ಜಾಗತಿಕ ಮಟ್ಟದಲ್ಲಿನ ನಕಾರಾತ್ಮಕ ಬೆಳವಣಿಗೆಯಿಂದಾಗಿ ದೇಶಿ ಷೇರುಪೇಟೆಗಳ ವಹಿವಾಟು ಚಂಚಲವಾಗಿತ್ತು. ಆ ಬಳಿಕ ಖರೀದಿ ವಹಿವಾಟಿಗೆ ಒಳಗಾಗಿ ಗಳಿಕೆಯಿಂದಿಗೆ ವಹಿವಾಟು ಅಂತ್ಯವಾಯಿತು. ಹೀಗಿದ್ದರೂ ಕಚ್ಚಾ ತೈಲ ದರ ಗರಿಷ್ಠ ಮಟ್ಟದಲ್ಲಿ ಇರುವುದು ಹಾಗೂ ರೂಪಾಯಿ ಮೌಲ್ಯ ಇಳಿಕೆ ಕಂಡಿರುವುದು ಸೂಚ್ಯಂಕದ ಏರಿಕೆಗೆ ಕಡಿವಾಣ ಹಾಕಿದವು ಎಂದು ಮೋತಿಲಾಲ್ ಓಸ್ವಾಲ್ ಹಣಕಾಸು ಸೇವೆಗಳ ಸಂಶೋಧನಾ ಮುಖ್ಯಸ್ಥ ಸಿದ್ಧಾರ್ಥ ಖೇಮ್ಕಾ ಹೇಳಿದ್ದಾರೆ.