<p><strong>ನವದೆಹಲಿ: </strong>ದೇಶದ ಷೇರುಪೇಟೆಯ ವಾರದ ವಹಿವಾಟಿನ ಮೆಲೆ ಹಣದುಬ್ಬರದ ಅಂಕಿಅಂಶ ಹಾಗೂ ಕೈಗಾರಿಕೆಗಳ ಬೆಳವಣಿಗೆಯು ಹೆಚ್ಚಿನ ಪ್ರಭಾವ ಬೀರಲಿವೆ ಎಂದು ತಜ್ಞರು ವಿಶ್ಲೇಷಣೆ ಮಾಡಿದ್ದಾರೆ. ಕಂಪನಿಗಳ ತ್ರೈಮಾಸಿಕ ಫಲಿತಾಂಶ ಮತ್ತು ಜಾಗತಿಕ ವಿದ್ಯಮಾನಗಳು ಸಹ ಸೂಚ್ಯಂಕದ ಚಲನೆಯ ದಿಕ್ಕನ್ನು ನಿರ್ಧರಿಸಲಿವೆ ಎಂದೂ ಹೇಳಿದ್ದಾರೆ.</p>.<p>ಅಮೆರಿಕ–ಚೀನಾ ಬಿಕ್ಕಟ್ಟು ಮತ್ತು ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವುದರಿಂದ ಅನಿಶ್ಚಿತ ಪರಿಸ್ಥಿತಿ ನಿರ್ಮಾಣವಾಗಿದೆ. ಷೇರುಪೇಟೆಯು ಚಂಚಲವಾಗಿಯೇ ಮುಂದುವರಿಯಲಿದೆ. ತ್ರೈಮಾಸಿಕ ಫಲಿತಾಂಶ ಇರುವುದರಿಂದ ನಿರ್ದಿಷ್ಟ ಷೇರುಗಳ ಬೆಲೆಯಲ್ಲಿ ಏರಿಳಿತ ಆಗಲಿದೆ ಎಂದು ಮೋತಿಲಾಲ್ ಓಸ್ವಾಲ್ ಫೈನಾನ್ಶಿಯಲ್ ಸರ್ವೀಸಸ್ನ ಸಂಶೋಧನಾ ಮುಖ್ಯಸ್ಥ ಸಿದ್ಧಾರ್ಥ ಖೇಮ್ಕಾ ಹೇಳಿದ್ದಾರೆ.</p>.<p>ಆರ್ಬಿಐ ಬಡ್ಡಿದರದಲ್ಲಿ ಯಥಾಸ್ಥಿತಿ ಕಾಯ್ದುಕೊಂಡಿದೆ. ಹೀಗಾಗಿ ಎಲ್ಲರ ದೃಷ್ಟಿಯೂ ಹಣದುಬ್ಬರ ಮತ್ತು ಕೈಗಾರಿಕಾ ಉತ್ಪಾದನಾ ಸೂಚ್ಯಂಕದ ಮೇಲೆ ಕೇಂದ್ರೀಕರಿಸಿದೆ. ಈ ವಾರವೇ ಅಂಕಿ–ಅಂಶಗಳು ಹೊರಬೀಳಲಿವೆ.</p>.<p><strong>ಫಲಿತಾಂಶ:</strong> ಬ್ಯಾಂಕ್ ಆಫ್ ಬರೋಡಾ, ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ, ಬಿಪಿಸಿಎಲ್, ಹೀರೊಮೊಟೊಕಾರ್ಪ್, ಎಂಆರ್ಎಫ್ ಮತ್ತು ಎನ್ಟಿಪಿಸಿ ಕಂಪನಿಗಳು ತಮ್ಮ ಹಣಕಾಸು ಸಾಧನೆ ಪ್ರಕಟಿಸಲಿವೆ.</p>.<p>ಈ ಎಲ್ಲಾ ವಿದ್ಯಮಾನಗಳ ಜತೆಗೆ, ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ದರದಲ್ಲಿ ಆಗಲಿರುವ ಏರಿಳಿತ, ಡಾಲರ್ ಎದುರು ರೂಪಾಯಿ ಮೌಲ್ಯ ವ್ಯತ್ಯಯವೂ ಹೂಡಿಕೆ ಚಟುವಟಿಕೆಯ ಮೇಲೆ ಪ್ರಭಾವ ಬೀರಲಿವೆ.</p>.<p><strong>ಹಿಂದಿನ ವಾರದ ವಹಿವಾಟು</strong></p>.<p>1.15%:ಬಿಎಸ್ಇ ಏರಿಕೆ</p>.<p>1.26%: ನಿಫ್ಟಿ ಏರಿಕೆ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ: </strong>ದೇಶದ ಷೇರುಪೇಟೆಯ ವಾರದ ವಹಿವಾಟಿನ ಮೆಲೆ ಹಣದುಬ್ಬರದ ಅಂಕಿಅಂಶ ಹಾಗೂ ಕೈಗಾರಿಕೆಗಳ ಬೆಳವಣಿಗೆಯು ಹೆಚ್ಚಿನ ಪ್ರಭಾವ ಬೀರಲಿವೆ ಎಂದು ತಜ್ಞರು ವಿಶ್ಲೇಷಣೆ ಮಾಡಿದ್ದಾರೆ. ಕಂಪನಿಗಳ ತ್ರೈಮಾಸಿಕ ಫಲಿತಾಂಶ ಮತ್ತು ಜಾಗತಿಕ ವಿದ್ಯಮಾನಗಳು ಸಹ ಸೂಚ್ಯಂಕದ ಚಲನೆಯ ದಿಕ್ಕನ್ನು ನಿರ್ಧರಿಸಲಿವೆ ಎಂದೂ ಹೇಳಿದ್ದಾರೆ.</p>.<p>ಅಮೆರಿಕ–ಚೀನಾ ಬಿಕ್ಕಟ್ಟು ಮತ್ತು ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವುದರಿಂದ ಅನಿಶ್ಚಿತ ಪರಿಸ್ಥಿತಿ ನಿರ್ಮಾಣವಾಗಿದೆ. ಷೇರುಪೇಟೆಯು ಚಂಚಲವಾಗಿಯೇ ಮುಂದುವರಿಯಲಿದೆ. ತ್ರೈಮಾಸಿಕ ಫಲಿತಾಂಶ ಇರುವುದರಿಂದ ನಿರ್ದಿಷ್ಟ ಷೇರುಗಳ ಬೆಲೆಯಲ್ಲಿ ಏರಿಳಿತ ಆಗಲಿದೆ ಎಂದು ಮೋತಿಲಾಲ್ ಓಸ್ವಾಲ್ ಫೈನಾನ್ಶಿಯಲ್ ಸರ್ವೀಸಸ್ನ ಸಂಶೋಧನಾ ಮುಖ್ಯಸ್ಥ ಸಿದ್ಧಾರ್ಥ ಖೇಮ್ಕಾ ಹೇಳಿದ್ದಾರೆ.</p>.<p>ಆರ್ಬಿಐ ಬಡ್ಡಿದರದಲ್ಲಿ ಯಥಾಸ್ಥಿತಿ ಕಾಯ್ದುಕೊಂಡಿದೆ. ಹೀಗಾಗಿ ಎಲ್ಲರ ದೃಷ್ಟಿಯೂ ಹಣದುಬ್ಬರ ಮತ್ತು ಕೈಗಾರಿಕಾ ಉತ್ಪಾದನಾ ಸೂಚ್ಯಂಕದ ಮೇಲೆ ಕೇಂದ್ರೀಕರಿಸಿದೆ. ಈ ವಾರವೇ ಅಂಕಿ–ಅಂಶಗಳು ಹೊರಬೀಳಲಿವೆ.</p>.<p><strong>ಫಲಿತಾಂಶ:</strong> ಬ್ಯಾಂಕ್ ಆಫ್ ಬರೋಡಾ, ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ, ಬಿಪಿಸಿಎಲ್, ಹೀರೊಮೊಟೊಕಾರ್ಪ್, ಎಂಆರ್ಎಫ್ ಮತ್ತು ಎನ್ಟಿಪಿಸಿ ಕಂಪನಿಗಳು ತಮ್ಮ ಹಣಕಾಸು ಸಾಧನೆ ಪ್ರಕಟಿಸಲಿವೆ.</p>.<p>ಈ ಎಲ್ಲಾ ವಿದ್ಯಮಾನಗಳ ಜತೆಗೆ, ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ದರದಲ್ಲಿ ಆಗಲಿರುವ ಏರಿಳಿತ, ಡಾಲರ್ ಎದುರು ರೂಪಾಯಿ ಮೌಲ್ಯ ವ್ಯತ್ಯಯವೂ ಹೂಡಿಕೆ ಚಟುವಟಿಕೆಯ ಮೇಲೆ ಪ್ರಭಾವ ಬೀರಲಿವೆ.</p>.<p><strong>ಹಿಂದಿನ ವಾರದ ವಹಿವಾಟು</strong></p>.<p>1.15%:ಬಿಎಸ್ಇ ಏರಿಕೆ</p>.<p>1.26%: ನಿಫ್ಟಿ ಏರಿಕೆ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>