐ ಶಿಫಾರಸಿನ ಮೇರೆಗೆ ಲಕ್ಷ್ಮೀ ವಿಲಾಸ್ ಬ್ಯಾಂಕ್ ಮೇಲೆ ಒಂದು ತಿಂಗಳು ತಾತ್ಕಾಲಿಕ ನಿರ್ಬಂಧ ಹೇರಿದೆ. ಬ್ಯಾಂಕ್ ನಿರ್ದೇಶಕರ ಮಂಡಳಿಯನ್ನು ರದ್ದು ಪಡಿಸಿದ್ದು, ಠೇವಣಿದಾರರಿಗೆ ಹಣ ಹಿಂಪಡೆಯುವ ಮಿತಿ ಗರಿಷ್ಠ ₹25,000 ನಿಗದಿ ಪಡಿಸಿದೆ. ಖಾಸಗಿ ವಲಯದ ಲಕ್ಷ್ಮಿ ವಿಲಾಸ್ ಬ್ಯಾಂಕ್ನ ಹಣಕಾಸು ಪರಿಸ್ಥಿತಿ ಹದಗೆಡುತ್ತಿದ್ದ ಬೆನ್ನಲ್ಲೇ ಈ ನಿರ್ಧಾರಕ್ಕೆ ಬರಲಾಗಿದೆ